ETV Bharat / bharat

ಪ್ರವಾಸ ಮೊಟಕುಗೊಳಿಸಿ ವಾಪಸ್​​​​ ಬರಬೇಡಿ; ನೋವಿನ ನಡುವೆಯೂ ಮೋದಿಗೆ ಜೇಟ್ಲಿ ಪತ್ನಿ ಮನವಿ!

author img

By

Published : Aug 24, 2019, 9:27 PM IST

Updated : Aug 24, 2019, 10:14 PM IST

ಬಿಜೆಪಿ ಹಿರಿಯ ಮುಖಂಡ ಅರುಣ್​ ಜೇಟ್ಲಿ ವಿಧಿವಶರಾಗಿದ್ದು, ನಾಳೆ ಅಂತ್ಯಕ್ರಿಯೆ ನಡೆಯಲಿದೆ. ಇದರ ಮಧ್ಯೆ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ವಾಪಸ್​ ಬರಬೇಡಿ ಎಂದು ಜೇಟ್ಲಿ ಪತ್ನಿ ಮನವಿ ಮಾಡಿಕೊಂಡಿದ್ದಾರೆ.

ಅರುಣ್​ ಜೇಟ್ಲಿ/Arun Jaitley

ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ, ಬಿಜೆಪಿ ಹಿರಿಯ ಮುಖಂಡ ಅರುಣ್​ ಜೇಟ್ಲಿ ಇಂದು ಮಧ್ಯಾಹ್ನ 12.30ಕ್ಕೆ ನವದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈಗಾಗಲೇ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಗಣ್ಯಾತಿಗಣ್ಯರು ಅವರ ಅಂತಿಮ ದರ್ಶನ ಪಡೆದಿದ್ದು, ನಾಳೆ ಸಕಲ-ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್​​, ಯುಎಇ ಹಾಗೂ ಬಹ್ರೇನ್​​ ಪ್ರವಾಸದಲ್ಲಿದ್ದಾರೆ. ಜೇಟ್ಲಿ ಅವರ ನಿಧನದ ಸುದ್ದಿ ತಿಳಿದು ಪ್ರಧಾನಿ ಮೋದಿ ಜೇಟ್ಲಿ ಪತ್ನಿಯೊಂದಿಗೆ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ. ಇದೇ ವೇಳೆ ಅರುಣ್​ ಜೇಟ್ಲಿ ಪತ್ನಿ ಸಂಗೀತಾ ಹಾಗೂ ಮಗ ರೋಹನ್​, ಯಾವುದೇ ಕಾರಣಕ್ಕೂ ವಿದೇಶ ಪ್ರವಾಸ ಮೊಟಕುಗೊಳಿಸಿ ವಾಪಸ್​ ಬರಬೇಡಿ ಎಂದು ಪ್ರಧಾನಿ ಮೋದಿ ಬಳಿ ಮನವಿ ಮಾಡಿಕೊಂಡಿದ್ದಾರೆ.

PM modi
ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್, ಯುಎಇ ಮತ್ತು ಬಹ್ರೇನ್​​ ದೇಶಗಳ ಪ್ರವಾಸದಲ್ಲಿರುವ ಕಾರಣ, ಅವರು ವಿದೇಶ ಪ್ರವಾಸ ಮೊಟುಕುಗೊಳಿಸಿ ವಾಪಸ್​ ಬರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಖುದ್ದಾಗಿ ಜೇಟ್ಲಿ ಪತ್ನಿ ಹಾಗೂ ಮಗ ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇಂದು ಸಂಜೆ ಬಹ್ರೇನ್​​ ತಲುಪಿರುವ ಮೋದಿ ಭಾನುವಾರ ಫ್ರಾನ್ಸ್​ಗೆ ತೆರಳಿ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿ ನಿಗದಿತ ವೇಳಾಪಟ್ಟಿಯಂತೆ ಸೋಮವಾರ ಸ್ವದೇಶಕ್ಕೆ ಮರಳಿದ್ದಾರೆ

ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ, ಬಿಜೆಪಿ ಹಿರಿಯ ಮುಖಂಡ ಅರುಣ್​ ಜೇಟ್ಲಿ ಇಂದು ಮಧ್ಯಾಹ್ನ 12.30ಕ್ಕೆ ನವದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈಗಾಗಲೇ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಗಣ್ಯಾತಿಗಣ್ಯರು ಅವರ ಅಂತಿಮ ದರ್ಶನ ಪಡೆದಿದ್ದು, ನಾಳೆ ಸಕಲ-ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್​​, ಯುಎಇ ಹಾಗೂ ಬಹ್ರೇನ್​​ ಪ್ರವಾಸದಲ್ಲಿದ್ದಾರೆ. ಜೇಟ್ಲಿ ಅವರ ನಿಧನದ ಸುದ್ದಿ ತಿಳಿದು ಪ್ರಧಾನಿ ಮೋದಿ ಜೇಟ್ಲಿ ಪತ್ನಿಯೊಂದಿಗೆ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ. ಇದೇ ವೇಳೆ ಅರುಣ್​ ಜೇಟ್ಲಿ ಪತ್ನಿ ಸಂಗೀತಾ ಹಾಗೂ ಮಗ ರೋಹನ್​, ಯಾವುದೇ ಕಾರಣಕ್ಕೂ ವಿದೇಶ ಪ್ರವಾಸ ಮೊಟಕುಗೊಳಿಸಿ ವಾಪಸ್​ ಬರಬೇಡಿ ಎಂದು ಪ್ರಧಾನಿ ಮೋದಿ ಬಳಿ ಮನವಿ ಮಾಡಿಕೊಂಡಿದ್ದಾರೆ.

