ETV Bharat / bharat

ಎಂಆರ್‌ಪಿ ದರದಲ್ಲಿ ಮದ್ಯ ಮಾರಲು ಹೇಳಿದ್ದಕ್ಕೆ ವೈನ್ ಶಾಪ್‌ ಸಿಬ್ಬಂದಿಯಿಂದ ಯುವಕರ ಮೇಲೆ ಹಲ್ಲೆ.. - ಬೈಲಹೊಂಗಲದಲ್ಲಿ ವೈನ್ ಶಾಪ್ ಸಿಬ್ಬಂದಿಗಳಿಂದ ಯುವಕರ ಮೇಲೆ ಹಲ್ಲೆ

ನಿಯಮ ಉಲ್ಲಂಘಿಸಿ ಎಂಆರ್​ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ವೈನ್​ ಶಾಪ್ ಸಿಬ್ಬಂದಿಗಳು ಯುವಕರಿಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ನಡೆದಿದೆ.

Assault on youth in Bailahongala
ಬೈಲಹೊಂಗಲದಲ್ಲಿ ಯುವಕರ ಮೇಲೆ ಹಲ್ಲೆ
author img

By

Published : May 12, 2020, 10:23 AM IST

ಬೈಲಹೊಂಗಲ (ಬೆಳಗಾವಿ) : ಎಂಆರ್​ಪಿ ಬೆಲೆಗೆ ಮದ್ಯ ಮಾರಾಟ ಮಾಡುವಂತೆ ಹೇಳಿದ ಯುವಕರಿಬ್ಬರ ಮೇಲೆ ವೈನ್ ಶಾಪ್ ಸಿಬ್ಬಂದಿ ಮಾರಣಾಂತಿಕ ಹಲ್ಲೆ‌ ನಡೆಸಿದ ಘಟನೆ ನಡೆದಿದೆ‌.

ತಾಲೂಕಿನ ದೊಡವಾಡ ಗ್ರಾಮದ ಕೊಪ್ಪದ ಅಗಸಿ ಬಳಿಯಿರುವ ಶ್ರೀದೇವಿ ವೈನ್ ಶಾಪ್ ಸಿಬ್ಬಂದಿ ಅದೇ ಗ್ರಾಮದ ನಾಗಪ್ಪ ಬಾರಿಗಿಡದ ಹಾಗೂ ಧರೆಪ್ಪ ಕುರುಬರ ಎಂಬುವರ ಮೇಲೆ‌ ಹಲ್ಲೆ ನಡೆಸಿದ್ದಾರೆ. ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ ನಾಗಪ್ಪ ಬಾರಿಗಿಡದ ಎಂಬಾತನ ಸ್ಥಿತಿ ಗಂಭೀರವಾಗಿದೆ. ದೊಡವಾಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೊದಲು ಚಿಕಿತ್ಸೆ ನೀಡಲಾಯಿತು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗೆಯೇ ಘಟನೆ ನಡೆದರೂ ಪಿಎಸ್ಐ ಹಾಗೂ ಪೊಲೀಸ್​ ಸಿಬ್ಬಂದಿ ವೈನ್ ಶಾಪ್ ಮಾಲೀಕರ ಪರವಾಗಿಯೇ ನಿಂತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದರು. ಈವರೆಗೂ ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೈಲಹೊಂಗಲದಲ್ಲಿ ಯುವಕರ ಮೇಲೆ ಹಲ್ಲೆ..

ಹಲ್ಲೆ ನಡೆಸಿದ ಸುದ್ದಿ ತಿಳಿಯುತ್ತಿದ್ದಂತೆ ಹಲ್ಲೆಗೊಳಗಾದ ಯುವಕರ ಸಂಬಂಧಿಕರು ಹಾಗೂ ಗ್ರಾಮಸ್ಥರು ವೈನ್ ಶಾಪ್​ಗೆ ಮುತ್ತಿಗೆ ಹಾಕಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಬಾರ್ ಬಳಿ ಜಮಾಯಿಸಿದ್ದ ಜನರನ್ನು ಚದುರಿಸಿ ಬಾರ್ ಸಿಬ್ಬಂದಿಯನ್ನು ಪೊಲೀಸ್​ ಠಾಣೆಗೆ ಕರೆದೊಯ್ದಿದ್ದಾರೆ.

