ETV Bharat / bharat

ದೆಹಲಿ ಹಿಂಸಾಚಾರ: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್​ ಪ್ರತಿಭಟನೆ

author img

By

Published : Mar 6, 2020, 12:32 PM IST

ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ಮಾಡುತ್ತಿರುವ ಕಾಂಗ್ರೆಸ್​ ಸಂಸದರು ಇದೀಗ ಪಾರ್ಲಿಮೆಂಟ್​ ಎದುರುಗಡೆ ಪ್ರತಿಭಟನೆ ನಡೆಸುತ್ತಿದ್ದಾರೆ.

Congress MPs protest in Parliament
Congress MPs protest in Parliament

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದ್ದ ಪ್ರತಿಭಟನೆ ಹತ್ತಿಕ್ಕಲು ವಿಫಲಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜೀನಾಮೆಗೆ ಕಾಂಗ್ರೆಸ್​ ಬಿಗಿಪಟ್ಟು ಹಿಡಿದಿದ್ದು, ಇದೀಗ ಅದಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ.

ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್​ ಸಂಸದರ ಪ್ರತಿಭಟನೆ

ಹಿಂಸಾಚಾರದ ವೇಳೆ 53ಕ್ಕೂ ಹೆಚ್ಚು ಅಮಾಯಕರು ಪ್ರಾಣ ಕಳೆದುಕೊಂಡಿದ್ದು, 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದರ ಮಧ್ಯೆ ಆಸ್ತಿ - ಪಾಸ್ತಿ ನಾಶವಾಗಿದ್ದು, ಇದನ್ನ ಹತೋಟಿ ತರುವಲ್ಲಿ ಕೇಂದ್ರ ಸರ್ಕಾರ ಹಾಗೂ ಗೃಹ ಸಚಿವ ಅಮಿತ್​ ಶಾ ಸಂಪೂರ್ಣವಾಗಿ ವಿಫಲಗೊಂಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಜತೆಗೆ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪಾರ್ಲಿಮೆಂಟ್ ಎದುರುಗಡೆ ರಾಹುಲ್​ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ನಿನ್ನೆ ಕಲಾಪ ನಡೆಯುತ್ತಿದ್ದ ವೇಳೆ ಅಶಿಸ್ತು ತೋರಿರುವ ಆರೋಪದ ಮೇಲೆ ಕಾಂಗ್ರೆಸ್​ನ 7 ಸಂಸದರನ್ನ ಅಮಾನತುಗೊಳಿಸಲಾಗಿದೆ.

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದ್ದ ಪ್ರತಿಭಟನೆ ಹತ್ತಿಕ್ಕಲು ವಿಫಲಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜೀನಾಮೆಗೆ ಕಾಂಗ್ರೆಸ್​ ಬಿಗಿಪಟ್ಟು ಹಿಡಿದಿದ್ದು, ಇದೀಗ ಅದಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ.

ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್​ ಸಂಸದರ ಪ್ರತಿಭಟನೆ

ಹಿಂಸಾಚಾರದ ವೇಳೆ 53ಕ್ಕೂ ಹೆಚ್ಚು ಅಮಾಯಕರು ಪ್ರಾಣ ಕಳೆದುಕೊಂಡಿದ್ದು, 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದರ ಮಧ್ಯೆ ಆಸ್ತಿ - ಪಾಸ್ತಿ ನಾಶವಾಗಿದ್ದು, ಇದನ್ನ ಹತೋಟಿ ತರುವಲ್ಲಿ ಕೇಂದ್ರ ಸರ್ಕಾರ ಹಾಗೂ ಗೃಹ ಸಚಿವ ಅಮಿತ್​ ಶಾ ಸಂಪೂರ್ಣವಾಗಿ ವಿಫಲಗೊಂಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಜತೆಗೆ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪಾರ್ಲಿಮೆಂಟ್ ಎದುರುಗಡೆ ರಾಹುಲ್​ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ನಿನ್ನೆ ಕಲಾಪ ನಡೆಯುತ್ತಿದ್ದ ವೇಳೆ ಅಶಿಸ್ತು ತೋರಿರುವ ಆರೋಪದ ಮೇಲೆ ಕಾಂಗ್ರೆಸ್​ನ 7 ಸಂಸದರನ್ನ ಅಮಾನತುಗೊಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.