ETV Bharat / bharat

ಶರದ್​ ಪವಾರ್​​ಗೂ ಇಡಿ ಕಂಟಕ... ಮಹಾರಾಷ್ಟ್ರ ಬ್ಯಾಂಕ್​ ಹಗರಣದಲ್ಲಿ ಸಂಕಷ್ಟ!

author img

By

Published : Sep 24, 2019, 10:30 PM IST

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್​ (ಎಂಎಸ್​ಸಿಬಿ) ಹಗರಣ ಪ್ರಕರಣದಲ್ಲಿ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್ ಹಾಗೂ ಅವರ ಸೋದರಳಿಯ, ಮಾಜಿ ಉಪ ಮುಖ್ಯಮಂತ್ರಿ ಅಜಿತ್​ ಪವಾರ್​ ವಿರುದ್ಧ ಅಕ್ರಮ ಹಣ ವಹಿವಾಟು ಆರೋಪದ ಮೇಲೆ ಇಡಿಯಿಂದ ಪ್ರಕರಣ ದಾಖಲಾಗಿದೆ.

ಶರದ್​ ಪವಾರ್

ನವದೆಹಲಿ: ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್​ (ಎಂಎಸ್​ಸಿಬಿ) ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವಹಿವಾಟು ಆರೋಪದ ಮೇಲೆ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್ ಹಾಗೂ ಅವರ ಸೋದರಳಿಯ, ಮಾಜಿ ಉಪ ಮುಖ್ಯಮಂತ್ರಿ ಅಜಿತ್​ ಪವಾರ್​ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಕರಣ ದಾಖಲಿಸಿಕೊಂಡಿದೆ.

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್‌ಗೆ ಸಂಬಂಧಿಸಿದ 25,000 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಸಹಕಾರಿ ಬ್ಯಾಂಕ್​ನ 70 ಮಾಜಿ ಕಾರ್ಯಕಾರಿಗಳ ಮೇಲೆಯೂ ಕೂಡ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

21ನೇ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಶರದ್​ ಪವಾರ್​ ವಿರುದ್ಧ ಈ ಪ್ರಕರಣ ದಾಖಲಾಗಿದೆ. ಹಾಗೆಯೇ ಇಡಿಯಿಂದ ಇನ್ನು ಕೆಲವೇ ದಿನಗಳಲ್ಲಿ ಪ್ರಕರಣ ಸಂಬಂಧ ಹೇಳಿಕೆ ಪಡೆಯಲು ಸಮನ್ಸ್​ ಜಾರಿಯಾಗುವ ಸಾಧ್ಯತೆ ಇದೆ.

ಇಡಿ ಪ್ರಕರಣದ ಆರೋಪಿಗಳಾದ ದಿಲಿಪ್ರಾವ್ ದೇಶ್​​ಮುಖ್​, ಇಶರ್ಲಾಲ್ ಜೈನ್, ಜಯಂತ್ ಪಾಟೀಲ್, ಶಿವಾಜಿ ರಾವ್, ಆನಂದ್ ರಾವ್ ಆಡ್ಸುಲ್, ರಾಜೇಂದ್ರ ಶಿಂಗಾನೆ ಮತ್ತು ಮದನ್ ಪಾಟೀಲ್ ಸೇರಿದ್ದಾರೆ. ಈ ಸಂಬಂಧ ಕಳೆದ ತಿಂಗಳು ಬಾಂಬೆ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಎಂಎಸ್‌ಸಿಬಿ ಹಗರಣ ಪ್ರಕರಣದಲ್ಲಿ ಅಜಿತ್ ಪವಾರ್ ಮತ್ತು ಇತರ ಕಾರ್ಯಕರ್ತರ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್​ (ಎಂಎಸ್​ಸಿಬಿ) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 2007ರಿಂದ 2011ರವೆರೆಗೆ ಬ್ಯಾಂಕ್​ಗೆ ಉಂಟಾದ 1000 ಕೋಟಿ ರೂ. ನಷ್ಟಕ್ಕೆ ಕಾರಣವಾದ ಆರೋಪ ಇವರ ಮೇಲೆ ಕೇಳಿಬಂದಿತ್ತು.

.

ನವದೆಹಲಿ: ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್​ (ಎಂಎಸ್​ಸಿಬಿ) ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವಹಿವಾಟು ಆರೋಪದ ಮೇಲೆ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್ ಹಾಗೂ ಅವರ ಸೋದರಳಿಯ, ಮಾಜಿ ಉಪ ಮುಖ್ಯಮಂತ್ರಿ ಅಜಿತ್​ ಪವಾರ್​ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಕರಣ ದಾಖಲಿಸಿಕೊಂಡಿದೆ.

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್‌ಗೆ ಸಂಬಂಧಿಸಿದ 25,000 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಸಹಕಾರಿ ಬ್ಯಾಂಕ್​ನ 70 ಮಾಜಿ ಕಾರ್ಯಕಾರಿಗಳ ಮೇಲೆಯೂ ಕೂಡ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

21ನೇ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಶರದ್​ ಪವಾರ್​ ವಿರುದ್ಧ ಈ ಪ್ರಕರಣ ದಾಖಲಾಗಿದೆ. ಹಾಗೆಯೇ ಇಡಿಯಿಂದ ಇನ್ನು ಕೆಲವೇ ದಿನಗಳಲ್ಲಿ ಪ್ರಕರಣ ಸಂಬಂಧ ಹೇಳಿಕೆ ಪಡೆಯಲು ಸಮನ್ಸ್​ ಜಾರಿಯಾಗುವ ಸಾಧ್ಯತೆ ಇದೆ.

ಇಡಿ ಪ್ರಕರಣದ ಆರೋಪಿಗಳಾದ ದಿಲಿಪ್ರಾವ್ ದೇಶ್​​ಮುಖ್​, ಇಶರ್ಲಾಲ್ ಜೈನ್, ಜಯಂತ್ ಪಾಟೀಲ್, ಶಿವಾಜಿ ರಾವ್, ಆನಂದ್ ರಾವ್ ಆಡ್ಸುಲ್, ರಾಜೇಂದ್ರ ಶಿಂಗಾನೆ ಮತ್ತು ಮದನ್ ಪಾಟೀಲ್ ಸೇರಿದ್ದಾರೆ. ಈ ಸಂಬಂಧ ಕಳೆದ ತಿಂಗಳು ಬಾಂಬೆ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಎಂಎಸ್‌ಸಿಬಿ ಹಗರಣ ಪ್ರಕರಣದಲ್ಲಿ ಅಜಿತ್ ಪವಾರ್ ಮತ್ತು ಇತರ ಕಾರ್ಯಕರ್ತರ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್​ (ಎಂಎಸ್​ಸಿಬಿ) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 2007ರಿಂದ 2011ರವೆರೆಗೆ ಬ್ಯಾಂಕ್​ಗೆ ಉಂಟಾದ 1000 ಕೋಟಿ ರೂ. ನಷ್ಟಕ್ಕೆ ಕಾರಣವಾದ ಆರೋಪ ಇವರ ಮೇಲೆ ಕೇಳಿಬಂದಿತ್ತು.

.

Intro:Body:



ED Files Money Laundering Case against NCP's Sharad Pawar


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.