ETV Bharat / bharat

ಧ್ವಜಾರೋಹಣ ಕಾರ್ಯಕ್ರಮ ಸಂಬಂಧ ಘರ್ಷಣೆ: ಬಿಜೆಪಿ ಮುಖಂಡನ ಸಾವು

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಆಡಳಿತಾರೂಢ ಟಿಎಂಸಿ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಘರ್ಷಣೆಯಲ್ಲಿ ಬಿಜೆಪಿ ಮುಖಂಡ ಮೃತಪಟ್ಟಿದ್ದಾರೆ.

author img

By

Published : Aug 15, 2020, 7:14 PM IST

BJP worker dies in clash over flag in West Bengal
ಧ್ವಜಾರೋಹಣ ಮಾಡವ ಸಂಬಂಧ ಘರ್ಷಣೆ

ಕೋಲ್ಕತಾ: ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿನ್ನೆಲೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ಸಂಬಂಧ ಆಡಳಿತಾರೂಢ ತೃಣಮೂಲ ಕಾಂಗ್ರೆಸ್​ ಬೆಂಬಲಿಗರೊಂದಿಗೆ ನಡೆದ ಘರ್ಷಣೆಯಲ್ಲಿ ಬಿಜೆಪಿ ಸದಸ್ಯರೊಬ್ಬರು ಮೃತಪಟ್ಟಿದ್ದಾರೆ.

ಹೂಗ್ಲಿ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸುದರ್ಶನ್ ಪ್ರಮಾಣಿಕ್ ಮೃತಪಟ್ಟ ಬಿಜೆಪಿ ಮುಖಂಡ ಎಂದು ತಿಳಿದು ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮೂಲಗಳ ಪ್ರಕಾರ ಈವರೆಗೆ ಯಾರನ್ನೂ ಬಂಧಿಸಿರುವ ವರದಿಯಾಗಿಲ್ಲ.

ಎರಡೂ ಪಕ್ಷದ ಕಚೇರಿಗಳು ಒಂದೇ ಪ್ರದೇಶದಲ್ಲಿರುವುದರಿಂದ ರಾಷ್ಟ್ರಧ್ವಜವನ್ನು ಹಾರಿಸಲು ಎರಡೂ ಕಡೆಯವರು ಜಮಾಯಿಸಿದ್ದರಂತೆ. ಈ ವೇಳೆ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿದ್ದರಿಂದ ಈ ಘರ್ಷಣೆ ಸಂಭವಿಸಿದೆ ಎನ್ನಲಾಗುತ್ತಿದೆ.

ಘಟನೆ ಖಂಡಿಸಿ ಸ್ಥಳೀಯರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಇನ್ನು ರಾಜ್ಯ ಬಿಜೆಪಿ ಘಟಕವು ಈ ಘಟನೆಯನ್ನು ಖಂಡಿಸಿದ್ದು, ಹಿಂಸಾಚಾರಕ್ಕೆ ಕಾರಣರಾದವರನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದೆ.

ಕೋಲ್ಕತಾ: ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿನ್ನೆಲೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ಸಂಬಂಧ ಆಡಳಿತಾರೂಢ ತೃಣಮೂಲ ಕಾಂಗ್ರೆಸ್​ ಬೆಂಬಲಿಗರೊಂದಿಗೆ ನಡೆದ ಘರ್ಷಣೆಯಲ್ಲಿ ಬಿಜೆಪಿ ಸದಸ್ಯರೊಬ್ಬರು ಮೃತಪಟ್ಟಿದ್ದಾರೆ.

ಹೂಗ್ಲಿ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸುದರ್ಶನ್ ಪ್ರಮಾಣಿಕ್ ಮೃತಪಟ್ಟ ಬಿಜೆಪಿ ಮುಖಂಡ ಎಂದು ತಿಳಿದು ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮೂಲಗಳ ಪ್ರಕಾರ ಈವರೆಗೆ ಯಾರನ್ನೂ ಬಂಧಿಸಿರುವ ವರದಿಯಾಗಿಲ್ಲ.

ಎರಡೂ ಪಕ್ಷದ ಕಚೇರಿಗಳು ಒಂದೇ ಪ್ರದೇಶದಲ್ಲಿರುವುದರಿಂದ ರಾಷ್ಟ್ರಧ್ವಜವನ್ನು ಹಾರಿಸಲು ಎರಡೂ ಕಡೆಯವರು ಜಮಾಯಿಸಿದ್ದರಂತೆ. ಈ ವೇಳೆ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿದ್ದರಿಂದ ಈ ಘರ್ಷಣೆ ಸಂಭವಿಸಿದೆ ಎನ್ನಲಾಗುತ್ತಿದೆ.

ಘಟನೆ ಖಂಡಿಸಿ ಸ್ಥಳೀಯರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಇನ್ನು ರಾಜ್ಯ ಬಿಜೆಪಿ ಘಟಕವು ಈ ಘಟನೆಯನ್ನು ಖಂಡಿಸಿದ್ದು, ಹಿಂಸಾಚಾರಕ್ಕೆ ಕಾರಣರಾದವರನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.