ETV Bharat / bharat

ಹೈದರಾಬಾದ್​ ಹೊರತುಪಡಿಸಿ ತೆಲಂಗಾಣದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳಿಲ್ಲ: ಕೆಸಿಆರ್​ - ತೆಲಂಗಾಣದಲ್ಲಿ ಕೊರೊನಾ ಪ್ರಕರಣ

ಹೈದರಾಬಾದ್ ನಗರದ 4 ವಲಯಗಳಲ್ಲಿ ಮಾತ್ರ ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಈ ವಲಯಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಕೆಸಿಆರ್​ ಸ್ಪಷ್ಟಪಡಿಸಿದ್ದಾರೆ.

coronavirus active cases in Hyderabad
ಕೆ.ಚಂದ್ರಶೇಖರ್ ರಾವ್
author img

By

Published : May 16, 2020, 9:44 AM IST

ಹೈದರಾಬಾದ್ (ತೆಲಂಗಾಣ): ಹೈದರಾಬಾದ್‌ನ ನಾಲ್ಕು ವಲಯಗಳನ್ನು ಹೊರತುಪಡಿಸಿ ರಾಜ್ಯದಲ್ಲಿ ಯಾವುದೇ ಕೊರೊನಾ ಸಕ್ರಿಯ ಪ್ರಕರಣಗಳಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸ್ಪಷ್ಟಪಡಿಸಿದ್ದಾರೆ.

ಹೈದರಾಬಾದ್ ನಗರದ ನಾಲ್ಕು ವಲಯಗಳಾದ ಎಲ್​ಬಿ ನಗರ, ಮಲಕ್​​ಪೇಟ್​​, ಚಾರ್​ ಮಿನಾರ್, ಕಾರ್ವಾನ್ ವಲಯಗಳಲ್ಲಿ ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳಿವೆ. ಈ ಪ್ರದೇಶಗಳಲ್ಲಿ ಸುಮಾರು 1,442 ಕುಟುಂಬಗಳಿವೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಲಾಕ್​ಡೌನ್​ ಮುಂದುವರಿಯುತ್ತದೆ. ಕೇಂದ್ರವು ಘೋಷಿಸಿರುವ ಲಾಕ್​​ಡೌನ್ ಮುಗಿದ ನಂತರ ಮೇ 17ರಂದು ಕೇಂದ್ರ ನೀಡುವ ಮಾರ್ಗಸೂಚಿಗಳ ಆಧಾರದ ಮೇಲೆ ಮುಂದಿನ ಕಾರ್ಯತಂತ್ರವನ್ನು ಅಂತಿಮಗೊಳಿಸಲಾಗುವುದು ಎಂದು ಕೆಸಿಆರ್​ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಪ್ರಯತ್ನಗಳು ಮುಂದುವರೆಯುತ್ತವೆ. ಈ ನಡುವೆ ಮಳೆಗಾಲದಲ್ಲಿ ಕಾಣಿಸಿಕೊಳ್ಳಬಹುದಾದ ಕಾಯಿಲೆಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೈದರಾಬಾದ್ (ತೆಲಂಗಾಣ): ಹೈದರಾಬಾದ್‌ನ ನಾಲ್ಕು ವಲಯಗಳನ್ನು ಹೊರತುಪಡಿಸಿ ರಾಜ್ಯದಲ್ಲಿ ಯಾವುದೇ ಕೊರೊನಾ ಸಕ್ರಿಯ ಪ್ರಕರಣಗಳಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸ್ಪಷ್ಟಪಡಿಸಿದ್ದಾರೆ.

ಹೈದರಾಬಾದ್ ನಗರದ ನಾಲ್ಕು ವಲಯಗಳಾದ ಎಲ್​ಬಿ ನಗರ, ಮಲಕ್​​ಪೇಟ್​​, ಚಾರ್​ ಮಿನಾರ್, ಕಾರ್ವಾನ್ ವಲಯಗಳಲ್ಲಿ ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳಿವೆ. ಈ ಪ್ರದೇಶಗಳಲ್ಲಿ ಸುಮಾರು 1,442 ಕುಟುಂಬಗಳಿವೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಲಾಕ್​ಡೌನ್​ ಮುಂದುವರಿಯುತ್ತದೆ. ಕೇಂದ್ರವು ಘೋಷಿಸಿರುವ ಲಾಕ್​​ಡೌನ್ ಮುಗಿದ ನಂತರ ಮೇ 17ರಂದು ಕೇಂದ್ರ ನೀಡುವ ಮಾರ್ಗಸೂಚಿಗಳ ಆಧಾರದ ಮೇಲೆ ಮುಂದಿನ ಕಾರ್ಯತಂತ್ರವನ್ನು ಅಂತಿಮಗೊಳಿಸಲಾಗುವುದು ಎಂದು ಕೆಸಿಆರ್​ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಪ್ರಯತ್ನಗಳು ಮುಂದುವರೆಯುತ್ತವೆ. ಈ ನಡುವೆ ಮಳೆಗಾಲದಲ್ಲಿ ಕಾಣಿಸಿಕೊಳ್ಳಬಹುದಾದ ಕಾಯಿಲೆಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.