ETV Bharat / bharat

ಇದು ಸಣ್ಣ ಸಾಧನೆಯಲ್ಲ, ದೇಶಕ್ಕೆ ನಿಮ್ಮ ಬಗ್ಗೆ ಹೆಮ್ಮೆ: ಇಸ್ರೋ ವಿಜ್ಞಾನಿಗಳ ಬೆನ್ನು ತಟ್ಟಿದ ನಮೋ!

ಚಂದ್ರಯಾನ-2 ವಿಕ್ರಂ ಲ್ಯಾಂಡರ್​​ನಿಂದ ಸಂಪರ್ಕ ಕಡಿತಗೊಳ್ಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ಇಸ್ರೋ ವಿಜ್ಞಾನಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಕೆ ಶಿವನ್​ ಬೆನ್ನು ತಟ್ಟಿ ನಿಮ್ಮ ಸಾಧನೆ ಸಣ್ಣದಲ್ಲ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.

author img

By

Published : Sep 7, 2019, 3:06 AM IST

Updated : Sep 7, 2019, 6:39 AM IST

ಇಸ್ರೋ ವಿಜ್ಞಾನಿಗಳ ಬೆನ್ನು ತಟ್ಟಿದ ಮೋದಿ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ಬಹುನಿರೀಕ್ಷಿತ ಚಂದ್ರಯಾನ 2 ಕೊನೆ ಕ್ಷಣದಲ್ಲಿ ಸಂಪರ್ಕ‌ ಕಡಿತಗೊಂಡಿದೆ. 2.1 ಕಿಲೋ ಮೀಟರ್‌ನ ನಂತರ ವಿಕ್ರಂ ಲ್ಯಾಂಡರ್​​ನಿಂದ ಇಸ್ರೋ ವಿಜ್ಞಾನಿಗಳಿಗೆ ಯಾವುದೇ ಸಿಗ್ನಲ್​ ಸಿಗಲಿಲ್ಲ ಎಂಬ ಮಾತನ್ನು ಇಸ್ರೋ ಅಧ್ಯಕ್ಷ ಕೆ.ಸಿವನ್ ಪ್ರಕಟಿಸಿದರು. ಇದಕ್ಕೂ ಮುನ್ನ ಅವರು ಪ್ರಧಾನಿಗೆ ಸಂಪೂರ್ಣ ವಿವರಣೆ ನೀಡಿದ್ದರು.

ಈ ವೇಳೆ ಇಸ್ರೋ ಮಹತ್ವಾಕಾಂಕ್ಷೆ ಯೋಜನೆ ವೀಕ್ಷಣೆ ಮಾಡಲು ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಸ್ರೋ ವಿಜ್ಞಾನಿಗಳಿಗೆ ಬೆನ್ನು ತಟ್ಟಿ ಧೈರ್ಯ ತುಂಬಿದರು. ಜೀವನದಲ್ಲಿ ಏಳು-ಬೀಳು ಸಹಜ. ನಿವೆಲ್ಲರೂ ವಿಜ್ಞಾನ ಕೇತ್ರ ಹಾಗೂ ದೇಶಕ್ಕೆ ಅತಿದೊಡ್ಡ ಕೊಡುಗೆ ನೀಡಿದ್ದೀರಿ. ನಿಮ್ಮ ಸಾಧನೆ ಸಣ್ಣದಲ್ಲ. ಇಡೀ ದೇಶವೇ ನಿಮ್ಮ ಬಗ್ಗೆ ಹೆಮ್ಮೆ ಪಡುತ್ತಿದೆ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ. ನನ್ನ ಕಡೆಯಿಂದ ಎಲ್ಲ ವಿಜ್ಞಾನಿಗಳಿಗೂ ಅಭಿನಂದನೆಗಳು. ನಿಮ್ಮ ಮುಂದಿನ ಕಾರ್ಯಕ್ಕೆ ನಾವು ಸಾಥ್​ ನೀಡಲಿದ್ದೇವೆ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ ಎಂದು ತಿಳಿಸಿದರು.

