ETV Bharat / bharat

'ಕೃಷಿ ಕಾಯ್ದೆಗಳ ಸಮಿತಿ ವರದಿ ನೀಡುತ್ತದೆಯಷ್ಟೇ, ಪಕ್ಷಪಾತ ಎಲ್ಲಿಂದ ಬಂತು?': ಸುಪ್ರೀಂ ಚಾಟಿ

author img

By

Published : Jan 20, 2021, 4:04 PM IST

ಸಮಿತಿಯನ್ನು ಪುನರ್​​ರಚನೆ ಮಾಡಬೇಕೆಂದು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ನೇತೃತ್ವದ ಪೀಠ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಅರ್ಜಿಯಲ್ಲಿ ಪಕ್ಷಪಾತದ ಪ್ರಶ್ನೆಯಿಲ್ಲ ಎಂದು ಹೇಳಿದೆ.

Supreme Court
ಸುಪ್ರೀಂ ಕೋರ್ಟ್

ನವದೆಹಲಿ: ಕೃಷಿ ಕಾಯ್ದೆಗಳ ವಿಚಾರದಲ್ಲಿ ರಚಿಸಿರುವ ಸಮಿತಿಗೆ ಕಾಯ್ದೆಗಳನ್ನು ಊರ್ಜಿತಗೊಳಿಸಬೇಕೋ ಅಥವಾ ಅನೂರ್ಜಿತಗೊಳಿಸಬೇಕೋ ಎಂದು ಹೇಳುವ ಅಧಿಕಾರವಿಲ್ಲ. ಹೀಗಾಗಿ ಸಮಿತಿ ರಚನೆ ಪಕ್ಷಪಾತ ಹೇಗಾಗುತ್ತದೆ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಸಮಿತಿ ರಚನೆ ವಿಚಾರವಾಗಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ಕೃಷಿ ಕಾಯ್ದೆಗಳ ವಿಚಾರದಲ್ಲಿ ಎಲ್ಲರ ಅಭಿಪ್ರಾಯವನ್ನು ಪಡೆದು, ಅದರ ವರದಿಯನ್ನು ನಮಗೆ ಸಲ್ಲಿಸುವುದಷ್ಟೇ ಸಮಿತಿಯ ಕರ್ತವ್ಯವಾಗಿದ್ದು, ಇದರಲ್ಲಿ ಪಕ್ಷಪಾತ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಸ್ಪಷ್ಟಪಡಿಸಿದ್ದಾರೆ.

ಇದರ ಜೊತೆಗೆ ಸಮಿತಿಯ ಪುನರ್​​ ರಚನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹಿಂದಿನ ವಾರ ಕೃಷಿ ಕಾಯ್ದೆಗಳ ಜಾರಿಗೆ ತಡೆಯಾಜ್ಞೆ ತಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.

ಸುಪ್ರೀಂ ಕೋರ್ಟ್​ ಸಮಿತಿಯೊಂದನ್ನು ರಚಿಸಿ, ವರದಿಯನ್ನು ನೀಡುವಂತೆ ಸೂಚನೆ ನೀಡಲಾಗಿತ್ತು. ರಚಿಸಲಾಗಿದ್ದ ಸಮಿತಿ ಕೇಂದ್ರ ಸರ್ಕಾರದ ಪರವಾಗಿದೆಯೆಂದೂ, ತಾವು ಸಮಿತಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪೋತಿರೆಡ್ಡಿಪೇಟ TO ಶ್ವೇತಭವನ.. ಬೈಡನ್​ ಭಾಷಣದ ಹಿಂದೆ ಭಾರತೀಯನ ಪಾತ್ರ..

ಇದಾದ ಕೆಲದಿನಗಳ ನಂತರ ಸಮಿತಿಯನ್ನು ಪುನರ್​​ರಚನೆ ಮಾಡಬೇಕೆಂದು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ನೇತೃತ್ವದ ಪೀಠ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಅರ್ಜಿಯಲ್ಲಿ ಪಕ್ಷಪಾತದ ಪ್ರಶ್ನೆಯಿಲ್ಲ ಎಂದು ಖಡಾಖಂಡಿತವಾಗಿ ಹೇಳಿದೆ.

'ಟ್ರ್ಯಾಕ್ಟರ್ ರ‍್ಯಾಲಿ ತಡೆಯಾಜ್ಞೆ ಅರ್ಜಿ ಹಿಂಪಡೆದುಕೊಳ್ಳಿ'

ಜನವರಿ 26ರಂದು ಗಣರಾಜ್ಯೋತ್ಸವ ನಡೆಯಲಿದ್ದು, ಈ ವೇಳೆ ರೈತ ಸಂಘಟನೆಗಳು ನವದೆಹಲಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲು ಮುಂದಾಗಿದ್ದು, ಈ ಟ್ರ್ಯಾಕ್ಟರ್ ರ‍್ಯಾಲಿಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು.

