ETV Bharat / bharat

ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟದಲ್ಲಿ ಮತ್ತಿಬ್ಬರು ಬಲಿ: ಗುವಾಹತಿಯಲ್ಲಿ ಕರ್ಫ್ಯೂ ಸಡಿಲ - death in Citizenship law protest

ಪೌರತ್ವ ತಿದ್ದುಪಡಿ ಕಾನೂನು ಜಾರಿ ಹಿನ್ನಲೆ ಅಸ್ಸೋಂನಲ್ಲಿ ಪ್ರತಿಭಟನೆ ಹಿನ್ನಲೆ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ. ಇದೇ ವೇಳೆ ಸಿಎಬಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಕಡಿಮೆಯಾಗಿದ್ದು, ಪರಿಸ್ಥಿತಿ ಸದ್ಯ ಸುಧಾರಿಸಿದೆ. ಅಸ್ಸೋಂನ ರಾಜಧಾನಿ ಸೇರಿದಂತೆ ಹಲವು ಭಾಗಗಳಲ್ಲಿ ಕರ್ಫ್ಯೂ ಸಡಿಲಗೊಂಡಿದೆ. ಈ ನಡುವೆ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಹಾರಿಸಿದ್ದ ಗುಂಡು ತಗುಲಿ ಗಾಯಗೊಂಡಿದ್ದ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.

Assam CAA protest: Curfew relaxed
ಪೌರತ್ವ ಕಾನೂನು ಪ್ರತಿಭಟನೆಯಲ್ಲಿ ಮತ್ತೆರೆಡು ಸಾವು: ಗುವಾಹಟಿಯಲ್ಲಿ ಕರ್ಫ್ಯೂ ಸಡಿಲ
author img

By

Published : Dec 15, 2019, 8:10 PM IST

ಗುವಾಹತಿ(ಅಸ್ಸೋಂ): ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಬಿ ವಿರುದ್ಧದ ಪ್ರತಿಭಟನೆ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹಾರಿಸಿದ್ದ ಗುಂಡು ತಗುಲಿ ಗಾಯಗೊಂಡಿದ್ದ ಇಬ್ಬರು ಪ್ರತಿಭಟನಾಕಾರರು ಇಂದು ಮೃತಪಟ್ಟಿದ್ದಾರೆ.

ಇದರಿಂದಾಗಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ. ಈ ಮಧ್ಯೆ ಸಿಎಬಿ ವಿರುದ್ಧ ಪರಿಸ್ಥಿತಿ ಸದ್ಯ ಸುಧಾರಿಸಿದ್ದು, ರಾಜ್ಯ ರಾಜಧಾನಿ ಮತ್ತು ಅಸ್ಸೋಂನ ಹಲವು ಭಾಗಗಳಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ.

ಈ ವಾರದ ಆರಂಭದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಸುಮಾರು 26 ಜನರಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಸದ್ಯ ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಸ್ಸೋಂ ಪೊಲೀಸ್ ಮುಖ್ಯಸ್ಥ ಬಿ.ಜೆ. ಮಂತಾ ತಿಳಿಸಿದ್ದಾರೆ.

ಗುವಾಹತಿ(ಅಸ್ಸೋಂ): ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಬಿ ವಿರುದ್ಧದ ಪ್ರತಿಭಟನೆ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹಾರಿಸಿದ್ದ ಗುಂಡು ತಗುಲಿ ಗಾಯಗೊಂಡಿದ್ದ ಇಬ್ಬರು ಪ್ರತಿಭಟನಾಕಾರರು ಇಂದು ಮೃತಪಟ್ಟಿದ್ದಾರೆ.

ಇದರಿಂದಾಗಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ. ಈ ಮಧ್ಯೆ ಸಿಎಬಿ ವಿರುದ್ಧ ಪರಿಸ್ಥಿತಿ ಸದ್ಯ ಸುಧಾರಿಸಿದ್ದು, ರಾಜ್ಯ ರಾಜಧಾನಿ ಮತ್ತು ಅಸ್ಸೋಂನ ಹಲವು ಭಾಗಗಳಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ.

ಈ ವಾರದ ಆರಂಭದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಸುಮಾರು 26 ಜನರಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಸದ್ಯ ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಸ್ಸೋಂ ಪೊಲೀಸ್ ಮುಖ್ಯಸ್ಥ ಬಿ.ಜೆ. ಮಂತಾ ತಿಳಿಸಿದ್ದಾರೆ.

Intro:Body:

national


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.