ಇಸ್ರೋ ವಿಜ್ಞಾನಿಗಳ ಬೆನ್ನು ತಟ್ಟಿದ ಮೋದಿ

ಇದಾದ ಬಳಿಕ ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ,ನಮ್ಮ ವಿಜ್ಞಾನಿಗಳ ಬಗ್ಗೆ ಭಾರತ ಹೆಮ್ಮೆ ಪಡುತ್ತಿದೆ. ತಮ್ಮ ಕೈಯಿಂದ ಸಾಧ್ಯವಾದಷ್ಟು ಶ್ರಮವಹಿಸಿ ಕೆಲಸ ಮಾಡಿ, ಭಾರತವೇ ಹೆಮ್ಮೆ ಪಡುವಂತೆ ಮಾಡಿದ್ದೀರಿ. ನಾನು ಅವರಿಗೆ ಅಭಿನಂದನೆ ಸಲ್ಲಿಕೆ ಮಾಡುವೆ ಎಂದು ಬರೆದುಕೊಂಡಿದ್ದಾರೆ.

  • India is proud of our scientists! They’ve given their best and have always made India proud. These are moments to be courageous, and courageous we will be!

    Chairman @isro gave updates on Chandrayaan-2. We remain hopeful and will continue working hard on our space programme.

    — Narendra Modi (@narendramodi) September 6, 2019 " class="align-text-top noRightClick twitterSection" data=" ">

ಚಂದ್ರನ ಅಂಗಳಕ್ಕೆ ಇಳಿಯಲು ಕೆಲ ನಿಮಿಷ ಬಾಕಿ ಇರುವಾಗಲೇ ವಿಕ್ರಂ ಲ್ಯಾಂಡರ್​ನಿಂದ ಯಾವುದೇ ರೀತಿಯ ಸಂಪರ್ಕ ಸಿಗಲಿಲ್ಲ. ಹೀಗಾಗಿ ಇಸ್ರೋ ಸಂಸ್ಥೆ ಮುಖ್ಯಸ್ಥ ಕೆ. ಸಿವನ್​ ಇದರ ಬಗ್ಗೆ ಮಾಹಿತಿ ನೀಡಿ, ಡೇಟಾ ಮರುಪರಿಶೀಲನೆ ನಡೆಸುವುದಾಗಿ ತಿಳಿಸಿದರು.

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ಬಹುನಿರೀಕ್ಷಿತ ಚಂದ್ರಯಾನ 2 ಕೊನೆ ಕ್ಷಣದಲ್ಲಿ ಸಂಪರ್ಕ‌ ಕಡಿತಗೊಂಡಿದೆ. 2.1 ಕಿಲೋ ಮೀಟರ್‌ನ ನಂತರ ವಿಕ್ರಂ ಲ್ಯಾಂಡರ್​​ನಿಂದ ಇಸ್ರೋ ವಿಜ್ಞಾನಿಗಳಿಗೆ ಯಾವುದೇ ಸಿಗ್ನಲ್​ ಸಿಗಲಿಲ್ಲ ಎಂಬ ಮಾತನ್ನು ಇಸ್ರೋ ಅಧ್ಯಕ್ಷ ಕೆ.ಸಿವನ್ ಪ್ರಕಟಿಸಿದರು. ಇದಕ್ಕೂ ಮುನ್ನ ಅವರು ಪ್ರಧಾನಿಗೆ ಸಂಪೂರ್ಣ ವಿವರಣೆ ನೀಡಿದ್ದರು.

