ETV Bharat / bharat

ಅಪಪ್ರಚಾರವನ್ನು ನಂಬಬೇಡಿ ; ರೈತರಿಗೆ ಕೃಷಿ ಸಚಿವ ತೋಮರ್‌ 8 ಪುಟಗಳ ಪತ್ರ

author img

By

Published : Dec 18, 2020, 6:50 AM IST

ಕೇಂದ್ರ ಸರ್ಕಾರದ ಈ ನೂತನ ಕಾಯ್ದೆಗಳನ್ನು ಅನೇಕ ರೈತರು ಒಪ್ಪಿಕೊಂಡಿದ್ದಾರೆ. ಆದರೆ, ಕೆಲವು ಸಂಘಟನೆಗಳು ಮಾತ್ರ ಸಮಸ್ಯೆ ಸೃಷ್ಟಿಸುತ್ತಿವೆ ಎಂದು ತೋಮರ್‌ ಪತ್ರದಲ್ಲಿ ಬರೆದಿದ್ದಾರೆ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಜವಾಬ್ದಾರಿ ಎಂದು ಭಾವಿಸಿದ್ದೇವೆ..

Dont Fall Prey to lies of opposition on new farm laws agri min in open letter to farmers
ಅಪಪ್ರಚಾರವನ್ನು ನಂಬಬೇಡಿ; ರೈತರಿಗೆ ಕೃಷಿ ಸಚಿವ ತೋಮರ್‌ 8 ಪುಟಗಳ ಪತ್ರ

ನವದೆಹಲಿ : ಹೊಸದಾಗಿ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ರೈತರಿಗೆ ಪತ್ರ ಬರೆದಿದ್ದಾರೆ.

ಕಾಯ್ದೆಗಳ ಬಗ್ಗೆ ಕಾಂಗ್ರೆಸ್‌, ವಿಪಕ್ಷಗಳ ಬೂಟಾಟಿಕೆ ಮಾತುಗಳನ್ನು ನಂಬಬೇಡಿ, ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸೂಚಿಸಿದ್ದಾರೆ. ಅನ್ನದಾತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ತಮ್ಮ 8 ಪುಟಗಳ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

  • Union Agriculture Minister Narendra Singh Tomar writes an open letter to farmers over the new farm laws. He writes, "Misunderstanding has been created among some farmers' unions regarding these laws". pic.twitter.com/KiNsW043Rz

    — ANI (@ANI) December 17, 2020 " class="align-text-top noRightClick twitterSection" data=" ">

ರೈತರ ಕ್ಷೇಮಕ್ಕಾಗಿ ಪ್ರಧಾನಿ ಮೋದಿ ಸರ್ಕಾರ ಬದ್ಧವಾಗಿದೆ. ಸಣ್ಣ, ಮಧ್ಯಮ ವರ್ಗದ ರೈತರ ಅನುಕೂಲಕ್ಕಾಗಿ ಹೊಸದಾಗಿ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದು ಪುನರುಚ್ಚರಿಸಿದ್ದಾರೆ. ಕನಿಷ್ಠ ಬೆಂಬಲ ಬೆಲ(ಎಂಎಸ್‌ಪಿ) ಮುಂದುವರಿಯಲಿದೆ.

ಪ್ರಸ್ತುತ ಇರುವ ಮಂಡಿ ವ್ಯವಸ್ಥೆಯನ್ನು ಬಲಪಡಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಅನ್ನದಾತರು ತಮ್ಮ ಭೂಮಿಯನ್ನು ಕಾರ್ಪೊರೇಟ್‌ ಸಂಸ್ಥೆಗಳು ನಿಯಂತ್ರಿಸಲು ಈ ಕಾಯಿದೆಯಲ್ಲಿ ಯಾವುದೇ ನಿಬಂಧನೆಗಳು ಇಲ್ಲ.

ಕೇಂದ್ರ ಸರ್ಕಾರದ ಈ ನೂತನ ಕಾಯ್ದೆಗಳನ್ನು ಅನೇಕ ರೈತರು ಒಪ್ಪಿಕೊಂಡಿದ್ದಾರೆ. ಆದರೆ, ಕೆಲವು ಸಂಘಟನೆಗಳು ಮಾತ್ರ ಸಮಸ್ಯೆ ಸೃಷ್ಟಿಸುತ್ತಿವೆ ಎಂದು ತೋಮರ್‌ ಪತ್ರದಲ್ಲಿ ಬರೆದಿದ್ದಾರೆ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಜವಾಬ್ದಾರಿ ಎಂದು ಭಾವಿಸಿದ್ದೇವೆ ಎಂದು ತಿಳಿಸಿದ್ದಾರೆ. ವಿಪಕ್ಷಗಳ ಪಿತೂರಿಯನ್ನು ಬಹಿರಂಗ ಮಾಡುತ್ತೇವೆ. ವಾಸ್ತವತೆಯನ್ನು ಬಹಿರಂಗ ಪಡೆಸುವುದು ನಮ್ಮ ಕರ್ತವ್ಯ ಎಂದಿದ್ದಾರೆ.

