ETV Bharat / bharat

ಕೇಂದ್ರದ ಹಳಿ ತಪ್ಪಿದ ಲೆಕ್ಕಾಚಾರ, ದೇಶದ ಆರ್ಥಿಕತೆ ಕುಸಿತವಾಗಿರುವುದು ದಿಟ.. ಮಾಜಿ ವಿತ್ತ ಸಲಹೆಗಾರರ ವಿಶ್ಲೇಷಣೆ

author img

By

Published : Jun 12, 2019, 8:16 AM IST

ದೇಶದ ಒಟ್ಟು ಆಂತರಿಕ ಉತ್ಪಾದನೆಯನ್ನು ಶೇ 2.5ರಷ್ಟು ಹೆಚ್ಚುವರಿಯಾಗಿ ಅಂದಾಜು ಮಾಡಲಾಗಿದೆ. 2011-12ರಿಂದ 2016-17ರ ಅವಧಿಯಲ್ಲಿನ ಸರ್ಕಾರದ ಅಧಿಕೃತ ಅಂದಾಜು ಆಗಿರುವ ಶೇ. 7ರಷ್ಟು ವೃದ್ಧಿದರ ಬದಲಿಗೆ ಅದು ವಾಸ್ತವದಲ್ಲಿ ಶೇ 4.5ರಷ್ಟು ಇರಬೇಕಾಗಿತ್ತು ಎಂದು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರೆ

ನವದೆಹಲಿ: ಆರ್ಥಿಕ ವೃದ್ಧಿ ದರ ಕಲೆಹಾಕುವ ವಿಧಾನದಲ್ಲಿ ಬದಲಾವಣೆ ಮಾಡಿದ್ದರಿಂದ ದೇಶಿ ಆರ್ಥಿಕತೆಯ ಬೆಳವಣಿಗೆ ದರವು ತಪ್ಪಾಗಿ ಬಿಂಬಿತವಾಗಿದೆ ಎಂದು ಕೇಂದ್ರ ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್​ ಅವರು ಅಭಿಪ್ರಾಯಪಟ್ಟಿದ್ದಾರೆ,

ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ಪ್ರಕಟಿಸಲಾಗಿರುವ ಅವರ ಸಂಶೋಧನಾ ವರದಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. 2019ರ ಮೇ ತಿಂಗಳಲ್ಲಿ ತಮ್ಮ ಸೇವಾವಧಿ ವಿಸ್ತರಣೆಯ ಅವಧಿ ಕೊನೆಗೊಳ್ಳುವ ಮೊದಲೇ ಅರವಿಂದ್​ ಅವರು ತಮ್ಮ ಹುದ್ದೆ ತೊರೆದಿದ್ದರು.

ದೇಶದ ಒಟ್ಟು ಆಂತರಿಕ ಉತ್ಪಾದನೆಯನ್ನು ಶೇ 2.5ರಷ್ಟು ಹೆಚ್ಚುವರಿಯಾಗಿ ಅಂದಾಜು ಮಾಡಲಾಗಿದೆ. 2011-12ರಿಂದ 2016-17ರ ಅವಧಿಯಲ್ಲಿನ ಸರ್ಕಾರದ ಅಧಿಕೃತ ಅಂದಾಜು ಆಗಿರುವ ಶೇ. 7ರಷ್ಟು ವೃದ್ಧಿದರ ಬದಲಿಗೆ ಅದು ವಾಸ್ತವದಲ್ಲಿ ಶೇ 4.5ರಷ್ಟು ಇರಬೇಕಾಗಿತ್ತು ಎಂದು ಹೇಳಿದ್ದಾರೆ. 2001-02ರಿಂದ 2017-18ರ ಅವಧಿಯಲ್ಲಿನ 17 ಪ್ರಮುಖ ಆರ್ಥಿಕ ಮಾನದಂಡಗಳನ್ನು ಆಧರಿಸಿದ ವಿಶ್ಲೇಷಣೆ ಮಾಡಿದ್ದಾರೆ. ತಮ್ಮ ಈ ವಿಶ್ಲೇಷಣೆಗೆ ಪೂರಕವಾಗಿ ಅರವಿಂದ ಅವರು, ಆರ್ಥಿಕತೆ ಕುಸಿತವಾಗಿರುವುದನ್ನು ಸಾಕ್ಷ್ಯವಾಗಿ ಒದಗಿಸಿದ್ದಾರೆ.