ಈ ಹಿನ್ನೆಲೆಯಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದುಕೊಳ್ಳಿ ಎಂದು ಸುಪ್ರೀಂ ಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಜೊತೆಗೆ ರ‍್ಯಾಲಿ ವಿಚಾರದಲ್ಲಿ ನಾವು ಯಾವುದೇ ನಿರ್ದೇಶನ ನೀಡುವುದಿಲ್ಲ. ಅದು ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಿಚಾರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ನವದೆಹಲಿ: ಕೃಷಿ ಕಾಯ್ದೆಗಳ ವಿಚಾರದಲ್ಲಿ ರಚಿಸಿರುವ ಸಮಿತಿಗೆ ಕಾಯ್ದೆಗಳನ್ನು ಊರ್ಜಿತಗೊಳಿಸಬೇಕೋ ಅಥವಾ ಅನೂರ್ಜಿತಗೊಳಿಸಬೇಕೋ ಎಂದು ಹೇಳುವ ಅಧಿಕಾರವಿಲ್ಲ. ಹೀಗಾಗಿ ಸಮಿತಿ ರಚನೆ ಪಕ್ಷಪಾತ ಹೇಗಾಗುತ್ತದೆ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಸಮಿತಿ ರಚನೆ ವಿಚಾರವಾಗಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ಕೃಷಿ ಕಾಯ್ದೆಗಳ ವಿಚಾರದಲ್ಲಿ ಎಲ್ಲರ ಅಭಿಪ್ರಾಯವನ್ನು ಪಡೆದು, ಅದರ ವರದಿಯನ್ನು ನಮಗೆ ಸಲ್ಲಿಸುವುದಷ್ಟೇ ಸಮಿತಿಯ ಕರ್ತವ್ಯವಾಗಿದ್ದು, ಇದರಲ್ಲಿ ಪಕ್ಷಪಾತ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಸ್ಪಷ್ಟಪಡಿಸಿದ್ದಾರೆ.

ಇದರ ಜೊತೆಗೆ ಸಮಿತಿಯ ಪುನರ್​​ ರಚನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹಿಂದಿನ ವಾರ ಕೃಷಿ ಕಾಯ್ದೆಗಳ ಜಾರಿಗೆ ತಡೆಯಾಜ್ಞೆ ತಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.

ಸುಪ್ರೀಂ ಕೋರ್ಟ್​ ಸಮಿತಿಯೊಂದನ್ನು ರಚಿಸಿ, ವರದಿಯನ್ನು ನೀಡುವಂತೆ ಸೂಚನೆ ನೀಡಲಾಗಿತ್ತು. ರಚಿಸಲಾಗಿದ್ದ ಸಮಿತಿ ಕೇಂದ್ರ ಸರ್ಕಾರದ ಪರವಾಗಿದೆಯೆಂದೂ, ತಾವು ಸಮಿತಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪೋತಿರೆಡ್ಡಿಪೇಟ TO ಶ್ವೇತಭವನ.. ಬೈಡನ್​ ಭಾಷಣದ ಹಿಂದೆ ಭಾರತೀಯನ ಪಾತ್ರ..

ಇದಾದ ಕೆಲದಿನಗಳ ನಂತರ ಸಮಿತಿಯನ್ನು ಪುನರ್​​ರಚನೆ ಮಾಡಬೇಕೆಂದು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ನೇತೃತ್ವದ ಪೀಠ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಅರ್ಜಿಯಲ್ಲಿ ಪಕ್ಷಪಾತದ ಪ್ರಶ್ನೆಯಿಲ್ಲ ಎಂದು ಖಡಾಖಂಡಿತವಾಗಿ ಹೇಳಿದೆ.

'ಟ್ರ್ಯಾಕ್ಟರ್ ರ‍್ಯಾಲಿ ತಡೆಯಾಜ್ಞೆ ಅರ್ಜಿ ಹಿಂಪಡೆದುಕೊಳ್ಳಿ'

ಜನವರಿ 26ರಂದು ಗಣರಾಜ್ಯೋತ್ಸವ ನಡೆಯಲಿದ್ದು, ಈ ವೇಳೆ ರೈತ ಸಂಘಟನೆಗಳು ನವದೆಹಲಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲು ಮುಂದಾಗಿದ್ದು, ಈ ಟ್ರ್ಯಾಕ್ಟರ್ ರ‍್ಯಾಲಿಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು.

ಈ ಹಿನ್ನೆಲೆಯಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದುಕೊಳ್ಳಿ ಎಂದು ಸುಪ್ರೀಂ ಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಜೊತೆಗೆ ರ‍್ಯಾಲಿ ವಿಚಾರದಲ್ಲಿ ನಾವು ಯಾವುದೇ ನಿರ್ದೇಶನ ನೀಡುವುದಿಲ್ಲ. ಅದು ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಿಚಾರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.