ETV Bharat / bharat

ಶ್ರೀನಗರದಲ್ಲಿ ಗ್ರೆನೇಡ್ ದಾಳಿ: ವ್ಯಕ್ತಿ ಸಾವು, ಹಲವರಿಗೆ ಗಾಯ

author img

By

Published : Nov 4, 2019, 5:24 PM IST

Updated : Nov 4, 2019, 7:00 PM IST

ಶ್ರೀನಗರದ ಮಾರುಕಟ್ಟೆ ಬಳಿ ನಡೆಸಿದ ಗ್ರೆನೇಡ್ ದಾಳಿಯಲ್ಲಿ ಒಬ್ಬ ವ್ಯಕ್ತಿ ಬಲಿಯಾಗಿದ್ದು, ಹಲವರು ಗಾಯಗೊಡಿದ್ದಾರೆ.

ಶ್ರೀನಗರದಲ್ಲಿ ಗ್ರೆನೇಡ್ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ ನಡೆಸಲಾಗಿದ್ದು ಒಬ್ಬ ಸಾವಿಗೀಡಾಗಿದ್ದಾನೆ.

ಶ್ರೀನಗರದಲ್ಲಿ ಗ್ರೆನೇಡ್ ದಾಳಿ

ಹರಿ ಸಿಂಗ್ ರಸ್ತೆಯ ಮಾರುಕಟ್ಟೆ ಬಳಿ ಗ್ರೆನೇಡ್​ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಲ್ಲಿ ಒಬ್ಬ ಬಲಿಯಾಗಿದ್ದು, ಮೂವರು ಭದ್ರತಾ ಪಡೆ ಸಿಬ್ಬಂದಿ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ನಡೆದ ಸುತ್ತಮುತ್ತಲ ಪ್ರದೇಶವನ್ನ ಭದ್ರತಾ ಪಡೆ ಸುತ್ತುವರೆದಿದ್ದು, ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರವಷ್ಟೆ ಉತ್ತರ ಕಾಶ್ಮೀರ ಭಾಗದಲ್ಲಿ ನಡೆಸಿದ್ದ ಗ್ರೆನೇಡ್ ದಾಳಿಯಲ್ಲಿ 19 ಮಂದಿ ಗಾಯಗೊಂಡಿದ್ದರು.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ ನಡೆಸಲಾಗಿದ್ದು ಒಬ್ಬ ಸಾವಿಗೀಡಾಗಿದ್ದಾನೆ.

ಶ್ರೀನಗರದಲ್ಲಿ ಗ್ರೆನೇಡ್ ದಾಳಿ

ಹರಿ ಸಿಂಗ್ ರಸ್ತೆಯ ಮಾರುಕಟ್ಟೆ ಬಳಿ ಗ್ರೆನೇಡ್​ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಲ್ಲಿ ಒಬ್ಬ ಬಲಿಯಾಗಿದ್ದು, ಮೂವರು ಭದ್ರತಾ ಪಡೆ ಸಿಬ್ಬಂದಿ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ನಡೆದ ಸುತ್ತಮುತ್ತಲ ಪ್ರದೇಶವನ್ನ ಭದ್ರತಾ ಪಡೆ ಸುತ್ತುವರೆದಿದ್ದು, ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರವಷ್ಟೆ ಉತ್ತರ ಕಾಶ್ಮೀರ ಭಾಗದಲ್ಲಿ ನಡೆಸಿದ್ದ ಗ್ರೆನೇಡ್ ದಾಳಿಯಲ್ಲಿ 19 ಮಂದಿ ಗಾಯಗೊಂಡಿದ್ದರು.

Intro:Body:Conclusion:
Last Updated : Nov 4, 2019, 7:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.