ETV Bharat / bharat

ಬಿಜೆಪಿ ಪಾಸ್ವಾನ್​ ಪರಂಪರೆಯನ್ನೇ ನಾಶಪಡಿಸಿದೆ: ದಿಗ್ವಿಜಯ್​ ಸಿಂಗ್​ ಆರೋಪ

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವರ್ಚಸ್ಸು ಕಡಿಮೆ ಮಾಡಿದ್ದಕ್ಕಾಗಿ ಮತ್ತು ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಪರಂಪರೆಯನ್ನು ನಾಶಪಡಿಸಿದ್ದಕ್ಕಾಗಿ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ ಸಿಂಗ್ ಬಿಜೆಪಿಯೇ ಕಾರಣ ಎಂದು ದೂರಿದ್ದಾರೆ.

author img

By

Published : Nov 11, 2020, 1:14 PM IST

Nitish Kumar
ದಿಗ್ವಿಜಯ್​ ಸಿಂಗ್​

ಭೋಪಾಲ್​( ಮಧ್ಯಪ್ರದೇಶ) : ಬಿಜೆಪಿ ತನ್ನ ತಂತ್ರಗಾರಿಕೆ ಮೂಲಕ ರಾಮ್​ ವಿಲಾಸ್​ ಪಾಸ್ವಾನ್​ ಅವರ ಪರಂಪರೆಯನ್ನೇ ನಾಶಗೊಳಿಸಿ, ಬಿಹಾರ್​ ಸಿಎಂ ನಿತೀಶ್​ ಕುಮಾರ್​ ಅವರ ವರ್ಚಸ್ಸು ತಗ್ಗುವಂತೆ ಮಾಡಿದೆ ಎಂದು ಕಾಂಗ್ರೆಸ್​ ಹಿರಿಯ ನಾಯಕ ದಿಗ್ವಿಜಯ್​ ಸಿಂಗ್​ ಆರೋಪಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ ಮತ್ತು ಮಧ್ಯಪ್ರದೇಶ ಉಪಚುನಾವಣೆ ಬಳಿಕ ಸರಣಿ ಟ್ವೀಟ್​ ಮಾಡಿರುವ ದಿಗ್ವಿಜಯ್​ ಸಿಂಗ್,​ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಇದೇ ವೇಳೆ, 75 ಕ್ಷೇತ್ರಗಳಲ್ಲಿ ವಿಜಯದ ನಗೆ ಬೀರಿರುವ ಆರ್​ಜೆಡಿ( ರಾಷ್ಟ್ರೀಯ ಜನತಾ ದಳ) ಪಕ್ಷದ ನಾಯಕ ತೇಜಸ್ವಿ ಯಾದವ್​ಗೆ ಅಭಿನಂದಿಸಿದ್ದಾರೆ.

ಇದೇ ವೇಳೆ, ನಿತೀಶ್​ ಜೀ ನಿಮಗೆ ಬಿಹಾರ ರಾಜ್ಯ ತುಂಬಾ ಚಿಕ್ಕದು, ನೀವು ರಾಷ್ಟ್ರ ರಾಜಕಾರಣಕ್ಕೆ ಬರಬೇಕು. ಕೇಂದ್ರದ ಒಡೆದು ಆಳುವ ನೀತಿಯನ್ನು ಮುಂದುವರಿಸಲು ಬಿಡಬಾರದು. ಎಲ್ಲ ಸಮಾಜವಾದಿಗಳು ಜಾತ್ಯತೀತ ಸಿದ್ದಾಂತದಲ್ಲಿ ನಂಬಿಕೆ ಇಡುವಂತೆ ಮಾಡಲು ನೀವು ಈ ಸಲಹೆಯನ್ನು ಗಣನೆಗೆ ತೆಗೆದುಕೊಳ್ಳಿ ಎಂದು ಸಿಂಗ್​ ಹೇಳಿದ್ದಾರೆ.

ಇನ್ನು ಸಿದ್ಧಾಂತಗಳಿಗಾಗಿ ಹೋರಾಟ ಮಾಡುತ್ತಿರುವ ದೇಶದ ಒಬ್ಬನೇ ನಾಯಕ ರಾಹುಲ್​ ಗಾಂಧಿ. ರಾಜಕೀಯವು ಸಿದ್ದಾಂತಕ್ಕೆ ಸಂಬಂಧಿಸಿದ್ದು, ಎಂಬುದನ್ನು ಎನ್​ಡಿಎ ಮಿತ್ರ ಪಕ್ಷಗಳು ಅರ್ಥ ಮಾಡಿಕೊಳ್ಳಬೇಕು. ಯಾರೇ ಆಗಲಿ ಮಹಾತ್ವಾಕಾಂಕ್ಷೆಯಿಂದಾಗಿ ಸಿದ್ದಾಂತ ತ್ಯಜಿಸಿ ಸ್ವಾರ್ಥಕ್ಕಾಗಿ ರಾಜಿ ಮಾಡಿಕೊಂಡರೆ ಅಂತಹವರು ರಾಜಕೀಯದಲ್ಲಿ ದೀರ್ಘಕಾಲ ಉಳಿಯಲು ಸಾಧ್ಯವಿಲ್ಲ ಎಂದು ದಿಗ್ವಿಜಯ್​ ಸಿಂಗ್​ ಹೇಳಿದ್ದಾರೆ.

