ETV Bharat / bharat

ನವದೆಹಲಿ: 29ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

author img

By

Published : Dec 24, 2020, 12:49 PM IST

ಈಗಾಗಲೇ ತಿರಸ್ಕರಿಸಲ್ಪಟ್ಟ ಹೊಸ ಕೃಷಿ ಕಾನೂನುಗಳಿಗೆ ತಿದ್ದುಪಡಿ ಮಾಡುವ ಭರವಸೆಯನ್ನು ಪುನರಾವರ್ತಿಸಬಾರದು. ಸರ್ಕಾರವು ಮುಕ್ತ ಮನಸ್ಸಿನಿಂದ ನಮ್ಮ ಬಳಿಗೆ ಬರುವವರೆಗೆ ಕಾಯುತ್ತಿದ್ದೇವೆ. ಕೇಂದ್ರವು ಸ್ಪಷ್ಟ ಪ್ರಸ್ತಾವನೆಯನ್ನು ಮಂಡಿಸಿದರೆ ಮಾತುಕತೆಗೆ ಸಿದ್ಧ ಎಂದು ರೈತ ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.

ರೈತರ ಪ್ರತಿಭಟನೆ
ರೈತರ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಗಳಲ್ಲಿ ರೈತರು ಕೈಗೊಂಡಿರುವ ಪ್ರತಿಭಟನೆ ಇಂದು 29ನೇ ದಿನಕ್ಕೆ ಕಾಲಿಟ್ಟಿದೆ. ನ. 26 ರಿಂದಲೂ ಪ್ರತಿಭಟನೆ ನಡೆಯುತ್ತಿದ್ದು, ಕೃಷಿ ಕಾಯ್ದೆಗಳ ರದ್ದತಿಗೆ ರೈತರು ಪಟ್ಟು ಹಿಡಿದಿದ್ದಾರೆ.

ನಿನ್ನೆ ದೆಹಲಿ-ಸಿಂಘು ಗಡಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿದ ರೈತ ಸಂಘಗಳು, ಈಗಾಗಲೇ ತಿರಸ್ಕರಿಸಲ್ಪಟ್ಟ ಹೊಸ ಕೃಷಿ ಕಾನೂನುಗಳಿಗೆ ತಿದ್ದುಪಡಿ ಮಾಡುವ ಭರವಸೆಯನ್ನು ಪುನರಾವರ್ತಿಸಬಾರದು. ಈ ಕುರಿತು ಹೆಚ್ಚಿನ ಸುತ್ತಿನಲ್ಲಿ ಮಾತುಕತೆಗಳನ್ನು ನಡೆಸಿ ದೃಢವಾದ ಪ್ರಸ್ತಾವನೆಯನ್ನು ತರಬೇಕು. ಕೃಷಿ ಕಾನೂನುಗಳನ್ನು ತಿದ್ದುಪಡಿ ಮಾಡುವ ಪ್ರಸ್ತಾಪವನ್ನು ಈಗಾಗಲೇ ತಿರಸ್ಕರಿಸಿದ್ದೇವೆ. ಸರ್ಕಾರವು ಮುಕ್ತ ಮನಸ್ಸಿನಿಂದ ನಮ್ಮ ಬಳಿಗೆ ಬರುವ ವರೆಗೆ ಕಾಯುತ್ತಿದ್ದೇವೆ. ಕೇಂದ್ರವುಸ್ಪಷ್ಟ ಪ್ರಸ್ತಾವನೆಯನ್ನು ಮಂಡಿಸಿದರೆ ಮಾತುಕತೆಗೆ ಸಿದ್ಧ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಈ ವೇಳೆ ಹಾಜರಿದ್ದ ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಮತನಾಡಿ, ಸರ್ಕಾರದ ಹೊಸ ಪತ್ರವು ರೈತರ ಆಂದೋಲನವನ್ನು ಕೆಣಕುವ ಪ್ರಯತ್ನವಾಗಿದೆ. “ಯುನೈಟೆಡ್ ಫಾರ್ಮರ್ಸ್ ಫ್ರಂಟ್ ಸರ್ಕಾರಕ್ಕೆ ಪತ್ರ ಬರೆದಿದೆ. ನಮ್ಮ ಚಳವಳಿಯೊಂದಿಗೆ ಯಾವುದೇ ಸಂಬಂಧವಿಲ್ಲದ ರೈತ ನಾಯಕರು ಮತ್ತು ಸಂಸ್ಥೆಗಳೊಂದಿಗೆ ಸರ್ಕಾರ ನಿರಂತರವಾಗಿ ಮಾತುಕತೆ ನಡೆಸುತ್ತಿದೆ. ಇದು ನಮ್ಮ ಆಂದೋಲನವನ್ನು ಹತ್ತಿಕ್ಕುವ ಪ್ರಯತ್ನ. ಇದಕ್ಕೆ ನಾವು ವಿರೋಧವನ್ನು ವ್ಯಕ್ತಪಡಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಆರು ಜನರ ರೈತರೊಂದಿಗೆ ನಾಳೆ ಸಂವಾದ ನಡೆಸಲು ಸಜ್ಜಾಗಿದ್ದಾರೆ. ಈ ಸಮಯದಲ್ಲಿ ಕೇಂದ್ರವು ಕೈಗೊಂಡ ವಿವಿಧ ಉಪಕ್ರಮಗಳ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಗಳಲ್ಲಿ ರೈತರು ಕೈಗೊಂಡಿರುವ ಪ್ರತಿಭಟನೆ ಇಂದು 29ನೇ ದಿನಕ್ಕೆ ಕಾಲಿಟ್ಟಿದೆ. ನ. 26 ರಿಂದಲೂ ಪ್ರತಿಭಟನೆ ನಡೆಯುತ್ತಿದ್ದು, ಕೃಷಿ ಕಾಯ್ದೆಗಳ ರದ್ದತಿಗೆ ರೈತರು ಪಟ್ಟು ಹಿಡಿದಿದ್ದಾರೆ.

