ETV Bharat / bharat

ಮತ್ತೆ ಕೊರೊನಾ ಪರೀಕ್ಷೆಗೊಳಗಾದ ದೆಹಲಿ ಆರೋಗ್ಯ ಸಚಿವ

author img

By

Published : Jun 17, 2020, 6:35 PM IST

ತೀವ್ರ ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರನ್ನು ಇಂದು ಮತ್ತೆ COVID-19ಗೆ ಪರೀಕ್ಷೆಗೊಳಪಡಿಸಲಾಯಿತು. ಮಂಗಳವಾರ ನೆಗೆಟಿವ್ ಬಂದಿತ್ತು. ಹಾಗಾಗಿ ಇಂದು ಸಹ ಪರೀಕ್ಷೆಗೆ ಹಾಜರಾಗಿದ್ದರು.

Delhi's Health Minister Satyendar Jain again tested for COVID-19, results awaited
ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ಇಂದು ಸಹ ಕೋವಿಡ್ -19 ಪರೀಕ್ಷೆ ಮಾಡಿಕೊಂಡಿದ್ದು ವರದಿಗಾಗಿ ಕಾಯುತ್ತಿರುವುದಾಗಿ ತಿಳಿದು ಬಂದಿದೆ.

ಸೋಮವಾರ ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆ ಕಾರಣದಿಂದ ಸಚಿವರನ್ನು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಅವರ ವರದಿ ನೆಗೆಟಿವ್ ಎಂದು ಬಂದಿತ್ತು.

  • Due to high grade fever and a sudden drop of my oxygen levels last night I have been admitted to RGSSH. Will keep everyone updated

    — Satyendar Jain (@SatyendarJain) June 16, 2020 " class="align-text-top noRightClick twitterSection" data=" ">

ಇನ್ನು ಕಳೆದ ರಾತ್ರಿ ಮತ್ತೆ ತೀವ್ರ ಜ್ವರ ಹಾಗೂ ಹಠಾತ್​ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಹಾಗಾಗಿ ಇಂದು ಮತ್ತೆ ಕೋವಿಡ್ -19 ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಟ್ವೀಟ್​ ಮಾಡಿದ್ದಾರೆ. ಅಲ್ಲದೆ ವರದಿಗಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾಳಜಿ ವಹಿಸಿರುವ ಸತ್ಯೇಂದರ್ ಜೈನ್​, ದಿನದ ಪೂರ್ತಿ ಜನರ ಸೇವೆಯಲ್ಲಿರುತ್ತೀರಿ, ದಯವಿಟ್ಟು ನಿಮ್ಮ ಆರೋಗ್ಯದ ಬಗ್ಗೆ ಗಮನ ಕೊಡಿ ಎಂದು ಸಲಹೆ ನೀಡಿದ್ದಾರೆ.

ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇತ್ತೀಚೆಗೆ ಕೊರೊನಾ ಪರೀಕ್ಷೆಗೆ ಗುರಿಪಡಿಸಲಾಗಿತ್ತು.

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ಇಂದು ಸಹ ಕೋವಿಡ್ -19 ಪರೀಕ್ಷೆ ಮಾಡಿಕೊಂಡಿದ್ದು ವರದಿಗಾಗಿ ಕಾಯುತ್ತಿರುವುದಾಗಿ ತಿಳಿದು ಬಂದಿದೆ.

ಸೋಮವಾರ ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆ ಕಾರಣದಿಂದ ಸಚಿವರನ್ನು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಅವರ ವರದಿ ನೆಗೆಟಿವ್ ಎಂದು ಬಂದಿತ್ತು.

  • Due to high grade fever and a sudden drop of my oxygen levels last night I have been admitted to RGSSH. Will keep everyone updated

    — Satyendar Jain (@SatyendarJain) June 16, 2020 " class="align-text-top noRightClick twitterSection" data=" ">

ಇನ್ನು ಕಳೆದ ರಾತ್ರಿ ಮತ್ತೆ ತೀವ್ರ ಜ್ವರ ಹಾಗೂ ಹಠಾತ್​ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಹಾಗಾಗಿ ಇಂದು ಮತ್ತೆ ಕೋವಿಡ್ -19 ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಟ್ವೀಟ್​ ಮಾಡಿದ್ದಾರೆ. ಅಲ್ಲದೆ ವರದಿಗಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾಳಜಿ ವಹಿಸಿರುವ ಸತ್ಯೇಂದರ್ ಜೈನ್​, ದಿನದ ಪೂರ್ತಿ ಜನರ ಸೇವೆಯಲ್ಲಿರುತ್ತೀರಿ, ದಯವಿಟ್ಟು ನಿಮ್ಮ ಆರೋಗ್ಯದ ಬಗ್ಗೆ ಗಮನ ಕೊಡಿ ಎಂದು ಸಲಹೆ ನೀಡಿದ್ದಾರೆ.

ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇತ್ತೀಚೆಗೆ ಕೊರೊನಾ ಪರೀಕ್ಷೆಗೆ ಗುರಿಪಡಿಸಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.