ETV Bharat / bharat

20 ದಿನದಲ್ಲಿ 5,000 ರ್‍ಯಾಲಿ: ರಾಷ್ಟ್ರ ರಾಜಧಾನಿ ಗೆಲುವಿಗೆ ಬಿಜೆಪಿ ಚಾಣಾಕ್ಷ ನಡೆ

ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮಾಸ್ಟರ್​ ಪ್ಲಾನ್​ ಹಾಕಿಕೊಂಡಿರುವ ಭಾರತೀಯ ಜನತಾ ಪಾರ್ಟಿ ಪ್ರತಿದಿನ 250 ಪ್ರಚಾರ ಸಭೆಗಳಲ್ಲಿ ಭಾಗಿಯಾಗಲು ಯೋಜನೆ ರೂಪಿಸಿದೆ.

author img

By

Published : Jan 18, 2020, 8:19 PM IST

Delhi elections
ರಾಷ್ಟ್ರ ರಾಜಧಾನಿ ಗೆಲುವಿಗೆ ಬಿಜೆಪಿ ಮಾಸ್ಟರ್​ ಪ್ಲಾನ್

ನವದೆಹಲಿ: 70 ಕ್ಷೇತ್ರಗಳ ದೆಹಲಿ ವಿಧಾನಸಭೆಗೆ ಈಗಾಗಲೇ ಚುನಾವಣಾ ದಿನಾಂಕ ಘೋಷಣೆಯಾಗಿದ್ದು ಫೆ.8ರಂದು ಒಂದೇ ಹಂತದಲ್ಲಿ ಮತದಾನ​ ನಡೆಯಲಿದೆ.

ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಪಣ ತೊಟ್ಟಿರುವ ಆಡಳಿತಾರೂಢ ಆಮ್​ ಆದ್ಮಿ ಪಕ್ಷ, ಕಾಂಗ್ರೆಸ್​ ಹಾಗೂ ಭಾರತೀಯ ಜನತಾ ಪಾರ್ಟಿ ಕಸರತ್ತು ನಡೆಸಿದ್ದು, ತಮ್ಮದೇ ರಣತಂತ್ರ ರೂಪಿಸಿಕೊಂಡು ಅಖಾಡಕ್ಕೆ ಧುಮುಕಿವೆ.

ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ದೆಹಲಿಯಲ್ಲೂ ಅಧಿಕಾರದ ಗದ್ದುಗೆ ಹಿಡಿಯಲು ಮುಂದಾಗಿದ್ದು, ಮುಂದಿನ 20 ದಿನಗಳಲ್ಲಿ ಬರೋಬ್ಬರಿ 5 ಸಾವಿರ ರ್‍ಯಾಲಿ ನಡೆಸಲು ಯೋಜನೆ ರೂಪಿಸಿಕೊಂಡಿದೆ. ಪ್ರತಿದಿನ 4 ಸಮಾರಂಭಗಳಲ್ಲಿ ಭಾಗಿಯಾಗಲು ಬಿಜೆಪಿ ಹೈಕಮಾಂಡ್ ಈಗಾಗಲೇ ಸೂಚನೆ ನೀಡಿದ್ದು, 200ಕ್ಕೂ ಹೆಚ್ಚು ಜನರನ್ನು ಹೊಂದಿರುವ ಸಮಾರಂಭಗಳಲ್ಲಿ ಭಾಗಿಯಾಗುವಂತೆ ಸೂಚನೆ ನೀಡಿದೆ.

100 ಬಿಜೆಪಿ ಮುಖಂಡರು ಹಾಗೂ ಕೇಂದ್ರ ಕ್ಯಾಬಿನೆಟ್​ ಸಚಿವರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ನಿರ್ಧರಿಸಿದ್ದು, ಪ್ರತಿದಿನ 250ಕ್ಕೂ ಪ್ರಚಾರ ಸಭೆಗಳಲ್ಲಿ ಭಾಗಿಯಾಗಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಬಿಜೆಪಿ ಈಗಾಗಲೇ 70 ಕ್ಷೇತ್ರಗಳ ಪೈಕಿ 57 ಕ್ಷೇತ್ರಗಳಿಗೆ ಅಭ್ಯರ್ಥಿ ಫೈನಲ್​​ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 67 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ರೆ, ಬಿಜೆಪಿ ಕೇವಲ 3 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿತ್ತು. ಕಾಂಗ್ರೆಸ್​ ಯಾವುದೇ ಕ್ಷೇತ್ರದಲ್ಲೂ ಗೆಲುವು ಸಾಧಿಸಿರಲಿಲ್ಲ ಎಂಬುದು ಗಮನಾರ್ಹ ಸಂಗತಿ.

