ನವದೆಹಲಿ: ಸಹೋದರ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ಗೆ ಜಾಮೀನು ಮಂಜೂರಾಗಿದ್ದಕ್ಕೆ ಡಿ.ಕೆ ಸುರೇಶ್ ಸಂತಸ ವ್ಯಕ್ತಪಡಿಸಿದರು.
ಮಾಜಿ ಸಚಿವ ಡಿ ಕೆ ಶಿವಕುಮಾರ್ ಗೆ ಜಾಮೀನು ಮಂಜೂರಾಗಿರುವುದು ಸಂತಸ ತಂದಿದೆ. ಕಳೆದ 50 ದಿನಗಳಿಂದ ಮಾನಸಿಕ ಹಿಂಸೆ ಅನುಭವಿಸಿದ್ದೆವು. ಅವರಿಗೆ ಜಾಮೀನು ಸಿಕ್ಕಿದ್ದು ಖುಷಿಯ ವಿಚಾರ. ದೆಹಲಿ ಹೈಕೋರ್ಟ್ನಲ್ಲಿ ನಮಗೆ ನ್ಯಾಯ ಸಿಕ್ಕಿದೆ ಎಂದು ಸಂಸದ ಡಿ.ಕೆ ಸುರೇಶ್ ತಿಳಿಸಿದರು.
ವಕೀಲರ ಜೊತೆ ಚರ್ಚಿಸಿ ಮುಂದಿನ ನಡೆ ಏನು ಎಂಬುದನ್ನು ನಿರ್ಧರಿಸುತ್ತೇವೆ. ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟ್ಗೆ ಹೋದರೆ, ಅಲ್ಲೂ ಹೋರಅಡಿ ನ್ಯಾಯ ಪಡೆಯುತ್ತೇವೆ ಎಂದು ಡಿ.ಕೆ ಸುರೇಶ್ ಹೇಳಿದರು.