ತಯಾರಿಕಾ ವಲಯದ ಪ್ರಗತಿಗೆ ಸಂಬಂಧಿಸಿದಂತೆ ತಪ್ಪು ಲೆಕ್ಕಾಚಾರ ಹಾಕಲಾಗಿದೆ. ಇದರಿಂದಾಗಿ ಆರ್ಥಿಕತೆಗೆ ಸಂಬಂಧಿಸಿದ ನೀತಿಯು ಕಠಿಣವಾಗಿರಲಿದೆ. ಆರ್ಥಿಕ ಸುಧಾರಣಾ ಕ್ರಮಗಳನ್ನು ತ್ವರಿತವಾಗಿ ಜಾರಿಗೆ ತರುವುದಕ್ಕೆ ಅಡಚಣೆಗಳು ಎದುರಾಗಲಿವೆ ಎಂದು ಹೇಳಿದ್ದಾರೆ.

ನವದೆಹಲಿ: ಆರ್ಥಿಕ ವೃದ್ಧಿ ದರ ಕಲೆಹಾಕುವ ವಿಧಾನದಲ್ಲಿ ಬದಲಾವಣೆ ಮಾಡಿದ್ದರಿಂದ ದೇಶಿ ಆರ್ಥಿಕತೆಯ ಬೆಳವಣಿಗೆ ದರವು ತಪ್ಪಾಗಿ ಬಿಂಬಿತವಾಗಿದೆ ಎಂದು ಕೇಂದ್ರ ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್​ ಅವರು ಅಭಿಪ್ರಾಯಪಟ್ಟಿದ್ದಾರೆ,

ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ಪ್ರಕಟಿಸಲಾಗಿರುವ ಅವರ ಸಂಶೋಧನಾ ವರದಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. 2019ರ ಮೇ ತಿಂಗಳಲ್ಲಿ ತಮ್ಮ ಸೇವಾವಧಿ ವಿಸ್ತರಣೆಯ ಅವಧಿ ಕೊನೆಗೊಳ್ಳುವ ಮೊದಲೇ ಅರವಿಂದ್​ ಅವರು ತಮ್ಮ ಹುದ್ದೆ ತೊರೆದಿದ್ದರು.

ದೇಶದ ಒಟ್ಟು ಆಂತರಿಕ ಉತ್ಪಾದನೆಯನ್ನು ಶೇ 2.5ರಷ್ಟು ಹೆಚ್ಚುವರಿಯಾಗಿ ಅಂದಾಜು ಮಾಡಲಾಗಿದೆ. 2011-12ರಿಂದ 2016-17ರ ಅವಧಿಯಲ್ಲಿನ ಸರ್ಕಾರದ ಅಧಿಕೃತ ಅಂದಾಜು ಆಗಿರುವ ಶೇ. 7ರಷ್ಟು ವೃದ್ಧಿದರ ಬದಲಿಗೆ ಅದು ವಾಸ್ತವದಲ್ಲಿ ಶೇ 4.5ರಷ್ಟು ಇರಬೇಕಾಗಿತ್ತು ಎಂದು ಹೇಳಿದ್ದಾರೆ. 2001-02ರಿಂದ 2017-18ರ ಅವಧಿಯಲ್ಲಿನ 17 ಪ್ರಮುಖ ಆರ್ಥಿಕ ಮಾನದಂಡಗಳನ್ನು ಆಧರಿಸಿದ ವಿಶ್ಲೇಷಣೆ ಮಾಡಿದ್ದಾರೆ. ತಮ್ಮ ಈ ವಿಶ್ಲೇಷಣೆಗೆ ಪೂರಕವಾಗಿ ಅರವಿಂದ ಅವರು, ಆರ್ಥಿಕತೆ ಕುಸಿತವಾಗಿರುವುದನ್ನು ಸಾಕ್ಷ್ಯವಾಗಿ ಒದಗಿಸಿದ್ದಾರೆ.

ತಯಾರಿಕಾ ವಲಯದ ಪ್ರಗತಿಗೆ ಸಂಬಂಧಿಸಿದಂತೆ ತಪ್ಪು ಲೆಕ್ಕಾಚಾರ ಹಾಕಲಾಗಿದೆ. ಇದರಿಂದಾಗಿ ಆರ್ಥಿಕತೆಗೆ ಸಂಬಂಧಿಸಿದ ನೀತಿಯು ಕಠಿಣವಾಗಿರಲಿದೆ. ಆರ್ಥಿಕ ಸುಧಾರಣಾ ಕ್ರಮಗಳನ್ನು ತ್ವರಿತವಾಗಿ ಜಾರಿಗೆ ತರುವುದಕ್ಕೆ ಅಡಚಣೆಗಳು ಎದುರಾಗಲಿವೆ ಎಂದು ಹೇಳಿದ್ದಾರೆ.

Intro:Body:Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.