ETV Bharat / bharat

ಭೀಮಾ-ಕೋರೆಗಾಂವ್​​​ ಪ್ರಕರಣಗಳನ್ನ ವಹಿಸಿಕೊಂಡ ಎನ್​ಐಎ! - ಉಪಮುಖ್ಯಮಂತ್ರಿ ಅಜಿತ್ ಪವಾರ್

2018ರ ಭೀಮಾ-ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ)ಗೆ ವರ್ಗಾವಣೆಯಾಗಿವೆ.

Bhima Koregaon Cases Taken Over by Central Agency NIA
Bhima Koregaon Cases Taken Over by Central Agency NIA
author img

By

Published : Jan 25, 2020, 9:57 AM IST

ನವದೆಹಲಿ: 2018ರ ಭೀಮಾ-ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ)ಗೆ ವರ್ಗಾವಣೆಯಾಗಿವೆ.

ಗುರುವಾರವಷ್ಟೇ ಮಹಾರಾಷ್ಟ್ರ ಸರ್ಕಾರ ಪ್ರಕರಣದ ಸೂಕ್ಷ್ಮ ಸ್ಥಿತಿಗತಿ, ತನಿಖೆ ಕುರಿತು ಪೊಲೀಸರೊಂದಿಗೆ ಪರಿಶೀಲನಾ ಸಭೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಶುಕ್ರವಾರ ನಡೆದ ದಿಢೀರ್​ ಬೆಳವಣಿಗೆಯಲ್ಲಿ ಪ್ರಕರಣವನ್ನು ಎನ್​ಐಎಗೆ ವರ್ಗಾಯಿಸಲಾಗಿದೆ.

ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಗೃಹ ಸಚಿವ ಅನಿಲ್ ದೇಶಮುಖ್ ಈ ಪ್ರಕರಣಗಳ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಸುಬೋಧ್ ಜೈಸ್ವಾಲ್​ ಮತ್ತು ರಾಜ್ಯ ಗುಪ್ತಚರ ಇಲಾಖೆ ಆಯುಕ್ತ ರಶ್ಮಿ ಶುಕ್ಲಾ ಅವರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದರು. ಅದರ ಬೆನ್ನಲ್ಲೇ ಈ ಪ್ರಕರಣಗಳ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿರುವ ಪರಿಣಾಮ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಗಳ ನಡುವೆ ಹೊಸದೊಂದು ಸಂಘರ್ಷ ಏರ್ಪಡುವ ಸಾಧ್ಯತೆ ಇದೆ.

2018ರ ಜನವರಿ 1ರಂದು ಭೀಮಾ-ಕೋರೆಗಾಂವ್​ ವಿಜಯೋತ್ಸವದ 200ನೇ ವರ್ಷಾಚರಣೆ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಗಲಭೆಯಲ್ಲಿ ಹಲವರು ಗಾಯಗೊಂಡಿದ್ದಲ್ಲದೆ, ಭಾರೀ ಹಿಂಸಾಚಾರ ನಡೆದಿತ್ತು. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ನಂತರ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಹೇರಲಾಗಿತ್ತು.

ಭೀಮಾ-ಕೋರೆಂಗಾವ್ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಕವಿ ವರವರ ರಾವ್, ಸಾಮಾಜಿಕ ಕಾರ್ಯಕರ್ತರಾದ ಸುಧಾ ಭಾರದ್ವಾಜ್​, ಗೌತಮ್ ನವಲಖಾ, ಅರುಣ್ ಫೆರೀರಾ ಮತ್ತು ವೆರ್ನಾನ್ ಗೊನ್ಸಾಲ್ವೆಸ್ ಸೇರಿದಂತೆ ಇನ್ನಿತರರನ್ನು ಪೊಲೀಸರು ಬಂಧಿಸಿದ್ದರು.

ನವದೆಹಲಿ: 2018ರ ಭೀಮಾ-ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ)ಗೆ ವರ್ಗಾವಣೆಯಾಗಿವೆ.

ಗುರುವಾರವಷ್ಟೇ ಮಹಾರಾಷ್ಟ್ರ ಸರ್ಕಾರ ಪ್ರಕರಣದ ಸೂಕ್ಷ್ಮ ಸ್ಥಿತಿಗತಿ, ತನಿಖೆ ಕುರಿತು ಪೊಲೀಸರೊಂದಿಗೆ ಪರಿಶೀಲನಾ ಸಭೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಶುಕ್ರವಾರ ನಡೆದ ದಿಢೀರ್​ ಬೆಳವಣಿಗೆಯಲ್ಲಿ ಪ್ರಕರಣವನ್ನು ಎನ್​ಐಎಗೆ ವರ್ಗಾಯಿಸಲಾಗಿದೆ.

ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಗೃಹ ಸಚಿವ ಅನಿಲ್ ದೇಶಮುಖ್ ಈ ಪ್ರಕರಣಗಳ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಸುಬೋಧ್ ಜೈಸ್ವಾಲ್​ ಮತ್ತು ರಾಜ್ಯ ಗುಪ್ತಚರ ಇಲಾಖೆ ಆಯುಕ್ತ ರಶ್ಮಿ ಶುಕ್ಲಾ ಅವರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದರು. ಅದರ ಬೆನ್ನಲ್ಲೇ ಈ ಪ್ರಕರಣಗಳ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿರುವ ಪರಿಣಾಮ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಗಳ ನಡುವೆ ಹೊಸದೊಂದು ಸಂಘರ್ಷ ಏರ್ಪಡುವ ಸಾಧ್ಯತೆ ಇದೆ.

2018ರ ಜನವರಿ 1ರಂದು ಭೀಮಾ-ಕೋರೆಗಾಂವ್​ ವಿಜಯೋತ್ಸವದ 200ನೇ ವರ್ಷಾಚರಣೆ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಗಲಭೆಯಲ್ಲಿ ಹಲವರು ಗಾಯಗೊಂಡಿದ್ದಲ್ಲದೆ, ಭಾರೀ ಹಿಂಸಾಚಾರ ನಡೆದಿತ್ತು. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ನಂತರ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಹೇರಲಾಗಿತ್ತು.

ಭೀಮಾ-ಕೋರೆಂಗಾವ್ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಕವಿ ವರವರ ರಾವ್, ಸಾಮಾಜಿಕ ಕಾರ್ಯಕರ್ತರಾದ ಸುಧಾ ಭಾರದ್ವಾಜ್​, ಗೌತಮ್ ನವಲಖಾ, ಅರುಣ್ ಫೆರೀರಾ ಮತ್ತು ವೆರ್ನಾನ್ ಗೊನ್ಸಾಲ್ವೆಸ್ ಸೇರಿದಂತೆ ಇನ್ನಿತರರನ್ನು ಪೊಲೀಸರು ಬಂಧಿಸಿದ್ದರು.

Intro:Body:

prasanna


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.