ETV Bharat / bharat

ದೆಹಲಿ ಚಲೋ: ರೈತರಿಂದ ಇಂದು ಉಪವಾಸ ಸತ್ಯಾಗ್ರಹ

author img

By

Published : Dec 14, 2020, 12:57 PM IST

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆ 19ನೇ ದಿನವೂ ಮುಂದುವರೆದಿದೆ. ಇಂದು ಪ್ರತಿಭಟನಾ ನಿರತ ರೈತ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​​ ಕೂಡ ಇಂದು ಉಪವಾಸ ಮಾಡುವ ಮೂಲಕ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

Farmer leaders on hunger strike today
ಉಪವಾಸ ಸತ್ಯಾಗ್ರಹ

ನವದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ರೈತರು ಆರಂಭಿಸಿರುವ 'ದೆಹಲಿ ಚಲೋ ಚಳವಳಿ' 19 ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಇಂದು ಒಂದು ದಿನದ ಮಟ್ಟಿಗೆ ಪ್ರತಿಭಟನಾ ನಿರತ ರೈತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಸಿಂಘು ಗಡಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡ ಗುರ್ನಮ್ ಸಿಂಗ್ ಚಾದುನಿ, ಇಂದು ಬೆಳಗ್ಗೆ 8 ರಿಂದ ಆರಂಭಿಸಿರುವ ಉಪವಾಸ ಸತ್ಯಾಗ್ರಹ ಸಂಜೆ 5 ರವರೆಗೆ ನಡೆಯಲಿದೆ. ರೈತ ಮುಖಂಡರು ಆಯಾ ಸ್ಥಳಗಳಲ್ಲಿ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ರೈತರಿಂದ ಇಂದು ಉಪವಾಸ ಸತ್ಯಾಗ್ರಹ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ಇಂದು ಒಂದು ದಿನದ ಉಪವಾಸವನ್ನು ಮಾಡುವುದಾಗಿ ತಿಳಿಸಿದ್ದಾರೆ. ಮತ್ತು ಕೇಂದ್ರ ರೈತ ವಿರೋಧಿ ನೂತನ ಕೃಷಿ ಕಾಯ್ದೆಯನ್ನ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.

ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿ ಹಾಗೂ ಹರಿಯಾಣ-ರಾಜಸ್ಥಾನ ಗಡಿಯಲ್ಲಿ ಪೊಲೀಸರು ಪ್ರತಿಭಟನಾಕಾರರಿಗೆ ತಡೆವೊಡ್ಡಿದ ಹಿನ್ನೆಲೆ ಈ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ರೈತರಿಂದ ಇಂದು ಉಪವಾಸ ಸತ್ಯಾಗ್ರಹ

ಈ ನಡುವೆ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನರೇಂದ್ರ ತೋಮರ್ ಅವರೊಂದಿಗೆ ಭಾನುವಾರ ತಡರಾತ್ರಿ ನಡೆದ ಸಭೆಯ ನಂತರ ಪ್ರತಿಭಟನಾಕಾರ ರೈತರ ಗುಂಪೊಂದು ನೋಯ್ಡಾ-ದೆಹಲಿ ರಸ್ತೆಯಲ್ಲಿ ಪ್ರತಿಭಟನೆ ಕೈಬಿಟ್ಟಿದ್ದು, ಇದಕ್ಕೆ ಗುರ್ನಮ್ ಸಿಂಗ್ ಚಾದುನಿ ಕಿಡಿಕಾರಿದ್ದಾರೆ. ಪ್ರತಿಭಟನೆಯನ್ನು ಕೊನೆಗೊಳಿಸುವ ಮತ್ತು ಸರ್ಕಾರ ಅಂಗೀಕರಿಸಿದ ಕಾನೂನುಗಳ ಪರವಾಗಿರುವುದಾಗಿ ಹೇಳುವ ಕೆಲವು ಗುಂಪುಗಳಿವೆ, ಅಂತಹ ಗುಂಪುಗಳು ನಮ್ಮೊಂದಿಗಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ. ಈ ಗುಂಪುಗಳು ನಮ್ಮ ಪ್ರತಿಭಟನೆಯನ್ನು ಹಾಳುಮಾಡಲು ಸಂಚು ಹೂಡಿದ್ದಾರೆ. ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಹಳಿ ತಪ್ಪಿಸಲು ಸರ್ಕಾರ ಸಹ ಸಂಚು ರೂಪಿಸುತ್ತಿದೆ "ಎಂದು ಚಾದುನಿ ಆರೋಪಿಸಿದ್ದಾರೆ.