ಬಳಿಕ ಠಾಣೆ ಬಳಿಯೂ ಜಮಾಯಿಸಿದ ಸಾರ್ವಜನಿಕರು ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಜೊತೆಗೆ ಎಂಆರ್​ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟ ಅಬಕಾರಿ ಅಧಿಕಾರಿಗಳ ವಿರುದ್ಧವೂ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಬೈಲಹೊಂಗಲ (ಬೆಳಗಾವಿ) : ಎಂಆರ್​ಪಿ ಬೆಲೆಗೆ ಮದ್ಯ ಮಾರಾಟ ಮಾಡುವಂತೆ ಹೇಳಿದ ಯುವಕರಿಬ್ಬರ ಮೇಲೆ ವೈನ್ ಶಾಪ್ ಸಿಬ್ಬಂದಿ ಮಾರಣಾಂತಿಕ ಹಲ್ಲೆ‌ ನಡೆಸಿದ ಘಟನೆ ನಡೆದಿದೆ‌.

ತಾಲೂಕಿನ ದೊಡವಾಡ ಗ್ರಾಮದ ಕೊಪ್ಪದ ಅಗಸಿ ಬಳಿಯಿರುವ ಶ್ರೀದೇವಿ ವೈನ್ ಶಾಪ್ ಸಿಬ್ಬಂದಿ ಅದೇ ಗ್ರಾಮದ ನಾಗಪ್ಪ ಬಾರಿಗಿಡದ ಹಾಗೂ ಧರೆಪ್ಪ ಕುರುಬರ ಎಂಬುವರ ಮೇಲೆ‌ ಹಲ್ಲೆ ನಡೆಸಿದ್ದಾರೆ. ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ ನಾಗಪ್ಪ ಬಾರಿಗಿಡದ ಎಂಬಾತನ ಸ್ಥಿತಿ ಗಂಭೀರವಾಗಿದೆ. ದೊಡವಾಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೊದಲು ಚಿಕಿತ್ಸೆ ನೀಡಲಾಯಿತು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗೆಯೇ ಘಟನೆ ನಡೆದರೂ ಪಿಎಸ್ಐ ಹಾಗೂ ಪೊಲೀಸ್​ ಸಿಬ್ಬಂದಿ ವೈನ್ ಶಾಪ್ ಮಾಲೀಕರ ಪರವಾಗಿಯೇ ನಿಂತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದರು. ಈವರೆಗೂ ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೈಲಹೊಂಗಲದಲ್ಲಿ ಯುವಕರ ಮೇಲೆ ಹಲ್ಲೆ..

ಹಲ್ಲೆ ನಡೆಸಿದ ಸುದ್ದಿ ತಿಳಿಯುತ್ತಿದ್ದಂತೆ ಹಲ್ಲೆಗೊಳಗಾದ ಯುವಕರ ಸಂಬಂಧಿಕರು ಹಾಗೂ ಗ್ರಾಮಸ್ಥರು ವೈನ್ ಶಾಪ್​ಗೆ ಮುತ್ತಿಗೆ ಹಾಕಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಬಾರ್ ಬಳಿ ಜಮಾಯಿಸಿದ್ದ ಜನರನ್ನು ಚದುರಿಸಿ ಬಾರ್ ಸಿಬ್ಬಂದಿಯನ್ನು ಪೊಲೀಸ್​ ಠಾಣೆಗೆ ಕರೆದೊಯ್ದಿದ್ದಾರೆ.

ಬಳಿಕ ಠಾಣೆ ಬಳಿಯೂ ಜಮಾಯಿಸಿದ ಸಾರ್ವಜನಿಕರು ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಜೊತೆಗೆ ಎಂಆರ್​ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟ ಅಬಕಾರಿ ಅಧಿಕಾರಿಗಳ ವಿರುದ್ಧವೂ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.