ETV Bharat / bharat

ರಾಹುಲ್ ಗಾಂಧಿ ಪಕ್ಷದ ಆಡಳಿತವನ್ನು ವಹಿಸಿಕೊಳ್ಳುವ ಬಗ್ಗೆ ಚರ್ಚೆ ನಡೆದಿಲ್ಲ: ರಣದೀಪ್ ಸುರ್ಜೆವಾಲಾ

author img

By

Published : Jun 23, 2020, 8:21 PM IST

ಇಂದು ನಡೆದ ಕಾಂಗ್ರೆಸ್​​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಪಕ್ಷದ ಆಡಳಿತವನ್ನು ವಹಿಸಿಕೊಳ್ಳುವ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ. ಆದರೆ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋತ್ ಅವರು ಗಾಂಧಿ ಪಕ್ಷದ ಅಧ್ಯಕ್ಷರಾಗಬೇಕು ಎಂದು ಹೇಳಿದ್ದಾರೆ.

ರಾಹುಲ್​ ಗಾಂಧಿ
ರಾಹುಲ್​ ಗಾಂಧಿ

ನವದೆಹಲಿ: ಮಂಗಳವಾರ ನಡೆದ ಕಾಂಗ್ರೆಸ್​​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಮತ್ತೆ ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

"ರಾಹುಲ್​ ಗಾಂಧಿ ಅವರೇ ಪಕ್ಷದ ಅಧ್ಯಕ್ಷರಾಗ ಬೇಕು ಎಂಬುದು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಭಾವನೆ. ಆದರೆ ಇಂದಿನ ಸಭೆಯಲ್ಲಿ ಚೀನಾದ ದಾಳಿ, ಇಂಧನ ಬೆಲೆ ಏರಿಕೆ ಮತ್ತು ಸಾಂಕ್ರಾಮಿಕ ರೋಗದ ಪರಿಸ್ಥಿತಿಗಳ ಬಗ್ಗೆ ಚರ್ಚೆಯಾಗಿದೆ" ಎಂದು ಪಕ್ಷದ ಮುಖ್ಯ ವಕ್ತಾರ ರಂದೀಪ್ ಸುರ್ಜೆವಾಲಾ ಹೇಳಿದರು.

"ರಾಹುಲ್ ಗಾಂಧಿ ಅವರನ್ನು ಮತ್ತೆ ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದರು.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಸೋತ ಬಳಿಕ ರಾಹುಲ್ ಗಾಂಧಿ ಈ ಹುದ್ದೆಯನ್ನು ತ್ಯಜಿಸಿದ್ದರು. ಕಳೆದ ಆಗಸ್ಟ್​​ನಲ್ಲಿ ಸೋನಿಯಾ ಗಾಂಧಿ ಅವರನ್ನು ಮತ್ತೆ ಕಾಂಗ್ರೆಸ್​ನ ಅಧ್ಯಕ್ಷರನ್ನಾಗಿ ಮಾಡಲಾಯಿತು.

ನವದೆಹಲಿ: ಮಂಗಳವಾರ ನಡೆದ ಕಾಂಗ್ರೆಸ್​​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಮತ್ತೆ ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

"ರಾಹುಲ್​ ಗಾಂಧಿ ಅವರೇ ಪಕ್ಷದ ಅಧ್ಯಕ್ಷರಾಗ ಬೇಕು ಎಂಬುದು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಭಾವನೆ. ಆದರೆ ಇಂದಿನ ಸಭೆಯಲ್ಲಿ ಚೀನಾದ ದಾಳಿ, ಇಂಧನ ಬೆಲೆ ಏರಿಕೆ ಮತ್ತು ಸಾಂಕ್ರಾಮಿಕ ರೋಗದ ಪರಿಸ್ಥಿತಿಗಳ ಬಗ್ಗೆ ಚರ್ಚೆಯಾಗಿದೆ" ಎಂದು ಪಕ್ಷದ ಮುಖ್ಯ ವಕ್ತಾರ ರಂದೀಪ್ ಸುರ್ಜೆವಾಲಾ ಹೇಳಿದರು.

"ರಾಹುಲ್ ಗಾಂಧಿ ಅವರನ್ನು ಮತ್ತೆ ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದರು.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಸೋತ ಬಳಿಕ ರಾಹುಲ್ ಗಾಂಧಿ ಈ ಹುದ್ದೆಯನ್ನು ತ್ಯಜಿಸಿದ್ದರು. ಕಳೆದ ಆಗಸ್ಟ್​​ನಲ್ಲಿ ಸೋನಿಯಾ ಗಾಂಧಿ ಅವರನ್ನು ಮತ್ತೆ ಕಾಂಗ್ರೆಸ್​ನ ಅಧ್ಯಕ್ಷರನ್ನಾಗಿ ಮಾಡಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.