ETV Bharat / bharat

ನಿಲ್ಲದ ಪಾಕ್​ ಕುತಂತ್ರ: ಕುಪ್ವಾರದಲ್ಲಿ ಸೇನೆ - ಉಗ್ರರ ನಡುವೆ ಗುಂಡಿನ ಕಾಳಗ

ಶ್ರೀನಗರದ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

author img

By

Published : Nov 23, 2020, 12:42 PM IST

Gunfight between security forces, militants along LoC in Kupwara
ಕುಪ್ವಾರದಲ್ಲಿ ಸೇನೆ ಮತ್ತು ಉಗ್ರ ನಡುವೆ ಗುಂಡಿನ ಕಾಳಗ

ಶ್ರೀನಗರ ( ಜಮ್ಮು ಮತ್ತು ಕಾಶ್ಮೀರ ): ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಸೋಮವಾರ ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಪ್ವಾರಾದ ಮಚಿಲ್ ಸೆಕ್ಟರ್​​ನಲ್ಲಿ ಎಲ್‌ಒಸಿ ಉದ್ದಕ್ಕೂ ನವೆಂಬರ್ 22 ಮತ್ತು 23 ರ ಮಧ್ಯರಾತ್ರಿಯಲ್ಲಿ ಕೆಲವು ಶಂಕಿತರ ಚಲನೆ ಕಂಡು ಬಂದಿದ್ದನ್ನು ಭದ್ರತಾ ಪಡೆ (ಬಿಎಸ್‌ಎಫ್) ಸೈನಿಕರು ಗಮನಿಸಿದ್ದರು. ಸೈನಿಕರು ಅನುಮಾನಾಸ್ಪದ ಓಡಾಡುತ್ತಿದ್ದ ಉಗ್ರರ ಮೇಲೆ ಗುಂಡು ಹಾರಿಸಿದರು. ಈ ವೇಳೆ ಪ್ರತಿ ದಾಳಿ ಕೂಡ ನಡೆಯಿತು ಎಂದು ಬಿಎಸ್ಎಫ್​ನ ಡೆಪ್ಯೂಟಿ ಇನ್ಸ್​​ಪೆಕ್ಟರ್​ ಜನರಲ್ ಆರ್ ಮುತ್ತು ಕೃಷ್ಣನ್ ಈಟಿವಿ ಭಾರತಕ್ಕೆ ದೂರವಾಣಿ ಮೂಲಕ ತಿಳಿಸಿದ್ದಾರೆ.

ಭಾರಿ ಹಿಮಪಾತ ಹಿನ್ನೆಲೆ ಅವರ ಹುಡುಕಾಟ ಸಾಧ್ಯವಾಗಿಲ್ಲ, ಆದರೆ, ಮತ್ತೆ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಉಗ್ರರ ವಿರುದ್ಧದ ಈ ಕಾರ್ಯಾಚರಣೆಯಲ್ಲಿ ಸೇನೆ ಮತ್ತು ಬಿಎಸ್‌ಎಫ್ ಜಂಟಿಯಾಗಿ ಭಾಗಿಯಾಗಿವೆ.

ಇದಕ್ಕೂ ಮುನ್ನ ನವೆಂಬರ್ 8 ರಂದು ನಡೆದ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಆದರೆ, ಈ ವೇಳೆ ನಾಲ್ಕು ಸೈನಿಕರು ಮತ್ತು ಬಿಎಸ್ಎಫ್ ಸಿಬ್ಬಂದಿ ಹುತಾತ್ಮರಾಗಿದ್ದರು.

ಶ್ರೀನಗರ ( ಜಮ್ಮು ಮತ್ತು ಕಾಶ್ಮೀರ ): ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಸೋಮವಾರ ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಪ್ವಾರಾದ ಮಚಿಲ್ ಸೆಕ್ಟರ್​​ನಲ್ಲಿ ಎಲ್‌ಒಸಿ ಉದ್ದಕ್ಕೂ ನವೆಂಬರ್ 22 ಮತ್ತು 23 ರ ಮಧ್ಯರಾತ್ರಿಯಲ್ಲಿ ಕೆಲವು ಶಂಕಿತರ ಚಲನೆ ಕಂಡು ಬಂದಿದ್ದನ್ನು ಭದ್ರತಾ ಪಡೆ (ಬಿಎಸ್‌ಎಫ್) ಸೈನಿಕರು ಗಮನಿಸಿದ್ದರು. ಸೈನಿಕರು ಅನುಮಾನಾಸ್ಪದ ಓಡಾಡುತ್ತಿದ್ದ ಉಗ್ರರ ಮೇಲೆ ಗುಂಡು ಹಾರಿಸಿದರು. ಈ ವೇಳೆ ಪ್ರತಿ ದಾಳಿ ಕೂಡ ನಡೆಯಿತು ಎಂದು ಬಿಎಸ್ಎಫ್​ನ ಡೆಪ್ಯೂಟಿ ಇನ್ಸ್​​ಪೆಕ್ಟರ್​ ಜನರಲ್ ಆರ್ ಮುತ್ತು ಕೃಷ್ಣನ್ ಈಟಿವಿ ಭಾರತಕ್ಕೆ ದೂರವಾಣಿ ಮೂಲಕ ತಿಳಿಸಿದ್ದಾರೆ.

ಭಾರಿ ಹಿಮಪಾತ ಹಿನ್ನೆಲೆ ಅವರ ಹುಡುಕಾಟ ಸಾಧ್ಯವಾಗಿಲ್ಲ, ಆದರೆ, ಮತ್ತೆ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಉಗ್ರರ ವಿರುದ್ಧದ ಈ ಕಾರ್ಯಾಚರಣೆಯಲ್ಲಿ ಸೇನೆ ಮತ್ತು ಬಿಎಸ್‌ಎಫ್ ಜಂಟಿಯಾಗಿ ಭಾಗಿಯಾಗಿವೆ.

ಇದಕ್ಕೂ ಮುನ್ನ ನವೆಂಬರ್ 8 ರಂದು ನಡೆದ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಆದರೆ, ಈ ವೇಳೆ ನಾಲ್ಕು ಸೈನಿಕರು ಮತ್ತು ಬಿಎಸ್ಎಫ್ ಸಿಬ್ಬಂದಿ ಹುತಾತ್ಮರಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.