ನಿನ್ನೆ ದೆಹಲಿ-ಸಿಂಘು ಗಡಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿದ ರೈತ ಸಂಘಗಳು, ಈಗಾಗಲೇ ತಿರಸ್ಕರಿಸಲ್ಪಟ್ಟ ಹೊಸ ಕೃಷಿ ಕಾನೂನುಗಳಿಗೆ ತಿದ್ದುಪಡಿ ಮಾಡುವ ಭರವಸೆಯನ್ನು ಪುನರಾವರ್ತಿಸಬಾರದು. ಈ ಕುರಿತು ಹೆಚ್ಚಿನ ಸುತ್ತಿನಲ್ಲಿ ಮಾತುಕತೆಗಳನ್ನು ನಡೆಸಿ ದೃಢವಾದ ಪ್ರಸ್ತಾವನೆಯನ್ನು ತರಬೇಕು. ಕೃಷಿ ಕಾನೂನುಗಳನ್ನು ತಿದ್ದುಪಡಿ ಮಾಡುವ ಪ್ರಸ್ತಾಪವನ್ನು ಈಗಾಗಲೇ ತಿರಸ್ಕರಿಸಿದ್ದೇವೆ. ಸರ್ಕಾರವು ಮುಕ್ತ ಮನಸ್ಸಿನಿಂದ ನಮ್ಮ ಬಳಿಗೆ ಬರುವ ವರೆಗೆ ಕಾಯುತ್ತಿದ್ದೇವೆ. ಕೇಂದ್ರವುಸ್ಪಷ್ಟ ಪ್ರಸ್ತಾವನೆಯನ್ನು ಮಂಡಿಸಿದರೆ ಮಾತುಕತೆಗೆ ಸಿದ್ಧ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಈ ವೇಳೆ ಹಾಜರಿದ್ದ ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಮತನಾಡಿ, ಸರ್ಕಾರದ ಹೊಸ ಪತ್ರವು ರೈತರ ಆಂದೋಲನವನ್ನು ಕೆಣಕುವ ಪ್ರಯತ್ನವಾಗಿದೆ. “ಯುನೈಟೆಡ್ ಫಾರ್ಮರ್ಸ್ ಫ್ರಂಟ್ ಸರ್ಕಾರಕ್ಕೆ ಪತ್ರ ಬರೆದಿದೆ. ನಮ್ಮ ಚಳವಳಿಯೊಂದಿಗೆ ಯಾವುದೇ ಸಂಬಂಧವಿಲ್ಲದ ರೈತ ನಾಯಕರು ಮತ್ತು ಸಂಸ್ಥೆಗಳೊಂದಿಗೆ ಸರ್ಕಾರ ನಿರಂತರವಾಗಿ ಮಾತುಕತೆ ನಡೆಸುತ್ತಿದೆ. ಇದು ನಮ್ಮ ಆಂದೋಲನವನ್ನು ಹತ್ತಿಕ್ಕುವ ಪ್ರಯತ್ನ. ಇದಕ್ಕೆ ನಾವು ವಿರೋಧವನ್ನು ವ್ಯಕ್ತಪಡಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಆರು ಜನರ ರೈತರೊಂದಿಗೆ ನಾಳೆ ಸಂವಾದ ನಡೆಸಲು ಸಜ್ಜಾಗಿದ್ದಾರೆ. ಈ ಸಮಯದಲ್ಲಿ ಕೇಂದ್ರವು ಕೈಗೊಂಡ ವಿವಿಧ ಉಪಕ್ರಮಗಳ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.