ETV Bharat / bharat

ಯುಪಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಸಿಎಎ ವಿರುದ್ಧದ ಪ್ರತಿಭಟನೆ.. ಇಂದು 6 ಮಂದಿ ಬಲಿ! - ಉತ್ತರ ಪ್ರದೇಶದಲ್ಲಿ ಹಿಂಸಾಚಾರಕ್ಕೆ ತಿರುಗಿದ ಸಿಎಎ ವಿರುದ್ಧದ ಪ್ರತಿಭಟನೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಇಂದು 6 ಜನರು ಬಲಿಯಾಗಿದ್ದಾರೆ.

CAA protests in UP latest news,ಉತ್ತರ ಪ್ರದೇಶದಲ್ಲಿ 5 ಜನ ಸಾವು
ಉತ್ತರ ಪ್ರದೇಶದಲ್ಲಿ ಹಿಂಸಾಚಾರಕ್ಕೆ ತಿರುಗಿದ ಸಿಎಎ ವಿರುದ್ಧದ ಪ್ರತಿಭಟನೆ
author img

By

Published : Dec 20, 2019, 8:31 PM IST

Updated : Dec 21, 2019, 5:46 AM IST

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಉತ್ತರ ಪ್ರದೇಶದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ 6 ಜನರು ಬಲಿಯಾಗಿದ್ದಾರೆ.

ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ಇಬ್ಬರು, ಕಾನ್ಪುರ, ಸಂಭಾಲ್ ಮತ್ತು ಫಿರೋಜಾಬಾದ್​ನಲ್ಲಿ ತಲಾ ಓರ್ವ ಸೇರಿದಂತೆ 6 ಜನರು ಬಲಿಯಾಗಿದ್ದಾರೆ. ಈ ಮೂಲಕ ಪೌರತ್ವ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಲಿಯಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಹಲವೆಡೆ ಪ್ರತಿಭಟನಾಕಾರರನ್ನ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಇತ್ತ ಬುಲಂದ್​ ಶಹರ್​ನಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರು ಪೊಲೀಸ್ ವಾಹನವನ್ನ ಸುಟ್ಟು ಹಾಕಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಬುಲಂದ್ ಶಹರ್ ಜಿಲ್ಲಾಡಳಿತ, ಜಿಲ್ಲೆಯಾದ್ಯಂತ ಇಂಟರ್​ನೆಟ್​​ ಮತ್ತು ಎಸ್​ಎಂಎಸ್​ ಸೇವೆಯನ್ನ ಸ್ಥಗಿತಗೊಳಿಸಿದೆ.

ನಿನ್ನೆಯಿಂದಲೇ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಈ ನಡುವೆಯೂ ಪ್ರತಿಭಟನೆಗಳು ನಡೆಯುತ್ತಿವೆ.

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಉತ್ತರ ಪ್ರದೇಶದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ 6 ಜನರು ಬಲಿಯಾಗಿದ್ದಾರೆ.

ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ಇಬ್ಬರು, ಕಾನ್ಪುರ, ಸಂಭಾಲ್ ಮತ್ತು ಫಿರೋಜಾಬಾದ್​ನಲ್ಲಿ ತಲಾ ಓರ್ವ ಸೇರಿದಂತೆ 6 ಜನರು ಬಲಿಯಾಗಿದ್ದಾರೆ. ಈ ಮೂಲಕ ಪೌರತ್ವ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಲಿಯಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಹಲವೆಡೆ ಪ್ರತಿಭಟನಾಕಾರರನ್ನ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಇತ್ತ ಬುಲಂದ್​ ಶಹರ್​ನಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರು ಪೊಲೀಸ್ ವಾಹನವನ್ನ ಸುಟ್ಟು ಹಾಕಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಬುಲಂದ್ ಶಹರ್ ಜಿಲ್ಲಾಡಳಿತ, ಜಿಲ್ಲೆಯಾದ್ಯಂತ ಇಂಟರ್​ನೆಟ್​​ ಮತ್ತು ಎಸ್​ಎಂಎಸ್​ ಸೇವೆಯನ್ನ ಸ್ಥಗಿತಗೊಳಿಸಿದೆ.

ನಿನ್ನೆಯಿಂದಲೇ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಈ ನಡುವೆಯೂ ಪ್ರತಿಭಟನೆಗಳು ನಡೆಯುತ್ತಿವೆ.

Intro:Body:Conclusion:
Last Updated : Dec 21, 2019, 5:46 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.