ETV Bharat / bharat

ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಮುಗಿದ ಅಧ್ಯಾಯ: ಕಾಂಗ್ರೆಸ್ ಘೋಷಣೆ

ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಸುಖಾಂತ್ಯಗೊಂಡಿದ್ದರ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್​ ವಕ್ತಾರ ರಂದೀಪ್​ ಸಿಂಗ್​ ಸುರ್ಜೆವಾಲಾ, 30 ದಿನಗಳ ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಹೇಗೆ ಕೊನೆಗೊಂಡಿದೆ ಎಂಬುದಕ್ಕೆ ಇಡೀ ದೇಶ ಸಾಕ್ಷಿಯಾಗಿದೆ. ಇದು ನಿಜಕ್ಕೂ 8 ಕೋಟಿ ರಾಜಸ್ಥಾನಿಗಳ ವಿಜಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

author img

By

Published : Aug 12, 2020, 11:41 AM IST

Rajasthan political crisis
ರಂದೀಪ್​ ಸಿಂಗ್​ ಸುರ್ಜೆವಾಲಾ

ನವದೆಹಲಿ: ಕಳೆದೊಂದು ತಿಂಗಳಿಂದ ನಡೆಯುತ್ತಿದ್ದ ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಸಚಿನ್​ ಪೈಲಟ್​ ವಾಪಸಾತಿಯೊಂದಿಗೆ ಮುಕ್ತಾಯ ಕಂಡಿದೆ. ಪೈಲಟ್​ ಘರ್​ ವಾಪಸಿ ಬಳಿಕ ಬಿಕ್ಕಟ್ಟು ಮುಗಿದ ಅಧ್ಯಾಯ ಎಂದು ಕಾಂಗ್ರೆಸ್​ ಘೋಷಿಸಿದೆ.

ಎಲ್ಲವೂ ಇನ್ಮುಂದೆ ಸುಗಮವಾಗಿ ನಡೆಯಲಿದೆ ಎಂದು ಕಾಂಗ್ರೆಸ್​ ಸಂತಸ ಕೂಡಾ ವ್ಯಕ್ತಪಡಿಸಿದೆ. ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಸುಖಾಂತ್ಯ ಕಂಡಿದ್ದರ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್​ ವಕ್ತಾರ ರಂದೀಪ್​ ಸಿಂಗ್​ ಸುರ್ಜೆವಾಲಾ, "30 ದಿನಗಳ ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಹೇಗೆ ಕೊನೆಗೊಂಡಿದೆ ಎಂಬುದಕ್ಕೆ ಇಡೀ ದೇಶ ಸಾಕ್ಷಿಯಾಗಿದೆ. ಇದು ನಿಜಕ್ಕೂ 8 ಕೋಟಿ ರಾಜಸ್ಥಾನಿಗಳ ವಿಜಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ರಾಹುಲ್​ ಗಾಂಧಿಯವರು ವಿಶೇಷ ಆಸಕ್ತಿ ತೆಗೆದುಕೊಂಡು ರಾಜಸ್ಥಾನ ರಾಜಕೀಯ ಬಿಕ್ಕಟ್ಟನ್ನು ಕೊನೆಗಾಣಿಸಿದ್ದಾರೆ. ಅವರ ದೂರದೃಷ್ಟಿ ಮತ್ತು ನಂಬಿಕೆಯ ಕಾರಣದಿಂದಾಗಿ ಎಲ್ಲಾ ಕಾಂಗ್ರೆಸ್ ನಾಯಕರು ತಮ್ಮಲ್ಲಿದ್ದ ಭಿನ್ನಾಭಿಪ್ರಾಯ ಹಾಗೂ ಅಪನಂಬಿಕೆಗಳನ್ನು ಬಿಟ್ಟು ಒಂದಾಗಲು ಸಾಧ್ಯವಾಗಿದೆ ಎಂದು ಕಾಂಗ್ರೆಸ್​ ವಕ್ತಾರರು ಬಣ್ಣಿಸಿದ್ದಾರೆ.