ಈ ವೇಳೆ ಇಸ್ರೋ ಮಹತ್ವಾಕಾಂಕ್ಷೆ ಯೋಜನೆ ವೀಕ್ಷಣೆ ಮಾಡಲು ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಸ್ರೋ ವಿಜ್ಞಾನಿಗಳಿಗೆ ಬೆನ್ನು ತಟ್ಟಿ ಧೈರ್ಯ ತುಂಬಿದರು. ಜೀವನದಲ್ಲಿ ಏಳು-ಬೀಳು ಸಹಜ. ನಿವೆಲ್ಲರೂ ವಿಜ್ಞಾನ ಕೇತ್ರ ಹಾಗೂ ದೇಶಕ್ಕೆ ಅತಿದೊಡ್ಡ ಕೊಡುಗೆ ನೀಡಿದ್ದೀರಿ. ನಿಮ್ಮ ಸಾಧನೆ ಸಣ್ಣದಲ್ಲ. ಇಡೀ ದೇಶವೇ ನಿಮ್ಮ ಬಗ್ಗೆ ಹೆಮ್ಮೆ ಪಡುತ್ತಿದೆ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ. ನನ್ನ ಕಡೆಯಿಂದ ಎಲ್ಲ ವಿಜ್ಞಾನಿಗಳಿಗೂ ಅಭಿನಂದನೆಗಳು. ನಿಮ್ಮ ಮುಂದಿನ ಕಾರ್ಯಕ್ಕೆ ನಾವು ಸಾಥ್​ ನೀಡಲಿದ್ದೇವೆ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ ಎಂದು ತಿಳಿಸಿದರು.

ಇಸ್ರೋ ವಿಜ್ಞಾನಿಗಳ ಬೆನ್ನು ತಟ್ಟಿದ ಮೋದಿ

ಇದಾದ ಬಳಿಕ ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ,ನಮ್ಮ ವಿಜ್ಞಾನಿಗಳ ಬಗ್ಗೆ ಭಾರತ ಹೆಮ್ಮೆ ಪಡುತ್ತಿದೆ. ತಮ್ಮ ಕೈಯಿಂದ ಸಾಧ್ಯವಾದಷ್ಟು ಶ್ರಮವಹಿಸಿ ಕೆಲಸ ಮಾಡಿ, ಭಾರತವೇ ಹೆಮ್ಮೆ ಪಡುವಂತೆ ಮಾಡಿದ್ದೀರಿ. ನಾನು ಅವರಿಗೆ ಅಭಿನಂದನೆ ಸಲ್ಲಿಕೆ ಮಾಡುವೆ ಎಂದು ಬರೆದುಕೊಂಡಿದ್ದಾರೆ.

  • India is proud of our scientists! They’ve given their best and have always made India proud. These are moments to be courageous, and courageous we will be!

    Chairman @isro gave updates on Chandrayaan-2. We remain hopeful and will continue working hard on our space programme.

    — Narendra Modi (@narendramodi) September 6, 2019 " class="align-text-top noRightClick twitterSection" data=" ">

ಚಂದ್ರನ ಅಂಗಳಕ್ಕೆ ಇಳಿಯಲು ಕೆಲ ನಿಮಿಷ ಬಾಕಿ ಇರುವಾಗಲೇ ವಿಕ್ರಂ ಲ್ಯಾಂಡರ್​ನಿಂದ ಯಾವುದೇ ರೀತಿಯ ಸಂಪರ್ಕ ಸಿಗಲಿಲ್ಲ. ಹೀಗಾಗಿ ಇಸ್ರೋ ಸಂಸ್ಥೆ ಮುಖ್ಯಸ್ಥ ಕೆ. ಸಿವನ್​ ಇದರ ಬಗ್ಗೆ ಮಾಹಿತಿ ನೀಡಿ, ಡೇಟಾ ಮರುಪರಿಶೀಲನೆ ನಡೆಸುವುದಾಗಿ ತಿಳಿಸಿದರು.

Intro:Body:

ಇದು ಸಣ್ಣ ಸಾಧನೆಯಲ್ಲ, ದೇಶಕ್ಕೆ ನಿಮ್ಮ ಬಗ್ಗೆ ಹೆಮ್ಮೆ; ಇಸ್ರೋ ವಿಜ್ಞಾನಿಗಳ ಬೆನ್ನು ತಟ್ಟಿದ ನಮೋ! 

