ETV Bharat / bharat

ಸುಪ್ರೀಂಕೋರ್ಟ್​​ ಸ್ಪೀಕರ್​ ಘನತೆ ಎತ್ತಿ ಹಿಡಿದಿದೆ: ಅಭಿಷೇಕ್ ಮನು ಸಿಂಘ್ವಿ

ಸುಪ್ರೀಂಕೋರ್ಟ್​ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದ್ದು, ಅದರಲ್ಲಿ ಸ್ಪೀಕರ್​ ಗೌರವ ಎತ್ತಿ ಹಿಡಿದಿದೆ ಎಂದು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.

author img

By

Published : Jul 17, 2019, 5:15 PM IST

ಅಭಿಷೇಕ್ ಮನು ಸಿಂಘ್ವಿ

ನವದೆಹಲಿ: ಕರ್ನಾಟಕದ 15 ಶಾಸಕರು ರಾಜೀನಾಮೆ ಅಂಗೀಕರಿಸುವಂತೆ ಸ್ಪೀಕರ್​ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ನ ಮೂವರು ಸದಸ್ಯರ ಪೀಠ ಸ್ಪೀಕರ್​ ಸಾರ್ವಬೌಮ್ಯತೆಯನ್ನ ಎತ್ತಿ ಹಿಡಿದಿದೆ ಎಂದು ಸ್ಪೀಕರ್​ ಪರ ವಾದ ಮಂಡನೆ ಮಾಡಿದ ಅಭಿಷೇಕ್​ ಮನು ಸಿಂಘ್ವಿ ಹೇಳಿದ್ದಾರೆ.

ಅಭಿಷೇಕ್ ಮನು ಸಿಂಘ್ವಿ ಸಂತಸ

ಈ ತೀರ್ಪಿನ ಬಗ್ಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ತಾನು ಮಧ್ಯಸ್ಥಿಕೆ ವಹಿಸುವುದಿಲ್ಲವೆಂದು ಹೇಳಿರುವ ಸುಪ್ರೀಂಕೋರ್ಟ್​​ ಸ್ಪೀಕರ್ ಹುದ್ದೆಯ ಘನತೆ ಎತ್ತಿ ಹಿಡಿದಿದೆ. ಸುಪ್ರೀಂ ಕೋರ್ಟ್​ನ ಈ ತೀರ್ಪಿನಿಂದಾಗಿ ಅತೃಪ್ತ ಶಾಸಕರು ಹಾಜರಾಗುವುದು ಬಿಡುವುದು ಅವರ ವಿವೇಚನೆಗೆ ಬಿಟ್ಟ ವಿಚಾರ. ಅದರಲ್ಲಿ ನಾನು ಭಾಗಿಯಾಗಲು ಸಾಧ್ಯವಿಲ್ಲ. ಜತೆಗೆ ವಿಪ್​ಗೆ ನಾನು ಯಾವುದೇ ರೀತಿಯ ಮಾಹಿತಿ ನೀಡುವುದಿಲ್ಲ ಎಂದು ಇದೇ ವೇಳೆ ತಿಳಿಸಿದರು. ಆದರೆ ಸುಪ್ರೀಂಕೋರ್ಟ್​ ತೆಗೆದುಕೊಂಡ ನಿರ್ಧಾರ ಸರಿಯಾಗಿದ್ದು, ಅದರಲ್ಲಿ ನಾವು ಗೆಲುವು ದಾಖಲು ಮಾಡಿದ್ದೇವೆ ಎಂದಿದ್ದಾರೆ.

ನಾಳೆ ವಿಶ್ವಾಸಮತಯಾಚನೆ ನಡೆಯಬಹುದು. ಅದು ಮುಂದೂಡಲುಬಹುದು. ಅದು ಸ್ಪೀಕರ್​ ನಿರ್ಧಾರ ಹಾಗೂ ವಿವೇಚನೆಗೆ ಬಿಟ್ಟ ವಿಚಾರ ಎಂದಿರುವ ಅಭಿಷೇಕ್​ ಮನು ಸಿಂಘ್ವಿ, ಅತೃಪ್ತ ಶಾಸಕರು ಸದನಕ್ಕೆ ಬರುವಂತೆ ಒತ್ತಡ ಹಾಕುವಂತಿಲ್ಲ ಎಂದು ತ್ರಿ ಸದಸ್ಯ ಪೀಠ ಹೇಳಿದೆ. ಹೀಗಾಗಿ ಎಲ್ಲರೂ ಸಂವಿಧಾನದ ಆಶಯಗಳನ್ನ ಕಾಪಾಡಬೇಕು ಎಂದು ಅವರು ತಿಳಿಸಿದರು.

ನವದೆಹಲಿ: ಕರ್ನಾಟಕದ 15 ಶಾಸಕರು ರಾಜೀನಾಮೆ ಅಂಗೀಕರಿಸುವಂತೆ ಸ್ಪೀಕರ್​ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ನ ಮೂವರು ಸದಸ್ಯರ ಪೀಠ ಸ್ಪೀಕರ್​ ಸಾರ್ವಬೌಮ್ಯತೆಯನ್ನ ಎತ್ತಿ ಹಿಡಿದಿದೆ ಎಂದು ಸ್ಪೀಕರ್​ ಪರ ವಾದ ಮಂಡನೆ ಮಾಡಿದ ಅಭಿಷೇಕ್​ ಮನು ಸಿಂಘ್ವಿ ಹೇಳಿದ್ದಾರೆ.

