ETV Bharat / bharat

ಉಭಯ ಸದನದಲ್ಲೂ ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು... ಸಂಸತ್ ಅಧಿವೇಶನ ನಾಳೆಗೆ ಮುಂದೂಡಿಕೆ

ಇಂದಿನಿಂದ ಆರಂಭವಾದ ಬಜೆಟ್​ ಅಧಿವೇಶನದ ದ್ವಿತೀಯಾರ್ಧ ಕಲಾಪ ದೆಹಲಿ ಹಿಂಸಾಚಾರ ಕುರಿತ ವಿಚಾರಕ್ಕೆ ಬಲಿಯಾಗಿದೆ. ಉಭಯ ಸದನದಲ್ಲಿ ಕಾಂಗ್ರೆಸ್ ನಾಯಕರ ಗದ್ದಲದಿಂದಾಗಿ ಅಧಿವೇಶವನ್ನು ನಾಳೆಗೆ ಮುಂದೂಡಲಾಗಿದೆ.

author img

By

Published : Mar 2, 2020, 4:27 PM IST

Rajya Sabha and Lok Sabha adjournedಸಂಸತ್ ಅಧಿವೇಶನ ನಾಳೆಗೆ ಮುಂದೂಡಿಕೆ
ಸಂಸತ್ ಅಧಿವೇಶನ ನಾಳೆಗೆ ಮುಂದೂಡಿಕೆ

ನವದೆಹಲಿ: ಬಜೆಟ್​ ಅಧಿವೇಶನದ ದ್ವಿತೀಯಾರ್ಧ ಕಲಾಪ ಇಂದಿನಿಂದ ಆರಂಭವಾಗಿದೆ. ದೆಹಲಿ ಹಿಂಸಾಚಾರ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಮಧ್ಯಾಹ್ನ ಲೋಕಸಭೆಯಲ್ಲಿ ದೆಹಲಿ ಗಲಭೆ ಕುರಿತು ಚರ್ಚಿಸಲು ಕಾಂಗ್ರೆಸ್ ನೋಟಿಸ್ ನೀಡಿದೆ. ದೆಹಲಿಯಲ್ಲಿನ ಗಲಭೆಗಳ ಬಗ್ಗೆ ಚರ್ಚಿಸಲು ಸದನದ ಎಲ್ಲಾ ವ್ಯವಹಾರಗಳನ್ನು ಸ್ಥಗಿತಗೊಳಿಸುವಂತೆ ಲೋಕಸಭೆಯಲ್ಲಿ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಸ್ಪೀಕರ್ ಓಂ ಬಿರ್ಲಾ ಅವರಿಗೆ ನೋಟಿಸ್ ನೀಡಿದರು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ನಿಯಮಗಳ ಪ್ರಕಾರ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು.

ಆದರೆ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಸದಸ್ಯರು, ಪೋಸ್ಟರ್​ಗಳನ್ನ ಪ್ರದರ್ಶಿಸಿದ್ರು. ಕೆಲ ಕಾಲ ವಿವಾದ್ ಸೆ ವಿಶ್ವಾಸ್ ಬಿಲ್ ಕುರಿತು ಚರ್ಚೆ ನಡೆಸಲಾಯಿತು. ಆದರೆ ಕಾಂಗ್ರೆಸ್ ಸದಸ್ಯರ ಗದ್ದಲದಿಂದಾಗಿ ಅಧಿವೇಶನವನ್ನು ನಾಳೆಗೆ ಮೂಂಡೂಡಲಾಯಿತು.

ಇತ್ತ ರಾಜ್ಯಸಭೆಯಲ್ಲೂ ದೆಹಲಿ ವಿಚಾರದಲ್ಲಿ ಗದ್ದಲ ಉಂಟಾಗಿದ್ದರಿಂದ ನಾಳೆ ಬೆಳಗ್ಗೆ 11 ಗಂಟೆವರೆಗೆ ಅಧಿವೇಶನವನ್ನು ಮುಂದೂಡಲಾಯಿತು.

ನವದೆಹಲಿ: ಬಜೆಟ್​ ಅಧಿವೇಶನದ ದ್ವಿತೀಯಾರ್ಧ ಕಲಾಪ ಇಂದಿನಿಂದ ಆರಂಭವಾಗಿದೆ. ದೆಹಲಿ ಹಿಂಸಾಚಾರ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಮಧ್ಯಾಹ್ನ ಲೋಕಸಭೆಯಲ್ಲಿ ದೆಹಲಿ ಗಲಭೆ ಕುರಿತು ಚರ್ಚಿಸಲು ಕಾಂಗ್ರೆಸ್ ನೋಟಿಸ್ ನೀಡಿದೆ. ದೆಹಲಿಯಲ್ಲಿನ ಗಲಭೆಗಳ ಬಗ್ಗೆ ಚರ್ಚಿಸಲು ಸದನದ ಎಲ್ಲಾ ವ್ಯವಹಾರಗಳನ್ನು ಸ್ಥಗಿತಗೊಳಿಸುವಂತೆ ಲೋಕಸಭೆಯಲ್ಲಿ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಸ್ಪೀಕರ್ ಓಂ ಬಿರ್ಲಾ ಅವರಿಗೆ ನೋಟಿಸ್ ನೀಡಿದರು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ನಿಯಮಗಳ ಪ್ರಕಾರ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು.

ಆದರೆ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಸದಸ್ಯರು, ಪೋಸ್ಟರ್​ಗಳನ್ನ ಪ್ರದರ್ಶಿಸಿದ್ರು. ಕೆಲ ಕಾಲ ವಿವಾದ್ ಸೆ ವಿಶ್ವಾಸ್ ಬಿಲ್ ಕುರಿತು ಚರ್ಚೆ ನಡೆಸಲಾಯಿತು. ಆದರೆ ಕಾಂಗ್ರೆಸ್ ಸದಸ್ಯರ ಗದ್ದಲದಿಂದಾಗಿ ಅಧಿವೇಶನವನ್ನು ನಾಳೆಗೆ ಮೂಂಡೂಡಲಾಯಿತು.

ಇತ್ತ ರಾಜ್ಯಸಭೆಯಲ್ಲೂ ದೆಹಲಿ ವಿಚಾರದಲ್ಲಿ ಗದ್ದಲ ಉಂಟಾಗಿದ್ದರಿಂದ ನಾಳೆ ಬೆಳಗ್ಗೆ 11 ಗಂಟೆವರೆಗೆ ಅಧಿವೇಶನವನ್ನು ಮುಂದೂಡಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.