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ಬಹುನಿರೀಕ್ಷಿತ ಚಂದ್ರಯಾನ 2 ಕೊನೆ ಕ್ಷಣದಲ್ಲಿ ಸಂಪರ್ಕ‌ ಕಡಿತಗೊಂಡಿದೆ. 2.1 ಕಿಲೋ ಮೀಟರ್‌ನ ನಂತರ ವಿಕ್ರಂ ಲ್ಯಾಂಡರ್​​ನಿಂದ ಇಸ್ರೋ ವಿಜ್ಞಾನಿಗಳಿಗೆ ಯಾವುದೇ ಸಿಗ್ನಲ್​ ಸಿಗಲಿಲ್ಲ ಎಂಬ ಮಾತನ್ನು ಇಸ್ರೋ ಅಧ್ಯಕ್ಷ ಕೆ.ಸಿವನ್ ಹೇಳಿದರು. 



ಈ ವೇಳೆ ಇಸ್ರೋ ಮಹತ್ವಾಕಾಂಕ್ಷೆ ಯೋಜನೆ ವೀಕ್ಷಣೆ ಮಾಡಲು ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಸ್ರೋ ವಿಜ್ಞಾನಿಗಳಿಗೆ ಬೆನ್ನು ತಟ್ಟಿ ಧೈರ್ಯ ತುಂಬಿದರು. ಜೀವನದಲ್ಲಿ ಏಳು-ಬೀಳು ಸಹಜ.ನಿವೆಲ್ಲೂ ವಿಜ್ಞಾನ ಕೇತ್ರ ಹಾಗೂ ದೇಶಕ್ಕೆ ಅತಿದೊಡ್ಡ ಕೊಡುಗೆ ನೀಡಿದ್ದೀರಿ. ನಿಮ್ಮ ಸಾಧನೆ ಸಣ್ಣದಲ್ಲ. ಇಡೀ ದೇಶವೇ ನಿಮ್ಮ ಬಗ್ಗೆ ಹೆಮ್ಮೆ ಪಡುತ್ತಿದೆ. ನಿಮ್ಮೆಲ್ಲರಿಗೂ ಒಳ್ಳೆಯದಾಗಲ್ಲ. ನನ್ನ ಕಡೆಯಿಂದ ಎಲ್ಲ ವಿಜ್ಞಾನಿಗಳಿಗೂ ಅಭಿನಂದನೆಗಳು. ನಿಮ್ಮ ಮುಂದಿನ ಕಾರ್ಯಕ್ಕೆ ನಾವು ಸಾಥ್​ ನೀಡಲಿದ್ದೇವೆ, ಯಾವುಕ್ಕೂ ತಲೆ ಕೆಡಿಸಿಕೊಳ್ಳಬೇಡಿ ಎಂದು ತಿಳಿಸಿದರು. 



ಚಂದ್ರನ ಅಂಗಳಕ್ಕೆ ಇಳಿಯಲು ಕೆಲ ನಿಮಿಷ ಬಾಕಿ ಇರುವಾಗಲೇ ವಿಕ್ರಂ ಲ್ಯಾಂಡರ್​ನಿಂದ ಯಾವುದೇ ರೀತಿಯ ಸಂಪರ್ಕ ಸಿಗಲಿಲ್ಲ. ಹೀಗಾಗಿ ಇಸ್ರೋ ಸಂಸ್ಥೆ ಮುಖ್ಯಸ್ಥ ಕೆ. ಸಿವನ್​ ಇದರ ಬಗ್ಗೆ ಮಾಹಿತಿ ನೀಡಿ, ಡೇಟಾ ಮರುಪರಿಶೀಲನೆ ನಡೆಸುವುದಾಗಿ ತಿಳಿಸಿದರು. 


Conclusion:
Last Updated : Sep 7, 2019, 6:39 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.