ಫರೀದಾಬಾದ್: ಹರಿಯಾಣ ಕಾಂಗ್ರೆಸ್ ವಕ್ತಾರ ವಿಕಾಸ್ ಚೌಧರಿಯನ್ನು ದೆಹಲಿ ಸಮೀಪದ ಫರೀದಬಾದ್ನಲ್ಲಿ ಅಪರಿಚಿತರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಇಂದು ಮುಂಜಾನೆ ವಿಕಾಸ್ ಚೌಧರಿ ಜಿಮ್ ಮುಗಿಸಿ ಹೊರಬರುತ್ತಿದ್ದ ವೇಳೆ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಆಗಂತುಕರು ಮಾರುತಿ ಸುಜುಕಿ ಎಸ್ಎಕ್ಸ್4 ಕಾರಿನಲ್ಲಿ ಆಗಮಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹರಿಯಾಣ ಕಾಂಗ್ರೆಸ್ ಅಧ್ಯಕ್ಷ ತಮ್ಮ ಪಕ್ಷದ ನಾಯಕನ ಹತ್ಯೆ ಖಂಡಿಸಿದ್ದು, ಜಂಗಲ್ ರಾಜನ ರಾಜ್ಯದಲ್ಲಿ ಕಾನೂನು ಹಾಗೂ ಭದ್ರತೆ ಸಂಪೂರ್ಣ ಹಳ್ಳ ಹಿಡಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
38 ವರ್ಷದ ವಿಕಾಸ್ ಚೌಧರಿ ಕೆಲ ದಿನಗಳ ಹಿಂದೆ ರಾಷ್ಟ್ರೀಯ ಲೋಕ ದಳವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.