PM modi
ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್, ಯುಎಇ ಮತ್ತು ಬಹ್ರೇನ್​​ ದೇಶಗಳ ಪ್ರವಾಸದಲ್ಲಿರುವ ಕಾರಣ, ಅವರು ವಿದೇಶ ಪ್ರವಾಸ ಮೊಟುಕುಗೊಳಿಸಿ ವಾಪಸ್​ ಬರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಖುದ್ದಾಗಿ ಜೇಟ್ಲಿ ಪತ್ನಿ ಹಾಗೂ ಮಗ ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇಂದು ಸಂಜೆ ಬಹ್ರೇನ್​​ ತಲುಪಿರುವ ಮೋದಿ ಭಾನುವಾರ ಫ್ರಾನ್ಸ್​ಗೆ ತೆರಳಿ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿ ನಿಗದಿತ ವೇಳಾಪಟ್ಟಿಯಂತೆ ಸೋಮವಾರ ಸ್ವದೇಶಕ್ಕೆ ಮರಳಿದ್ದಾರೆ

Intro:Body:

ಪ್ರವಾಸ ಮೊಟಕುಗೊಳಿಸಿ ವಾಪಸ್​ ಬರಬೇಡಿ; ಮೊದಿ ಬಳಿ ಮನವಿ ಮಾಡಿದ ಜೇಟ್ಲಿ ಪತ್ನಿ! 



ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ,ಬಿಜೆಪಿ ಹಿರಿಯ ಮುಖಂಡ ಅರುಣ್​ ಜೇಟ್ಲಿ ಇಂದು ಮಧ್ಯಾಹ್ನ 12.30ಕ್ಕೆ ನವದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈಗಾಗಲೇ ಬಿಜೆಪಿ ಸೇರಿ ವಿವಿಧ ಪಕ್ಷಗಳ ಗಣ್ಯಾತಿಗಣ್ಯರು ಅವರ ಅಂತಿಮ ದರ್ಶನ ಪಡೆದಿದ್ದು, ನಾಳೆ ಸಕಲ-ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. 



ಇನ್ನು ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್​​,ಯುಎಇ ಹಾಗೂ ಬಹ್ರೈನ್​ ಪ್ರವಾಸದಲ್ಲಿದ್ದಾರೆ.ಅವರ ನಿಧನದ ಸುದ್ದಿ ತಿಳಿದು ಪ್ರಧಾನಿ ಮೋದಿ ಜೇಟ್ಲಿ ಪತ್ನಿಯೊಂದಿಗೆ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ. ಇದೇ ವೇಳೆ ಅರುಣ್​ ಜೇಟ್ಲಿ ಪತ್ನಿ ಸಂಗೀತಾ ಹಾಗೂ ಮಗ ರೋಹನ್​, ಯಾವುದೇ ಕಾರಣಕ್ಕೂ ವಿದೇಶಿ ಪ್ರವಾಸ ಮೊಟಕುಗೊಳಿಸಿ ವಾಪಸ್​ ಬರಬೇಡಿ ಎಂದು ಪ್ರಧಾನಿ ಮೋದಿ ಬಳಿ ಮನವಿ ಮಾಡಿಕೊಂಡಿದ್ದಾರೆ. 



ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್, ಯುಎಇ ಮತ್ತು ಬಹರೇನ್​ ದೇಶಗಳ ಪ್ರವಾಸದಲ್ಲಿರುವ ಕಾರಣ, ಅವರು ವಿದೇಶ ಪ್ರವಾಸ ಮೊಟುಕುಗೊಳಿಸಿ ವಾಪಸ್​ ಬರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಖುದ್ದಾಗಿ ಜೇಟ್ಲಿ ಪತ್ನಿ ಹಾಗೂ ಮನವಿ ಮಾಡಿಕೊಂಡಿದ್ದಾರೆ. 



ಇಂದು ಸಂಜೆ ಬಹರೇನ್​ ತಲುಪಿರುವ ಮೋದಿ ಭಾನುವಾರ ಫ್ರಾನ್ಸ್​ಗೆ ತೆರಳಿ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿ  ನಿಗದಿತ ವೇಳಾಪಟ್ಟಿಯಂತೆ ಸೋಮವಾರ ಸ್ವದೇಶಕ್ಕೆ ಮರಳಿದ್ದಾರೆ.


Conclusion:
Last Updated : Aug 24, 2019, 10:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.