ಭೋಪಾಲ್​( ಮಧ್ಯಪ್ರದೇಶ) : ಬಿಜೆಪಿ ತನ್ನ ತಂತ್ರಗಾರಿಕೆ ಮೂಲಕ ರಾಮ್​ ವಿಲಾಸ್​ ಪಾಸ್ವಾನ್​ ಅವರ ಪರಂಪರೆಯನ್ನೇ ನಾಶಗೊಳಿಸಿ, ಬಿಹಾರ್​ ಸಿಎಂ ನಿತೀಶ್​ ಕುಮಾರ್​ ಅವರ ವರ್ಚಸ್ಸು ತಗ್ಗುವಂತೆ ಮಾಡಿದೆ ಎಂದು ಕಾಂಗ್ರೆಸ್​ ಹಿರಿಯ ನಾಯಕ ದಿಗ್ವಿಜಯ್​ ಸಿಂಗ್​ ಆರೋಪಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ ಮತ್ತು ಮಧ್ಯಪ್ರದೇಶ ಉಪಚುನಾವಣೆ ಬಳಿಕ ಸರಣಿ ಟ್ವೀಟ್​ ಮಾಡಿರುವ ದಿಗ್ವಿಜಯ್​ ಸಿಂಗ್,​ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಇದೇ ವೇಳೆ, 75 ಕ್ಷೇತ್ರಗಳಲ್ಲಿ ವಿಜಯದ ನಗೆ ಬೀರಿರುವ ಆರ್​ಜೆಡಿ( ರಾಷ್ಟ್ರೀಯ ಜನತಾ ದಳ) ಪಕ್ಷದ ನಾಯಕ ತೇಜಸ್ವಿ ಯಾದವ್​ಗೆ ಅಭಿನಂದಿಸಿದ್ದಾರೆ.

ಇದೇ ವೇಳೆ, ನಿತೀಶ್​ ಜೀ ನಿಮಗೆ ಬಿಹಾರ ರಾಜ್ಯ ತುಂಬಾ ಚಿಕ್ಕದು, ನೀವು ರಾಷ್ಟ್ರ ರಾಜಕಾರಣಕ್ಕೆ ಬರಬೇಕು. ಕೇಂದ್ರದ ಒಡೆದು ಆಳುವ ನೀತಿಯನ್ನು ಮುಂದುವರಿಸಲು ಬಿಡಬಾರದು. ಎಲ್ಲ ಸಮಾಜವಾದಿಗಳು ಜಾತ್ಯತೀತ ಸಿದ್ದಾಂತದಲ್ಲಿ ನಂಬಿಕೆ ಇಡುವಂತೆ ಮಾಡಲು ನೀವು ಈ ಸಲಹೆಯನ್ನು ಗಣನೆಗೆ ತೆಗೆದುಕೊಳ್ಳಿ ಎಂದು ಸಿಂಗ್​ ಹೇಳಿದ್ದಾರೆ.

ಇನ್ನು ಸಿದ್ಧಾಂತಗಳಿಗಾಗಿ ಹೋರಾಟ ಮಾಡುತ್ತಿರುವ ದೇಶದ ಒಬ್ಬನೇ ನಾಯಕ ರಾಹುಲ್​ ಗಾಂಧಿ. ರಾಜಕೀಯವು ಸಿದ್ದಾಂತಕ್ಕೆ ಸಂಬಂಧಿಸಿದ್ದು, ಎಂಬುದನ್ನು ಎನ್​ಡಿಎ ಮಿತ್ರ ಪಕ್ಷಗಳು ಅರ್ಥ ಮಾಡಿಕೊಳ್ಳಬೇಕು. ಯಾರೇ ಆಗಲಿ ಮಹಾತ್ವಾಕಾಂಕ್ಷೆಯಿಂದಾಗಿ ಸಿದ್ದಾಂತ ತ್ಯಜಿಸಿ ಸ್ವಾರ್ಥಕ್ಕಾಗಿ ರಾಜಿ ಮಾಡಿಕೊಂಡರೆ ಅಂತಹವರು ರಾಜಕೀಯದಲ್ಲಿ ದೀರ್ಘಕಾಲ ಉಳಿಯಲು ಸಾಧ್ಯವಿಲ್ಲ ಎಂದು ದಿಗ್ವಿಜಯ್​ ಸಿಂಗ್​ ಹೇಳಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.