ETV Bharat / bharat

ಆರ್ಥಿಕ ಪ್ಯಾಕೇಜ್​ ಘೋಷಿಸಿ : ಮಹಾರಾಷ್ಟ್ರ ಸರ್ಕಾರಕ್ಕೆ ಫಡ್ನವಿಸ್​​ ಆಗ್ರಹ

author img

By

Published : May 19, 2020, 5:19 PM IST

ಕೇಂದ್ರದ ಮಾದರಿಯಲ್ಲಿ ಆರ್ಥಿಕ ಪ್ಯಾಕೇಜ್​ ಘೋಷಿಸಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್​ ಮಹಾರಾಷ್ಟ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರಕ್ಕೆ ಫಡ್ನವೀಸ್ ಆಗ್ರಹ
ಮಹಾರಾಷ್ಟ್ರ ಸರ್ಕಾರಕ್ಕೆ ಫಡ್ನವೀಸ್ ಆಗ್ರಹ

ಮುಂಬೈ: ಆರ್ಥಿಕ ಉತ್ತೇಜನ ಪ್ಯಾಕೇಜ್ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬರೆದಿರುವ ಪತ್ರಕ್ಕೆ ಬಿಜೆಪಿಯ ಹಿರಿಯ ಮುಖಂಡ ದೇವೇಂದ್ರ ಫಡ್ನವಿಸ್​​​ ತಿರುಗೇಟು ನೀಡಿದ್ದಾರೆ.

ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವು ಕೇಂದ್ರ ಸರ್ಕಾರದಂತೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಮಹಾರಾಷ್ಟ್ರದಲ್ಲಿ ವಿಶೇಷ ಆರ್ಥಿಕ ಪ್ಯಾಕೇಜ್​ ಅನ್ನು ಘೋಷಿಸಲಿ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವಾರು ಪತ್ರಗಳನ್ನು ಬರೆದಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಉದ್ಧವ್ ಠಾಕ್ರೆ ಅವರಿಗೂ ಅಂತಹ ಒಂದು ಪತ್ರವನ್ನು ಬರೆಯಬೇಕು ಎಂದು ಫಡ್ನವಿಸ್ ಹೇಳಿದ್ದಾರೆ.

ಲಾಕ್‌ಡೌನ್ ಅವಧಿಯಲ್ಲಿ ರೈತರಿಗೆ ಆಗಿರುವ ನಷ್ಟವನ್ನು ಸರಿದೂಗಿಸಲು ಕೇಂದ್ರದ ಆರ್ಥಿಕ ಉತ್ತೇಜನ ಪ್ಯಾಕೇಜ್‌ನಲ್ಲಿ ನಿಬಂಧನೆಗಳ ಕೊರತೆಯಿದೆ ಎಂದು ಶರದ್ ಪವಾರ್ ಇತ್ತೀಚೆಗೆ ಪ್ರಧಾನ ಮಂತ್ರಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ ಪ್ಯಾಕೇಜ್ "ಪೂರೈಕೆ ಸರಪಳಿ ಕೇಂದ್ರಿತವಾಗಿದೆ" ಎಂದು ಅವರು ಹೇಳಿದ್ದಾರೆ. ಇದರ ಪ್ರಯೋಜನಗಳು ರೈತರನ್ನು ತಲುಪಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಆದರೆ, ಬಿಜೆಪಿ ಮಹಾರಾಷ್ಟ್ರ ವಿರೋಧಿ ಮತ್ತು ಪ್ರತಿ ವಿಷಯವನ್ನು ರಾಜಕೀಯಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಬಿಜೆಪಿಯ ಶಾಸಕರು ತಮ್ಮ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯನ್ನು ಪಿಎಂ ಕೇರ್ಸ್ ಫಂಡ್‌ಗೆ ದೇಣಿಗೆ ನೀಡಿದರು. ಅವರು ಸಿಎಂ ರಿಲೀಫ್ ಫಂಡ್‌ಗೆ ಏಕೆ ನೀಡಲಿಲ್ಲ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ಪ್ರಶ್ನಿಸಿದ್ದಾರೆ.

ಮುಂಬೈ: ಆರ್ಥಿಕ ಉತ್ತೇಜನ ಪ್ಯಾಕೇಜ್ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬರೆದಿರುವ ಪತ್ರಕ್ಕೆ ಬಿಜೆಪಿಯ ಹಿರಿಯ ಮುಖಂಡ ದೇವೇಂದ್ರ ಫಡ್ನವಿಸ್​​​ ತಿರುಗೇಟು ನೀಡಿದ್ದಾರೆ.

ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವು ಕೇಂದ್ರ ಸರ್ಕಾರದಂತೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಮಹಾರಾಷ್ಟ್ರದಲ್ಲಿ ವಿಶೇಷ ಆರ್ಥಿಕ ಪ್ಯಾಕೇಜ್​ ಅನ್ನು ಘೋಷಿಸಲಿ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವಾರು ಪತ್ರಗಳನ್ನು ಬರೆದಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಉದ್ಧವ್ ಠಾಕ್ರೆ ಅವರಿಗೂ ಅಂತಹ ಒಂದು ಪತ್ರವನ್ನು ಬರೆಯಬೇಕು ಎಂದು ಫಡ್ನವಿಸ್ ಹೇಳಿದ್ದಾರೆ.

ಲಾಕ್‌ಡೌನ್ ಅವಧಿಯಲ್ಲಿ ರೈತರಿಗೆ ಆಗಿರುವ ನಷ್ಟವನ್ನು ಸರಿದೂಗಿಸಲು ಕೇಂದ್ರದ ಆರ್ಥಿಕ ಉತ್ತೇಜನ ಪ್ಯಾಕೇಜ್‌ನಲ್ಲಿ ನಿಬಂಧನೆಗಳ ಕೊರತೆಯಿದೆ ಎಂದು ಶರದ್ ಪವಾರ್ ಇತ್ತೀಚೆಗೆ ಪ್ರಧಾನ ಮಂತ್ರಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ ಪ್ಯಾಕೇಜ್ "ಪೂರೈಕೆ ಸರಪಳಿ ಕೇಂದ್ರಿತವಾಗಿದೆ" ಎಂದು ಅವರು ಹೇಳಿದ್ದಾರೆ. ಇದರ ಪ್ರಯೋಜನಗಳು ರೈತರನ್ನು ತಲುಪಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಆದರೆ, ಬಿಜೆಪಿ ಮಹಾರಾಷ್ಟ್ರ ವಿರೋಧಿ ಮತ್ತು ಪ್ರತಿ ವಿಷಯವನ್ನು ರಾಜಕೀಯಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಬಿಜೆಪಿಯ ಶಾಸಕರು ತಮ್ಮ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯನ್ನು ಪಿಎಂ ಕೇರ್ಸ್ ಫಂಡ್‌ಗೆ ದೇಣಿಗೆ ನೀಡಿದರು. ಅವರು ಸಿಎಂ ರಿಲೀಫ್ ಫಂಡ್‌ಗೆ ಏಕೆ ನೀಡಲಿಲ್ಲ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ಪ್ರಶ್ನಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.