ETV Bharat / bharat

ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ... ಮುಗಿಲು ಮುಟ್ಟಿತು ಪೋಷಕರ ಆಕ್ರಂದನ - ನಾಪತ್ತೆಯಾಗಿದ್ದ ಆರು ವರ್ಷದ ಬಾಲಕಿ ಶವವಾಗಿ ಪತ್ತೆ

ಕಾಣೆಯಾಗಿದ್ದ ಬಾಲಕಿ ನದಿ ದಡದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ.

Body Of Missing 6-Yr-Old Girl Found In River
ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ
author img

By

Published : Feb 28, 2020, 8:28 PM IST

ಕೊಲ್ಲಂ(ಕೇರಳ): ನಿನ್ನೆಯಷ್ಟೇ ನಾಪತ್ತೆಯಾಗಿದ್ದ ಆರು ವರ್ಷದ ಬಾಲಕಿ ಇಲ್ಲಿನ ಕೊಲ್ಲಂ ಬಳಿಯ ನದಿ ದಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಕೊಲ್ಲಂನಲ್ಲಿ ಈ ಮನಕಲಕುವ ಘಟನೆ ನಡೆದಿದೆ.

ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಧನ್ಯಾ ಮತ್ತು ಪ್ರದೀಪ್ ದಂಪತಿಯ ಪುತ್ರಿ ದೇವನಂದಾ (6) ಮೃತ ಬಾಲಕಿ. ಗುರುವಾರ ಬಾಲಕಿಯ ಪೋಷಕರು ಮಗಳು ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಬಾಲಕಿಗಾಗಿ ಹುಡುಕಾಟ ನಡೆಸಿದ್ದರು.

ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬಾಲಕಿ ದೇವನಂದಾಳ ಮೃತದೇಹವು ನದಿ ತೀರದ ದಡದಲ್ಲಿ ಪತ್ತೆಯಾಗಿದೆ. ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಂಡು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದರು.

ಬಾಲಕಿ ಸಾವಿಗೆ ಸಿಎಂ ಸಂತಾಪ:

ಬಾಲಕಿ ದೇವನಂದಾ ಸಾವಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದು, ಕಾಣೆಯಾದ ಬಾಲಕಿ ಶವವಾಗಿ ಸಿಕ್ಕಿರುವುದು ಪ್ರತಿಯೊಬ್ಬರಲ್ಲೂ ಆಘಾತ ಉಂಟು ಮಾಡಿದೆ. ಪುಟ್ಟ ಮಗುವನ್ನು ಕಳೆದುಕೊಂಡ ಅವರ ತಂದೆ-ತಾಯಿ ಹಾಗೂ ಕುಟುಂಬಸ್ಥರಿಗೆ ಈ ನೋವನ್ನು ಸಹಿಸಿಕೊಳ್ಳುವಂತಾಗಲಿ. ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಈ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಿದೆ ಎಂದು ತಮ್ಮ ಫೇಸ್​ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕೊಲ್ಲಂ(ಕೇರಳ): ನಿನ್ನೆಯಷ್ಟೇ ನಾಪತ್ತೆಯಾಗಿದ್ದ ಆರು ವರ್ಷದ ಬಾಲಕಿ ಇಲ್ಲಿನ ಕೊಲ್ಲಂ ಬಳಿಯ ನದಿ ದಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಕೊಲ್ಲಂನಲ್ಲಿ ಈ ಮನಕಲಕುವ ಘಟನೆ ನಡೆದಿದೆ.

ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಧನ್ಯಾ ಮತ್ತು ಪ್ರದೀಪ್ ದಂಪತಿಯ ಪುತ್ರಿ ದೇವನಂದಾ (6) ಮೃತ ಬಾಲಕಿ. ಗುರುವಾರ ಬಾಲಕಿಯ ಪೋಷಕರು ಮಗಳು ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಬಾಲಕಿಗಾಗಿ ಹುಡುಕಾಟ ನಡೆಸಿದ್ದರು.

ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬಾಲಕಿ ದೇವನಂದಾಳ ಮೃತದೇಹವು ನದಿ ತೀರದ ದಡದಲ್ಲಿ ಪತ್ತೆಯಾಗಿದೆ. ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಂಡು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದರು.

ಬಾಲಕಿ ಸಾವಿಗೆ ಸಿಎಂ ಸಂತಾಪ:

ಬಾಲಕಿ ದೇವನಂದಾ ಸಾವಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದು, ಕಾಣೆಯಾದ ಬಾಲಕಿ ಶವವಾಗಿ ಸಿಕ್ಕಿರುವುದು ಪ್ರತಿಯೊಬ್ಬರಲ್ಲೂ ಆಘಾತ ಉಂಟು ಮಾಡಿದೆ. ಪುಟ್ಟ ಮಗುವನ್ನು ಕಳೆದುಕೊಂಡ ಅವರ ತಂದೆ-ತಾಯಿ ಹಾಗೂ ಕುಟುಂಬಸ್ಥರಿಗೆ ಈ ನೋವನ್ನು ಸಹಿಸಿಕೊಳ್ಳುವಂತಾಗಲಿ. ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಈ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಿದೆ ಎಂದು ತಮ್ಮ ಫೇಸ್​ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.