ಅಭಿಷೇಕ್ ಮನು ಸಿಂಘ್ವಿ ಸಂತಸ

ಈ ತೀರ್ಪಿನ ಬಗ್ಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ತಾನು ಮಧ್ಯಸ್ಥಿಕೆ ವಹಿಸುವುದಿಲ್ಲವೆಂದು ಹೇಳಿರುವ ಸುಪ್ರೀಂಕೋರ್ಟ್​​ ಸ್ಪೀಕರ್ ಹುದ್ದೆಯ ಘನತೆ ಎತ್ತಿ ಹಿಡಿದಿದೆ. ಸುಪ್ರೀಂ ಕೋರ್ಟ್​ನ ಈ ತೀರ್ಪಿನಿಂದಾಗಿ ಅತೃಪ್ತ ಶಾಸಕರು ಹಾಜರಾಗುವುದು ಬಿಡುವುದು ಅವರ ವಿವೇಚನೆಗೆ ಬಿಟ್ಟ ವಿಚಾರ. ಅದರಲ್ಲಿ ನಾನು ಭಾಗಿಯಾಗಲು ಸಾಧ್ಯವಿಲ್ಲ. ಜತೆಗೆ ವಿಪ್​ಗೆ ನಾನು ಯಾವುದೇ ರೀತಿಯ ಮಾಹಿತಿ ನೀಡುವುದಿಲ್ಲ ಎಂದು ಇದೇ ವೇಳೆ ತಿಳಿಸಿದರು. ಆದರೆ ಸುಪ್ರೀಂಕೋರ್ಟ್​ ತೆಗೆದುಕೊಂಡ ನಿರ್ಧಾರ ಸರಿಯಾಗಿದ್ದು, ಅದರಲ್ಲಿ ನಾವು ಗೆಲುವು ದಾಖಲು ಮಾಡಿದ್ದೇವೆ ಎಂದಿದ್ದಾರೆ.

ನಾಳೆ ವಿಶ್ವಾಸಮತಯಾಚನೆ ನಡೆಯಬಹುದು. ಅದು ಮುಂದೂಡಲುಬಹುದು. ಅದು ಸ್ಪೀಕರ್​ ನಿರ್ಧಾರ ಹಾಗೂ ವಿವೇಚನೆಗೆ ಬಿಟ್ಟ ವಿಚಾರ ಎಂದಿರುವ ಅಭಿಷೇಕ್​ ಮನು ಸಿಂಘ್ವಿ, ಅತೃಪ್ತ ಶಾಸಕರು ಸದನಕ್ಕೆ ಬರುವಂತೆ ಒತ್ತಡ ಹಾಕುವಂತಿಲ್ಲ ಎಂದು ತ್ರಿ ಸದಸ್ಯ ಪೀಠ ಹೇಳಿದೆ. ಹೀಗಾಗಿ ಎಲ್ಲರೂ ಸಂವಿಧಾನದ ಆಶಯಗಳನ್ನ ಕಾಪಾಡಬೇಕು ಎಂದು ಅವರು ತಿಳಿಸಿದರು.

Intro:Body:

ನವದೆಹಲಿ: ಅತೃಪ್ತ ಶಾಸಕರು ಸುಪ್ರೀಂಕೋರ್ಟ್​ಗೆ ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ಮುಕ್ತಾಯಗೊಂಡು ಇವತ್ತು ತೀರ್ಪು ಪ್ರಕಟಗೊಂಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸ್ಪೀಕರ್ ಪರ ವಾದ ಮಂಡಿಸಿರುವ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮಾತನಾಡಿದರು. 



ಈ ಪ್ರಕರಣದಲ್ಲಿ ತಾನು ಮಧ್ಯಸ್ಥಿಕೆ ವಹಿಸುವುದಿಲ್ಲವೆಂದು ಹೇಳಿರುವ ಸುಪ್ರೀಂಕೋರ್ಟ್​​ ಸ್ಪೀಕರ್ ಹುದ್ದೆಯ ಘನತೆ ಎತ್ತಿ ಹಿಡಿದಿದೆ. ಸುಪ್ರೀಂ ಕೋರ್ಟ್​ನ ಈ ತೀರ್ಪಿನಿಂದಾಗಿ ಅತೃಪ್ತ ಶಾಸಕರು ಹಾಜರಾಗುವುದು ಬಿಡುವುದು ಅವರ ವಿವೇಚನೆಗೆ ಬಿಟ್ಟ ವಿಚಾರ.  ಅದರಲ್ಲಿ ನಾನು ಭಾಗಿಯಾಗಲು ಸಾಧ್ಯವಿಲ್ಲ. ಜತೆಗೆ ವಿಪ್​ಗೆ ನಾನು ಯಾವುದೇ ರೀತಿಯ ಮಾಹಿತಿ ನೀಡುವುದಿಲ್ಲ ಎಂದು ತಿಳಿಸಿದರು. ಆದರೆ ಸುಪ್ರೀಂಕೋರ್ಟ್​ ತೆಗೆದುಕೊಂಡ ನಿರ್ಧಾರ ಸರಿಯಾಗಿದ್ದು, ಅದರಲ್ಲಿ ನಾವು ಗೆಲುವು ದಾಖಲು ಮಾಡಿದ್ದೇವೆ ಎಂದಿದ್ದಾರೆ. 



ನಾಳೆ ವಿಶ್ವಾಸಮತಯಾಚನೆ ನಡೆಯಬಹುದು. ಅದು ಮುಂದೂಡಲುಬಹುದು. ಆದರೆ  ಅತೃಪ್ತ ಶಾಸಕರು ಸದನಕ್ಕೆ ಬರುವಂತೆ ಒತ್ತಡ ಹಾಕುವಂತಿಲ್ಲ, ಎಲ್ಲರೂ ಸಂವಿಧಾನವನ್ನು  ಕಾಪಾಡಬೇಕು ಎಂದು ಅವರು ತಿಳಿಸಿದರು. 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.