ಇದೇ ವೇಳೆ, ಪರಿಸ್ಥಿತಿ ತಿಳಿಗೊಳ್ಳುವಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೀಡಿದ ಸಹಕಾರ ಮತ್ತು ಸಹಾಯ ಬಹಳ ಕೆಲಸ ಮಾಡಿದೆ ಎಂದು ಇದೇ ವೇಳೆ ಅವರು ಸ್ಮರಿಸಿದರು.

ನವದೆಹಲಿ: ಕಳೆದೊಂದು ತಿಂಗಳಿಂದ ನಡೆಯುತ್ತಿದ್ದ ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಸಚಿನ್​ ಪೈಲಟ್​ ವಾಪಸಾತಿಯೊಂದಿಗೆ ಮುಕ್ತಾಯ ಕಂಡಿದೆ. ಪೈಲಟ್​ ಘರ್​ ವಾಪಸಿ ಬಳಿಕ ಬಿಕ್ಕಟ್ಟು ಮುಗಿದ ಅಧ್ಯಾಯ ಎಂದು ಕಾಂಗ್ರೆಸ್​ ಘೋಷಿಸಿದೆ.

ಎಲ್ಲವೂ ಇನ್ಮುಂದೆ ಸುಗಮವಾಗಿ ನಡೆಯಲಿದೆ ಎಂದು ಕಾಂಗ್ರೆಸ್​ ಸಂತಸ ಕೂಡಾ ವ್ಯಕ್ತಪಡಿಸಿದೆ. ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಸುಖಾಂತ್ಯ ಕಂಡಿದ್ದರ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್​ ವಕ್ತಾರ ರಂದೀಪ್​ ಸಿಂಗ್​ ಸುರ್ಜೆವಾಲಾ, "30 ದಿನಗಳ ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಹೇಗೆ ಕೊನೆಗೊಂಡಿದೆ ಎಂಬುದಕ್ಕೆ ಇಡೀ ದೇಶ ಸಾಕ್ಷಿಯಾಗಿದೆ. ಇದು ನಿಜಕ್ಕೂ 8 ಕೋಟಿ ರಾಜಸ್ಥಾನಿಗಳ ವಿಜಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ರಾಹುಲ್​ ಗಾಂಧಿಯವರು ವಿಶೇಷ ಆಸಕ್ತಿ ತೆಗೆದುಕೊಂಡು ರಾಜಸ್ಥಾನ ರಾಜಕೀಯ ಬಿಕ್ಕಟ್ಟನ್ನು ಕೊನೆಗಾಣಿಸಿದ್ದಾರೆ. ಅವರ ದೂರದೃಷ್ಟಿ ಮತ್ತು ನಂಬಿಕೆಯ ಕಾರಣದಿಂದಾಗಿ ಎಲ್ಲಾ ಕಾಂಗ್ರೆಸ್ ನಾಯಕರು ತಮ್ಮಲ್ಲಿದ್ದ ಭಿನ್ನಾಭಿಪ್ರಾಯ ಹಾಗೂ ಅಪನಂಬಿಕೆಗಳನ್ನು ಬಿಟ್ಟು ಒಂದಾಗಲು ಸಾಧ್ಯವಾಗಿದೆ ಎಂದು ಕಾಂಗ್ರೆಸ್​ ವಕ್ತಾರರು ಬಣ್ಣಿಸಿದ್ದಾರೆ.

ಇದೇ ವೇಳೆ, ಪರಿಸ್ಥಿತಿ ತಿಳಿಗೊಳ್ಳುವಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೀಡಿದ ಸಹಕಾರ ಮತ್ತು ಸಹಾಯ ಬಹಳ ಕೆಲಸ ಮಾಡಿದೆ ಎಂದು ಇದೇ ವೇಳೆ ಅವರು ಸ್ಮರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.