ETV Bharat / bharat

ಹಿಂಸಾಚಾರ ನಿಲ್ಲಿಸಿದ ನಂತರವಷ್ಟೇ ಅರ್ಜಿ ವಿಚಾರಣೆ: ಸಿಎಎ ಬಗ್ಗೆ ಸುಪ್ರೀಂಕೋರ್ಟ್​ ಪ್ರತಿಕ್ರಿಯೆ

author img

By

Published : Jan 9, 2020, 7:23 PM IST

ಪೌರತ್ವ (ತಿದ್ದುಪಡಿ) ಕಾನೂನನ್ನು 'ಸಾಂವಿಧಾನಿಕ' ಎಂದು ಘೋಷಿಸಬೇಕು ಎಂಬ ಅರ್ಜಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಸುಪ್ರೀಂಕೋರ್ಟ್ ತುರ್ತು ವಿಚಾರಣೆಯನ್ನು ನಿರಾಕರಿಸಿದ್ದು, ಹಿಂಸಾಚಾರ ನಿಲ್ಲಿಸಿದ ನಂತರವೇ ಅರ್ಜಿಗಳನ್ನು ಆಲಿಸುವುದಾಗಿ ಸ್ಪಷ್ಟವಾಗಿ ತಿಳಿಸಿದೆ.

Chief Justice On Citizenship Plea, ಸಿಎಎ ಬಗ್ಗೆ ಸುಪ್ರೀಂಕೋರ್ಟ್​ ಪ್ರತಿಕ್ರಿಯೆ
ಸಿಎಎ ಬಗ್ಗೆ ಸುಪ್ರೀಂಕೋರ್ಟ್​ ಪ್ರತಿಕ್ರಿಯೆ

ನವದೆಹಲಿ: ಪೌರತ್ವ (ತಿದ್ದುಪಡಿ) ಕಾನೂನನ್ನು 'ಸಾಂವಿಧಾನಿಕ' ಎಂದು ಘೋಷಿಸಬೇಕು ಎಂಬ ಅರ್ಜಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, 'ದೇಶವು ನಿರ್ಣಾಯಕ ಕಾಲಘಟ್ಟದಲ್ಲಿ ಸಾಗುತ್ತಿದೆ', ಹಾಗಾಗಿ ಇಂತಹ ಅರ್ಜಿಗಳು ಯಾವುದೇ ರೀತಿಯಲ್ಲೂ 'ಸಹಾಯ ಮಾಡುವುದಿಲ್ಲ' ಎಂದಿದ್ದಾರೆ. ಅಲ್ಲದೇ ಈ ಅರ್ಜಿಗಳ ತುರ್ತು ವಿಚಾರಣೆಯನ್ನು ನಿರಾಕರಿಸಿದ ಸುಪ್ರೀಂಕೋರ್ಟ್ ಹಿಂಸಾಚಾರ ನಿಲ್ಲಿಸಿದ ನಂತರವೇ ವಿಚಾರಣೆ ನಡೆಸುವುದಾಗಿ ಸ್ಪಷ್ಟವಾಗಿ ಹೇಳಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಸಾಂವಿಧಾನಿಕವೆಂದು ಘೋಷಿಸಬೇಕು ಮತ್ತು ಕಾನೂನು ಕೈಗೆತ್ತಿಕೊಂಡ 'ಕಾರ್ಯಕರ್ತರು, ವಿದ್ಯಾರ್ಥಿಗಳು, ಸುಳ್ಳು ಸುದ್ದಿ ಹರಡುವ ಮಾಧ್ಯಮಗಳ' ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಕೀಲ ವಿನೀತ್ ಧಂಡಾ ಎಂಬುವವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ, ಸಂಸತ್ತು ಅಂಗೀಕರಿಸಿದ ಕಾಯಿದೆಯನ್ನು ಸಾಂವಿಧಾನಿಕ ಎಂದು ನಾವು ಹೇಗೆ ಘೋಷಿಸಬಹುದು? ಅದಕ್ಕೆ ಯಾವಾಗಲೂ ಸಾಂವಿಧಾನಿಕತೆಯ ಶ್ರದ್ಧೆ ಇರುತ್ತದೆ. ನೀವು ಕಾನೂನಿನ ವಿದ್ಯಾರ್ಥಿಯಾಗಿದ್ದರೆ ತಿಳಿದುಕೊಳ್ಳಬೇಕು ಎಂದು ಸಿಜೆಐ ಪ್ರತಿಕ್ರಿಯಿಸಿದ್ದಾರೆ.

ಕಾನೂನಿನ ಸಿಂಧುತ್ವವನ್ನು ನಿರ್ಧರಿಸುವುದು ಮತ್ತು ಅದನ್ನು ಸಾಂವಿಧಾನಿಕವೆಂದು ಘೋಷಿಸದಿರುವುದು ಈ ನ್ಯಾಯಾಲಯದ ಕೆಲಸವಾಗಿದೆ ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊ ಳಗೊಂಡ ಮೂವರು ನ್ಯಾಯಾಧೀಶರ ಪೀಠ ಹೇಳಿದೆ.

