ETV Bharat / bharat

ವಾರಣಾಸಿಯಲ್ಲಿ ಭೀಕರ ಮಳೆ: ಉಕ್ಕಿದ ಗಂಗಾ ನದಿ, ಘಾಟ್​ಗಳು ಜಲಾವೃತ

author img

By

Published : Sep 3, 2020, 3:40 PM IST

ಉತ್ತರ ಪ್ರದೇಶದ ಪ್ರಯಾಗ್​ರಾಜ್​, ವಾರಣಾಸಿ ಸೇರಿದಂತೆ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾದ ಪರಿಣಾಮ ಗಂಗಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದ್ದು, ನದಿ ದಡದ ಘಾಟ್​ಗಳು ಮುಳುಗಡೆಗೊಂಡಿವೆ.

Ganga
ಗಂಗಾ ನದಿ

ವಾರಣಾಸಿ (ಉತ್ತರ ಪ್ರದೇಶ): ಜಿಲ್ಲೆಯಲ್ಲಿ ಉಂಟಾದ ಭೀಕರ ಮಳೆಯಿಂದಾಗಿ ಗಂಗಾ ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು, ನದಿ ದಡದಲ್ಲಿರುವ ಘಾಟ್‌ಗಳು ಮುಳುಗಿವೆ.

ಉತ್ತರ ಪ್ರದೇಶದ ವಾರಣಾಸಿ, ಪ್ರಯಾಗರಾಜ್​​ನಲ್ಲಿ ಉತ್ತಮ ಮಳೆಯಾಗಿ ನೀರಿನ ಹರಿವು ಹೆಚ್ಚುತ್ತಿರುವ ಕಾರಣ ನಗರದ ತಗ್ಗು ಪ್ರದೇಶಗಳು ಪ್ರವಾಹ ಪರಿಸ್ಥಿತಿ ಎದುರಿಸುವಂತಾಗಿದೆ. ಗಂಗಾ ನದಿ ನೀರಿನ ಮಟ್ಟದಲ್ಲಿ ತೀವ್ರ ಏರಿಕೆಯಾದ ಹಿನ್ನೆಲೆ, ನದಿ ದಡದ ಘಾಟ್​​​ಗಳು ಮುಳುಗಿ ಸಾಕಷ್ಟು ಹಾನಿಯಾಗಿದೆ.

ಭಾರತದ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಉತ್ತರ ಪ್ರದೇಶದ ಕೆಲವು ಸ್ಥಳಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಜಸ್ಥಾನ, ಅರುಣಾಚಲ ಪ್ರದೇಶ, ಅಸ್ಸೋಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ, ಪಶ್ಚಿಮ ಬಂಗಾಳ, ಸಿಕ್ಕಿಂ, ಮಧ್ಯ ಮಹಾರಾಷ್ಟ್ರದ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂಇಟಿ ಇಲಾಖೆ ಇಂದು ತನ್ನ ಅಖಿಲ ಭಾರತ ಹವಾಮಾನ ಎಚ್ಚರಿಕೆ ಬುಲೆಟಿನ್​​ನಲ್ಲಿ ತಿಳಿಸಿದೆ.

ನೈರುತ್ಯ ಅರೇಬಿಯನ್ ಸಮುದ್ರದ ಮೇಲೆ ಬಲವಾದ ಗಾಳಿ ಬೀಸತೊಡಗಿದ್ದು, ಗಂಟೆಗೆ 45-55 ಕಿ.ಮೀ ವೇಗ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಮುಂದಿನ ಕೆಲವು ದಿನಗಳವರೆಗೆ ಈ ಪ್ರದೇಶಗಳಿಗೆ ಕಾಲಿಡದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ವಾರಣಾಸಿ (ಉತ್ತರ ಪ್ರದೇಶ): ಜಿಲ್ಲೆಯಲ್ಲಿ ಉಂಟಾದ ಭೀಕರ ಮಳೆಯಿಂದಾಗಿ ಗಂಗಾ ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು, ನದಿ ದಡದಲ್ಲಿರುವ ಘಾಟ್‌ಗಳು ಮುಳುಗಿವೆ.

ಉತ್ತರ ಪ್ರದೇಶದ ವಾರಣಾಸಿ, ಪ್ರಯಾಗರಾಜ್​​ನಲ್ಲಿ ಉತ್ತಮ ಮಳೆಯಾಗಿ ನೀರಿನ ಹರಿವು ಹೆಚ್ಚುತ್ತಿರುವ ಕಾರಣ ನಗರದ ತಗ್ಗು ಪ್ರದೇಶಗಳು ಪ್ರವಾಹ ಪರಿಸ್ಥಿತಿ ಎದುರಿಸುವಂತಾಗಿದೆ. ಗಂಗಾ ನದಿ ನೀರಿನ ಮಟ್ಟದಲ್ಲಿ ತೀವ್ರ ಏರಿಕೆಯಾದ ಹಿನ್ನೆಲೆ, ನದಿ ದಡದ ಘಾಟ್​​​ಗಳು ಮುಳುಗಿ ಸಾಕಷ್ಟು ಹಾನಿಯಾಗಿದೆ.

ಭಾರತದ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಉತ್ತರ ಪ್ರದೇಶದ ಕೆಲವು ಸ್ಥಳಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಜಸ್ಥಾನ, ಅರುಣಾಚಲ ಪ್ರದೇಶ, ಅಸ್ಸೋಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ, ಪಶ್ಚಿಮ ಬಂಗಾಳ, ಸಿಕ್ಕಿಂ, ಮಧ್ಯ ಮಹಾರಾಷ್ಟ್ರದ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂಇಟಿ ಇಲಾಖೆ ಇಂದು ತನ್ನ ಅಖಿಲ ಭಾರತ ಹವಾಮಾನ ಎಚ್ಚರಿಕೆ ಬುಲೆಟಿನ್​​ನಲ್ಲಿ ತಿಳಿಸಿದೆ.

ನೈರುತ್ಯ ಅರೇಬಿಯನ್ ಸಮುದ್ರದ ಮೇಲೆ ಬಲವಾದ ಗಾಳಿ ಬೀಸತೊಡಗಿದ್ದು, ಗಂಟೆಗೆ 45-55 ಕಿ.ಮೀ ವೇಗ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಮುಂದಿನ ಕೆಲವು ದಿನಗಳವರೆಗೆ ಈ ಪ್ರದೇಶಗಳಿಗೆ ಕಾಲಿಡದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.