ನವದೆಹಲಿ: 70 ಕ್ಷೇತ್ರಗಳ ದೆಹಲಿ ವಿಧಾನಸಭೆಗೆ ಈಗಾಗಲೇ ಚುನಾವಣಾ ದಿನಾಂಕ ಘೋಷಣೆಯಾಗಿದ್ದು ಫೆ.8ರಂದು ಒಂದೇ ಹಂತದಲ್ಲಿ ಮತದಾನ​ ನಡೆಯಲಿದೆ.

ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಪಣ ತೊಟ್ಟಿರುವ ಆಡಳಿತಾರೂಢ ಆಮ್​ ಆದ್ಮಿ ಪಕ್ಷ, ಕಾಂಗ್ರೆಸ್​ ಹಾಗೂ ಭಾರತೀಯ ಜನತಾ ಪಾರ್ಟಿ ಕಸರತ್ತು ನಡೆಸಿದ್ದು, ತಮ್ಮದೇ ರಣತಂತ್ರ ರೂಪಿಸಿಕೊಂಡು ಅಖಾಡಕ್ಕೆ ಧುಮುಕಿವೆ.

ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ದೆಹಲಿಯಲ್ಲೂ ಅಧಿಕಾರದ ಗದ್ದುಗೆ ಹಿಡಿಯಲು ಮುಂದಾಗಿದ್ದು, ಮುಂದಿನ 20 ದಿನಗಳಲ್ಲಿ ಬರೋಬ್ಬರಿ 5 ಸಾವಿರ ರ್‍ಯಾಲಿ ನಡೆಸಲು ಯೋಜನೆ ರೂಪಿಸಿಕೊಂಡಿದೆ. ಪ್ರತಿದಿನ 4 ಸಮಾರಂಭಗಳಲ್ಲಿ ಭಾಗಿಯಾಗಲು ಬಿಜೆಪಿ ಹೈಕಮಾಂಡ್ ಈಗಾಗಲೇ ಸೂಚನೆ ನೀಡಿದ್ದು, 200ಕ್ಕೂ ಹೆಚ್ಚು ಜನರನ್ನು ಹೊಂದಿರುವ ಸಮಾರಂಭಗಳಲ್ಲಿ ಭಾಗಿಯಾಗುವಂತೆ ಸೂಚನೆ ನೀಡಿದೆ.

100 ಬಿಜೆಪಿ ಮುಖಂಡರು ಹಾಗೂ ಕೇಂದ್ರ ಕ್ಯಾಬಿನೆಟ್​ ಸಚಿವರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ನಿರ್ಧರಿಸಿದ್ದು, ಪ್ರತಿದಿನ 250ಕ್ಕೂ ಪ್ರಚಾರ ಸಭೆಗಳಲ್ಲಿ ಭಾಗಿಯಾಗಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಬಿಜೆಪಿ ಈಗಾಗಲೇ 70 ಕ್ಷೇತ್ರಗಳ ಪೈಕಿ 57 ಕ್ಷೇತ್ರಗಳಿಗೆ ಅಭ್ಯರ್ಥಿ ಫೈನಲ್​​ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 67 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ರೆ, ಬಿಜೆಪಿ ಕೇವಲ 3 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿತ್ತು. ಕಾಂಗ್ರೆಸ್​ ಯಾವುದೇ ಕ್ಷೇತ್ರದಲ್ಲೂ ಗೆಲುವು ಸಾಧಿಸಿರಲಿಲ್ಲ ಎಂಬುದು ಗಮನಾರ್ಹ ಸಂಗತಿ.

Intro:pbn_mla_babajani_hindi_1_to_1Body:साई जन्म स्थळावरून निर्माण झालेल्या वादा विषय आमदार बाबाजानी दुर्रानी व मंदिराच्या शेजारी राहणाऱ्या रफिक भाई यांचा हिंदीत केलेला 1to1Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.