ಜೈಪುರ : ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ತನ್ನ ಶಾಸಕರನ್ನು ರಾಜಸ್ಥಾನದ ಸಿರೋಹಿಯ ರೆಸಾರ್ಟ್ಗೆ ಕರೆದುಕೊಂಡು ಹೋಗಿದೆ ಎಂದು ಗುಜರಾತ್ ಬಿಜೆಪಿ ನಾಯಕ ನಾರಾಯಣ್ ಪುರೋಹಿತ್ ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕೋವಿಡ್ ಭೀತಿ ಮಧ್ಯೆಯೇ ಕಾಂಗ್ರೆಸ್ ತನ್ನ 22 ಶಾಸಕರನ್ನು ಸಿರೋಹಿಯ ರೆಸಾರ್ಟ್ಗೆ ಕರೆದುಕೊಂಡು ಹೋಗಿದೆ. ಹೀಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ನಾವು ದೂರು ನೀಡಿದ್ದೇವೆ ಎಂದು ಹೇಳಿದ್ದಾರೆ.
ಶೀಘ್ರದಲ್ಲೇ ಗುಜರಾತ್ನಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿರುವುದರಿಂದ ತಮ್ಮ ಶಾಸಕರಿಗೆ ಬಿಜೆಪಿ ಆಮಿಷವೊಡ್ಡಬಹುದು ಎಂಬ ಭಯದಿಂದ ಕಾಂಗ್ರೆಸ್ ಶಾಸಕರನ್ನು ಸಿರೋಹಿಗೆ ಶಿಫ್ಟ್ ಮಾಡಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಮೂವರು ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಜೂನ್ 19 ರಂದು ಆಂಧ್ರಪ್ರದೇಶ, ಗುಜರಾತ್ ಮತ್ತು ಕರ್ನಾಟಕದಿಂದ ತಲಾ ನಾಲ್ಕು, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ತಲಾ ಮೂರು ಜಾರ್ಖಂಡ್ನ ಎರಡು ಮಣಿಪುರ, ಮೇಘಾಲಯ, ಮಿಜೋರಾಂ ಮತ್ತು ಅರುಣಾಚಲ ಪ್ರದೇಶದ ತಲಾ ಒಂದು ಸೇರಿ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.