ಈ ಕಾಯ್ದೆ ಸಂವಿಧಾನದ ಮನೋಭಾವಕ್ಕೆ ವಿರುದ್ಧವಾದುದಲ್ಲ. ಭಾರತದ ಯಾವುದೇ ನಾಗರಿಕರ ವಿರುದ್ಧವಾಗಿಲ್ಲ ಎಂದು ಸ್ಪಷ್ಟಪಡಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.

ಪೌರತ್ವ ಕಾಯ್ದೆ ಕುರಿತಂತೆ ಸುಪ್ರೀಂಕೋರ್ಟ್​​ಗೆ 60 ಕ್ಕೂ ಹೆಚ್ಚು ಅರ್ಜಿ ಸಲ್ಲಿಸಲಾಗಿದ್ದು ಇವುಗಳಲ್ಲಿ ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ.

ನವದೆಹಲಿ: ಪೌರತ್ವ (ತಿದ್ದುಪಡಿ) ಕಾನೂನನ್ನು 'ಸಾಂವಿಧಾನಿಕ' ಎಂದು ಘೋಷಿಸಬೇಕು ಎಂಬ ಅರ್ಜಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, 'ದೇಶವು ನಿರ್ಣಾಯಕ ಕಾಲಘಟ್ಟದಲ್ಲಿ ಸಾಗುತ್ತಿದೆ', ಹಾಗಾಗಿ ಇಂತಹ ಅರ್ಜಿಗಳು ಯಾವುದೇ ರೀತಿಯಲ್ಲೂ 'ಸಹಾಯ ಮಾಡುವುದಿಲ್ಲ' ಎಂದಿದ್ದಾರೆ. ಅಲ್ಲದೇ ಈ ಅರ್ಜಿಗಳ ತುರ್ತು ವಿಚಾರಣೆಯನ್ನು ನಿರಾಕರಿಸಿದ ಸುಪ್ರೀಂಕೋರ್ಟ್ ಹಿಂಸಾಚಾರ ನಿಲ್ಲಿಸಿದ ನಂತರವೇ ವಿಚಾರಣೆ ನಡೆಸುವುದಾಗಿ ಸ್ಪಷ್ಟವಾಗಿ ಹೇಳಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಸಾಂವಿಧಾನಿಕವೆಂದು ಘೋಷಿಸಬೇಕು ಮತ್ತು ಕಾನೂನು ಕೈಗೆತ್ತಿಕೊಂಡ 'ಕಾರ್ಯಕರ್ತರು, ವಿದ್ಯಾರ್ಥಿಗಳು, ಸುಳ್ಳು ಸುದ್ದಿ ಹರಡುವ ಮಾಧ್ಯಮಗಳ' ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಕೀಲ ವಿನೀತ್ ಧಂಡಾ ಎಂಬುವವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ, ಸಂಸತ್ತು ಅಂಗೀಕರಿಸಿದ ಕಾಯಿದೆಯನ್ನು ಸಾಂವಿಧಾನಿಕ ಎಂದು ನಾವು ಹೇಗೆ ಘೋಷಿಸಬಹುದು? ಅದಕ್ಕೆ ಯಾವಾಗಲೂ ಸಾಂವಿಧಾನಿಕತೆಯ ಶ್ರದ್ಧೆ ಇರುತ್ತದೆ. ನೀವು ಕಾನೂನಿನ ವಿದ್ಯಾರ್ಥಿಯಾಗಿದ್ದರೆ ತಿಳಿದುಕೊಳ್ಳಬೇಕು ಎಂದು ಸಿಜೆಐ ಪ್ರತಿಕ್ರಿಯಿಸಿದ್ದಾರೆ.

ಕಾನೂನಿನ ಸಿಂಧುತ್ವವನ್ನು ನಿರ್ಧರಿಸುವುದು ಮತ್ತು ಅದನ್ನು ಸಾಂವಿಧಾನಿಕವೆಂದು ಘೋಷಿಸದಿರುವುದು ಈ ನ್ಯಾಯಾಲಯದ ಕೆಲಸವಾಗಿದೆ ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊ ಳಗೊಂಡ ಮೂವರು ನ್ಯಾಯಾಧೀಶರ ಪೀಠ ಹೇಳಿದೆ.

ಈ ಕಾಯ್ದೆ ಸಂವಿಧಾನದ ಮನೋಭಾವಕ್ಕೆ ವಿರುದ್ಧವಾದುದಲ್ಲ. ಭಾರತದ ಯಾವುದೇ ನಾಗರಿಕರ ವಿರುದ್ಧವಾಗಿಲ್ಲ ಎಂದು ಸ್ಪಷ್ಟಪಡಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.

ಪೌರತ್ವ ಕಾಯ್ದೆ ಕುರಿತಂತೆ ಸುಪ್ರೀಂಕೋರ್ಟ್​​ಗೆ 60 ಕ್ಕೂ ಹೆಚ್ಚು ಅರ್ಜಿ ಸಲ್ಲಿಸಲಾಗಿದ್ದು ಇವುಗಳಲ್ಲಿ ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.