ETV Bharat / bharat

ಕಮಲ್​ ವಿಶ್ವಾಸ ಮತಯಾಚನೆಗೆ ಕ್ಷಣಗಣನೆ... ಎಂಪಿ ಕಾಂಗ್ರೆಸ್​ ಸರ್ಕಾರ ಉಳಿಯುತ್ತಾ, ಉರುಳುತ್ತಾ?

author img

By

Published : Mar 16, 2020, 11:21 AM IST

ಮಧ್ಯ ಪ್ರದೇಶ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕಮಲ್​ ನಾಥ್​ ವಿಶ್ವಾಸ ಮತಯಾಚಿಸಲು ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕೂಡಾ ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ತನ್ನೆಲ್ಲಾ ಶಾಸಕರಿಗೆ ವಿಪ್​ ಜಾರಿಗೊಳಿಸಿದೆ.

Floor test in Madhya Pradesh assembly
ಮಧ್ಯ ಪ್ರದೇಶ ಸರ್ಕಾರ

ಭೋಪಾಲ್​: ಕೆಲ ದಿನಗಳಿಂದ ಮಧ್ಯ ಪ್ರದೇಶದಲ್ಲಿ ಸೃಷ್ಟಿಯಾಗಿರೋ ರಾಜಕೀಯ ಬಿಕ್ಕಟ್ಟಿಗೆ ಇಂದು ತೆರೆ ಬೀಳು ಸಾಧ್ಯತೆ ಇದೆ. ಮಧ್ಯ ಪ್ರದೇಶ ವಿಧಾನಸಭೆಯಲ್ಲಿ ಸಿಎಂ ಕಮಲ್​ನಾಥ್​ ವಿಶ್ವಾಸ ಮತಯಾಚಿಸಲು ಸಜ್ಜಾಗಿದ್ದಾರೆ.

ನಿನ್ನೆ ಮಧ್ಯ ಪ್ರದೇಶ ಕಾಂಗ್ರೆಸ್​ ಸರ್ಕಾರದ ಮುಖ್ಯಮಂತ್ರಿ ಕಮಲ್​ನಾಥ್​, ರಾಜ್ಯಪಾಲ ಲಾಲ್​ಜಿ ಟಂಡನ್​ರನ್ನು ಭೋಪಾಲ್​ನ ರಾಜಭವನದಲ್ಲಿ ಭೇಟಿಯಾಗಿದ್ದರು. ವಿಧಾನಸಭೆ ಕಲಾಪ ಆರಂಭವಾಗಿದ್ದು, ಕಮಲ್​ನಾಥ್​ ಅವರು ಈಗ ವಿಶ್ವಾಸಮತ ಯಾಚಿಸಬೇಕಿದೆ.

ಈ ಎಲ್ಲಾ ಬೆಳವಣಿಗೆಯ ನಡುವೆ ಬಹಳ ಎಚ್ಚರಿಕೆಯ ನಡೆ ಇಟ್ಟಿರುವ ಬಿಜೆಪಿ, ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ತನ್ನೆಲ್ಲಾ ಶಾಸಕರಿಗೆ ವಿಪ್​ ಜಾರಿಗೊಳಿಸಿದೆ.

ಮಧ್ಯಪ್ರದೇಶ ಕಾಂಗ್ರೆಸ್​ನ 22 ಶಾಸಕರು ಬಂಡಾಯವೆದ್ದು, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬೆಂಗಳೂರಿಗೆ ಶಿಫ್ಟ್​ ಆಗಿದ್ದಾರೆ. ಪಕ್ಷದ ಪ್ರಬಲ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅದಾಗಲೇ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಭೋಪಾಲ್​: ಕೆಲ ದಿನಗಳಿಂದ ಮಧ್ಯ ಪ್ರದೇಶದಲ್ಲಿ ಸೃಷ್ಟಿಯಾಗಿರೋ ರಾಜಕೀಯ ಬಿಕ್ಕಟ್ಟಿಗೆ ಇಂದು ತೆರೆ ಬೀಳು ಸಾಧ್ಯತೆ ಇದೆ. ಮಧ್ಯ ಪ್ರದೇಶ ವಿಧಾನಸಭೆಯಲ್ಲಿ ಸಿಎಂ ಕಮಲ್​ನಾಥ್​ ವಿಶ್ವಾಸ ಮತಯಾಚಿಸಲು ಸಜ್ಜಾಗಿದ್ದಾರೆ.

ನಿನ್ನೆ ಮಧ್ಯ ಪ್ರದೇಶ ಕಾಂಗ್ರೆಸ್​ ಸರ್ಕಾರದ ಮುಖ್ಯಮಂತ್ರಿ ಕಮಲ್​ನಾಥ್​, ರಾಜ್ಯಪಾಲ ಲಾಲ್​ಜಿ ಟಂಡನ್​ರನ್ನು ಭೋಪಾಲ್​ನ ರಾಜಭವನದಲ್ಲಿ ಭೇಟಿಯಾಗಿದ್ದರು. ವಿಧಾನಸಭೆ ಕಲಾಪ ಆರಂಭವಾಗಿದ್ದು, ಕಮಲ್​ನಾಥ್​ ಅವರು ಈಗ ವಿಶ್ವಾಸಮತ ಯಾಚಿಸಬೇಕಿದೆ.

ಈ ಎಲ್ಲಾ ಬೆಳವಣಿಗೆಯ ನಡುವೆ ಬಹಳ ಎಚ್ಚರಿಕೆಯ ನಡೆ ಇಟ್ಟಿರುವ ಬಿಜೆಪಿ, ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ತನ್ನೆಲ್ಲಾ ಶಾಸಕರಿಗೆ ವಿಪ್​ ಜಾರಿಗೊಳಿಸಿದೆ.

ಮಧ್ಯಪ್ರದೇಶ ಕಾಂಗ್ರೆಸ್​ನ 22 ಶಾಸಕರು ಬಂಡಾಯವೆದ್ದು, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬೆಂಗಳೂರಿಗೆ ಶಿಫ್ಟ್​ ಆಗಿದ್ದಾರೆ. ಪಕ್ಷದ ಪ್ರಬಲ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅದಾಗಲೇ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.