  • कृषि मंत्री @nstomar जी ने किसान भाई-बहनों को पत्र लिखकर अपनी भावनाएं प्रकट की हैं, एक विनम्र संवाद करने का प्रयास किया है। सभी अन्नदाताओं से मेरा आग्रह है कि वे इसे जरूर पढ़ें। देशवासियों से भी आग्रह है कि वे इसे ज्यादा से ज्यादा लोगों तक पहुंचाएं। https://t.co/9B4d5pyUF1

    — Narendra Modi (@narendramodi) December 17, 2020 " class="align-text-top noRightClick twitterSection" data=" ">

ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಬರೆದಿರುವ ಪತ್ರವನ್ನು ರೈತರ ಓದಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕೋರಿದ್ದಾರೆ. ಆತ ಬರೆದಿರುವ ವಿನಯಪೂರ್ವಕವಾದ ಪತ್ರವನ್ನು ರೈತರು ಓದಿ ಅರ್ಥ ಮಾಡಿಕೊಳ್ಳಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

ನವದೆಹಲಿ : ಹೊಸದಾಗಿ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ರೈತರಿಗೆ ಪತ್ರ ಬರೆದಿದ್ದಾರೆ.

ಕಾಯ್ದೆಗಳ ಬಗ್ಗೆ ಕಾಂಗ್ರೆಸ್‌, ವಿಪಕ್ಷಗಳ ಬೂಟಾಟಿಕೆ ಮಾತುಗಳನ್ನು ನಂಬಬೇಡಿ, ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸೂಚಿಸಿದ್ದಾರೆ. ಅನ್ನದಾತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ತಮ್ಮ 8 ಪುಟಗಳ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

  • Union Agriculture Minister Narendra Singh Tomar writes an open letter to farmers over the new farm laws. He writes, "Misunderstanding has been created among some farmers' unions regarding these laws". pic.twitter.com/KiNsW043Rz

    — ANI (@ANI) December 17, 2020 " class="align-text-top noRightClick twitterSection" data=" ">

ರೈತರ ಕ್ಷೇಮಕ್ಕಾಗಿ ಪ್ರಧಾನಿ ಮೋದಿ ಸರ್ಕಾರ ಬದ್ಧವಾಗಿದೆ. ಸಣ್ಣ, ಮಧ್ಯಮ ವರ್ಗದ ರೈತರ ಅನುಕೂಲಕ್ಕಾಗಿ ಹೊಸದಾಗಿ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದು ಪುನರುಚ್ಚರಿಸಿದ್ದಾರೆ. ಕನಿಷ್ಠ ಬೆಂಬಲ ಬೆಲ(ಎಂಎಸ್‌ಪಿ) ಮುಂದುವರಿಯಲಿದೆ.

ಪ್ರಸ್ತುತ ಇರುವ ಮಂಡಿ ವ್ಯವಸ್ಥೆಯನ್ನು ಬಲಪಡಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಅನ್ನದಾತರು ತಮ್ಮ ಭೂಮಿಯನ್ನು ಕಾರ್ಪೊರೇಟ್‌ ಸಂಸ್ಥೆಗಳು ನಿಯಂತ್ರಿಸಲು ಈ ಕಾಯಿದೆಯಲ್ಲಿ ಯಾವುದೇ ನಿಬಂಧನೆಗಳು ಇಲ್ಲ.

ಕೇಂದ್ರ ಸರ್ಕಾರದ ಈ ನೂತನ ಕಾಯ್ದೆಗಳನ್ನು ಅನೇಕ ರೈತರು ಒಪ್ಪಿಕೊಂಡಿದ್ದಾರೆ. ಆದರೆ, ಕೆಲವು ಸಂಘಟನೆಗಳು ಮಾತ್ರ ಸಮಸ್ಯೆ ಸೃಷ್ಟಿಸುತ್ತಿವೆ ಎಂದು ತೋಮರ್‌ ಪತ್ರದಲ್ಲಿ ಬರೆದಿದ್ದಾರೆ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಜವಾಬ್ದಾರಿ ಎಂದು ಭಾವಿಸಿದ್ದೇವೆ ಎಂದು ತಿಳಿಸಿದ್ದಾರೆ. ವಿಪಕ್ಷಗಳ ಪಿತೂರಿಯನ್ನು ಬಹಿರಂಗ ಮಾಡುತ್ತೇವೆ. ವಾಸ್ತವತೆಯನ್ನು ಬಹಿರಂಗ ಪಡೆಸುವುದು ನಮ್ಮ ಕರ್ತವ್ಯ ಎಂದಿದ್ದಾರೆ.

  • कृषि मंत्री @nstomar जी ने किसान भाई-बहनों को पत्र लिखकर अपनी भावनाएं प्रकट की हैं, एक विनम्र संवाद करने का प्रयास किया है। सभी अन्नदाताओं से मेरा आग्रह है कि वे इसे जरूर पढ़ें। देशवासियों से भी आग्रह है कि वे इसे ज्यादा से ज्यादा लोगों तक पहुंचाएं। https://t.co/9B4d5pyUF1

    — Narendra Modi (@narendramodi) December 17, 2020 " class="align-text-top noRightClick twitterSection" data=" ">

ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಬರೆದಿರುವ ಪತ್ರವನ್ನು ರೈತರ ಓದಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕೋರಿದ್ದಾರೆ. ಆತ ಬರೆದಿರುವ ವಿನಯಪೂರ್ವಕವಾದ ಪತ್ರವನ್ನು ರೈತರು ಓದಿ ಅರ್ಥ ಮಾಡಿಕೊಳ್ಳಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.