ಅಲಿಘರ್ (ಉತ್ತರ ಪ್ರದೇಶ): ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ರಾಜಸ್ಥಾನ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ ವಿರುದ್ಧ ಅವಹೇಳನಕಾರಿ ವಿಡಿಯೋ ಹರಿಬಿಟ್ಟ ಹಿನ್ನೆಲೆ ಅಪರಿಚಿತ ಯುವಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೀಗ ಸೈಬರ್ ಕ್ರೈಮ್ ಅಪರಾಧ ವಿಭಾಗದಲ್ಲಿ ಈ ಪ್ರಕರಣ ದಾಖಲಾಗಿದೆ.
ಮಾಜಿ ಸಿಎಂ ಕಲ್ಯಾಣ್ ಸಿಂಗ್ಗೆ ಬೆದರಿಕೆ ವಿಡಿಯೋ: ಯುವಕನ ವಿರುದ್ಧ ಎಫ್ಐಆರ್
ವಾಟ್ಸ್ಆ್ಯ ಪ್ ಮೂಲಕ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಬೆದರಿಕೆ ಹಾಕಿರುವ ಆರೋಪದಡಿ ಅಪರಿಚಿತ ಯುವಕನ ವಿರುದ್ಧ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್ಆ್ಯಪ್ನಲ್ಲಿ ಯುವಕ ಅವಹೇಳನಕಾರಿಯಾಗಿ ಮಾತನಾಡಿದಲ್ಲದೇ ಬೆದರಿಕೆ ಹಾಕಿದ್ದಾನೆ ಅಂತ ದೂರಿನಲ್ಲಿ ತಿಳಿಸಲಾಗಿದೆ.
![ಮಾಜಿ ಸಿಎಂ ಕಲ್ಯಾಣ್ ಸಿಂಗ್ಗೆ ಬೆದರಿಕೆ ವಿಡಿಯೋ: ಯುವಕನ ವಿರುದ್ಧ ಎಫ್ಐಆರ್ FIR registered against unidentified youth for threatening Kalyan Singh](https://etvbharatimages.akamaized.net/etvbharat/prod-images/768-512-7084517-365-7084517-1588759199363.jpg?imwidth=3840)
ಘಟನೆ ಹಿನ್ನೆಲೆ ಬಿಜೆಪಿ ಶಾಸಕ ರವೇಂದ್ರ ಪಾಲ್ ಸಿಂಗ್ ಇಲ್ಲಿನ ಎಸ್ಎಸ್ಪಿಗೆ ದೂರು ನೀಡಿದ್ದರು. ಅಲ್ಲದೆ ವಾಟ್ಸ್ಆ್ಯಪ್ನಲ್ಲಿ ಹರಿದಾಡುತ್ತಿರುವ ವಿಡಿಯೋ ಕ್ಲಿಪ್ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಇಲ್ಲಿ ಯುವಕನೊಬ್ಬ ಕಲ್ಯಾಣ್ ಸಿಂಗ್ಗೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದರು ಎಂದು ಸಿವಿಲ್ ಲೈನ್ಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಅಮಿತ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇನ್ನು ಅಖಿಲ ಭಾರತ ಲೋಧಿ ಮಹಾಸಭಾ ಅಧ್ಯಕ್ಷರು ಕೂಡ ಎಸ್ಎಸ್ಪಿಗೆ ಪತ್ರ ಬರೆದಿದ್ದು, ಅಪರಿಚಿತ ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಅಮಿತ್ ಕುಮಾರ್ ತಿಳಿಸಿದ್ದಾರೆ.
ಅಲಿಘರ್ (ಉತ್ತರ ಪ್ರದೇಶ): ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ರಾಜಸ್ಥಾನ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ ವಿರುದ್ಧ ಅವಹೇಳನಕಾರಿ ವಿಡಿಯೋ ಹರಿಬಿಟ್ಟ ಹಿನ್ನೆಲೆ ಅಪರಿಚಿತ ಯುವಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೀಗ ಸೈಬರ್ ಕ್ರೈಮ್ ಅಪರಾಧ ವಿಭಾಗದಲ್ಲಿ ಈ ಪ್ರಕರಣ ದಾಖಲಾಗಿದೆ.
ಘಟನೆ ಹಿನ್ನೆಲೆ ಬಿಜೆಪಿ ಶಾಸಕ ರವೇಂದ್ರ ಪಾಲ್ ಸಿಂಗ್ ಇಲ್ಲಿನ ಎಸ್ಎಸ್ಪಿಗೆ ದೂರು ನೀಡಿದ್ದರು. ಅಲ್ಲದೆ ವಾಟ್ಸ್ಆ್ಯಪ್ನಲ್ಲಿ ಹರಿದಾಡುತ್ತಿರುವ ವಿಡಿಯೋ ಕ್ಲಿಪ್ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಇಲ್ಲಿ ಯುವಕನೊಬ್ಬ ಕಲ್ಯಾಣ್ ಸಿಂಗ್ಗೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದರು ಎಂದು ಸಿವಿಲ್ ಲೈನ್ಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಅಮಿತ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇನ್ನು ಅಖಿಲ ಭಾರತ ಲೋಧಿ ಮಹಾಸಭಾ ಅಧ್ಯಕ್ಷರು ಕೂಡ ಎಸ್ಎಸ್ಪಿಗೆ ಪತ್ರ ಬರೆದಿದ್ದು, ಅಪರಿಚಿತ ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಅಮಿತ್ ಕುಮಾರ್ ತಿಳಿಸಿದ್ದಾರೆ.