ಇತ್ತ ಕೇಂದ್ರ ಸರ್ಕಾರವು ರೈತರ ಪ್ರತಿಭಟನೆ ನಿಲ್ಲಿಸಲು ಹೆಚ್ಚು ಪರಿಣಾಮಕಾರಿಯಾದ ಮಾರ್ಗಗಳನ್ನು ಹುಡುಕುತ್ತಿದೆ. ಅದಕ್ಕಾಗಿ ಭಾನುವಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ಸಚಿವ ಸೋಮ್ ಪ್ರಕಾಶ್ ಅವರು ಪಂಜಾಬ್‌ನ ಬಿಜೆಪಿ ಮುಖಂಡರೊಂದಿಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.

ರೈತರೊಂದಿಗೆ ಮುಂದಿನ ಸುತ್ತಿನ ಮಾತುಕತೆ ಕುರಿತು ಕೇಂದ್ರ ಸಚಿವ ಕೈಲಾಶ್ ಚೌಧರಿ ಪ್ರತಿಕ್ರಿಯಿಸಿದ್ದು, ಶೀಘ್ರದಲ್ಲೇ ಸಭೆ ಕರೆಯಲಾಗುವುದು. ನಾವು ಚರ್ಚೆಗೆ ಸಿದ್ಧರಿದ್ದೇವೆ. ಆದರೆ ದಿನಾಂಕವನ್ನು ಅಂತಿಮಗೊಳಿಸಲಾಗಿಲ್ಲ" ಎಂದು ತಿಳಿಸಿದ್ದಾರೆ. ಮುಂದಿನ ಸಭೆಯಲ್ಲಿ, ಸಮಸ್ಯೆಯನ್ನು ಪರಿಹರಿಸುವ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಿಪಕ್ಷಗಳ ವಿರುದ್ಧ ಸಚಿವ ತೋಮರ್ ವಾಗ್ದಾಳಿ

ಹೊಸ ಕೃಷಿ ಕಾಯ್ದೆಗಳ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿ ಪಕ್ಷಗಳ ವಿರುದ್ಧ ಸಚಿವ ತೋಮರ್ ವಾಗ್ದಾಳಿ ನಡೆಸಿದ್ದು, ಕೇಂದ್ರದ ಈ ಕೃಷಿ ಕಾನೂನುಗಳು"ಅಲ್ಪಾವಧಿಯಲ್ಲಿ ಕೆಲವರಿಗೆ ತೊಂದರೆ ಉಂಟುಮಾಡಬಹುದು" ಆದರೆ ದೀರ್ಘಾವಧಿಯಲ್ಲಿ ರೈತರಿಗೆ ಪ್ರಯೋಜನಕಾರಿಯಾಗಲಿವೆ ಎಂದು ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್​ ಅವರು ಅನೇಕ ಬಾರಿ ಪ್ರಯತ್ನಿಸಿದರೂ ಅದನ್ನು ಮಾಡಲು ಸಾಧ್ಯವಾಗಲಿಲ್ಲ. ಇಂದು ಅದನ್ನು ಜಾರಿಗೆ ತಂದಾಗ, ಪ್ರತಿಪಕ್ಷ ಇದನ್ನು ವಿರೋಧಿಸುತ್ತಿದೆ ಎಂದು ತೋಮರ್ ಹೇಳಿದ್ರು.

ಪೊಲೀಸರಿಂದ ರೈತರಿಗೆ ಬೆಂಬಲ:

ಪಂಜಾಬ್‌ನಲ್ಲಿ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಕಾರಾಗೃಹ) ಲಖ್ಮಿಂದರ್ ಸಿಂಗ್ ಜಖರ್ ಅವರು ಪ್ರತಿಭಟನಾ ನಿರತ ರೈತರನ್ನು ಬೆಂಬಲಿಸಿ ಸೇವೆಗೆ ರಾಜೀನಾಮೆ ನೀಡಿದ್ದಾರೆ.

