ಚಂಡೀಗಢ : ಕೇಂದ್ರದ ಮಾಜಿ ಸಚಿವೆ ಮತ್ತು ಶಿರೋಮಣಿ ಅಕಾಲಿ ದಳದ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಅವರು ಕೊರೊನಾದಿಂದ ಗುಣಮುಖರಾಗಿ ಶನಿವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಶನಿವಾರ ರಾತ್ರಿ ನಗರದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಿಂದ (ಪಿಜಿಐ) ಬಿಡುಗಡೆ ಮಾಡಲಾಗಿದೆ. ಅವರಿಗೆ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆ ಪಿಜಿಐ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಉತ್ತರ ಪ್ರದೇಶ : ಪೊಲೀಸ್ ಇನ್ಸ್ಪೆಕ್ಟರ್ರಿಂದ ಅತ್ಯಾಚಾರ ಆರೋಪ, ಪ್ರಕರಣ ದಾಖಲು
"ಹರ್ಸಿಮ್ರತ್ ಕೌರ್ ಬಾದಲ್ ಅವರನ್ನು ಶನಿವಾರ ಚಂಡೀಗಢದ ಪಿಜಿಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ನೆಗೆಟಿವ್ ಬಂದ ಹಿನ್ನೆಲೆ ಕಳೆದ ರಾತ್ರಿ ಬಿಡುಗಡೆ ಮಾಡಲಾಗಿದೆ. ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ" ಎಂದು ಚಂಡೀಗಢದ ಪಿಜಿಐ ಆಸ್ಪತ್ರೆಯವರು ತಿಳಿಸಿದ್ದಾರೆ.