ಅಂತರರಾಷ್ಟ್ರೀಯ ಕ್ರೀಡಾಪಟುಗಳಿಂದ ರೈತರಿಗೆ ಬೆಂಬಲ:

ಈ ಹಿಂದೆ, ಅಕಾಲಿ ದಳದ ಮುಖ್ಯಸ್ಥ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮತ್ತು ಎಸ್ಎಡಿ (ಡೆಮಾಕ್ರಟಿಕ್) ನಾಯಕ ಸುಖದೇವ್ ಸಿಂಗ್ ಅವರು, ರೈತರನ್ನು ಬೆಂಬಲಿಸಿ ತಮ್ಮ ಪದ್ಮ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದರು. ಜೊತೆಗೆ ರೈತರ ಚಳವಳಿಗೆ ಪಂಜಾಬ್‌ನ ಹಲವಾರು ಅಂತಾರಾಷ್ಟ್ರೀಯ ಕ್ರೀಡಾಪಟುಗಳು ತಮ್ಮ ಬೆಂಬಲ ನೀಡಿದ್ದಾರೆ.

ನವದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ರೈತರು ಆರಂಭಿಸಿರುವ 'ದೆಹಲಿ ಚಲೋ ಚಳವಳಿ' 19 ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಇಂದು ಒಂದು ದಿನದ ಮಟ್ಟಿಗೆ ಪ್ರತಿಭಟನಾ ನಿರತ ರೈತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಸಿಂಘು ಗಡಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡ ಗುರ್ನಮ್ ಸಿಂಗ್ ಚಾದುನಿ, ಇಂದು ಬೆಳಗ್ಗೆ 8 ರಿಂದ ಆರಂಭಿಸಿರುವ ಉಪವಾಸ ಸತ್ಯಾಗ್ರಹ ಸಂಜೆ 5 ರವರೆಗೆ ನಡೆಯಲಿದೆ. ರೈತ ಮುಖಂಡರು ಆಯಾ ಸ್ಥಳಗಳಲ್ಲಿ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ರೈತರಿಂದ ಇಂದು ಉಪವಾಸ ಸತ್ಯಾಗ್ರಹ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ಇಂದು ಒಂದು ದಿನದ ಉಪವಾಸವನ್ನು ಮಾಡುವುದಾಗಿ ತಿಳಿಸಿದ್ದಾರೆ. ಮತ್ತು ಕೇಂದ್ರ ರೈತ ವಿರೋಧಿ ನೂತನ ಕೃಷಿ ಕಾಯ್ದೆಯನ್ನ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.

ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿ ಹಾಗೂ ಹರಿಯಾಣ-ರಾಜಸ್ಥಾನ ಗಡಿಯಲ್ಲಿ ಪೊಲೀಸರು ಪ್ರತಿಭಟನಾಕಾರರಿಗೆ ತಡೆವೊಡ್ಡಿದ ಹಿನ್ನೆಲೆ ಈ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ರೈತರಿಂದ ಇಂದು ಉಪವಾಸ ಸತ್ಯಾಗ್ರಹ

ಈ ನಡುವೆ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನರೇಂದ್ರ ತೋಮರ್ ಅವರೊಂದಿಗೆ ಭಾನುವಾರ ತಡರಾತ್ರಿ ನಡೆದ ಸಭೆಯ ನಂತರ ಪ್ರತಿಭಟನಾಕಾರ ರೈತರ ಗುಂಪೊಂದು ನೋಯ್ಡಾ-ದೆಹಲಿ ರಸ್ತೆಯಲ್ಲಿ ಪ್ರತಿಭಟನೆ ಕೈಬಿಟ್ಟಿದ್ದು, ಇದಕ್ಕೆ ಗುರ್ನಮ್ ಸಿಂಗ್ ಚಾದುನಿ ಕಿಡಿಕಾರಿದ್ದಾರೆ. ಪ್ರತಿಭಟನೆಯನ್ನು ಕೊನೆಗೊಳಿಸುವ ಮತ್ತು ಸರ್ಕಾರ ಅಂಗೀಕರಿಸಿದ ಕಾನೂನುಗಳ ಪರವಾಗಿರುವುದಾಗಿ ಹೇಳುವ ಕೆಲವು ಗುಂಪುಗಳಿವೆ, ಅಂತಹ ಗುಂಪುಗಳು ನಮ್ಮೊಂದಿಗಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ. ಈ ಗುಂಪುಗಳು ನಮ್ಮ ಪ್ರತಿಭಟನೆಯನ್ನು ಹಾಳುಮಾಡಲು ಸಂಚು ಹೂಡಿದ್ದಾರೆ. ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಹಳಿ ತಪ್ಪಿಸಲು ಸರ್ಕಾರ ಸಹ ಸಂಚು ರೂಪಿಸುತ್ತಿದೆ "ಎಂದು ಚಾದುನಿ ಆರೋಪಿಸಿದ್ದಾರೆ.

ಇತ್ತ ಕೇಂದ್ರ ಸರ್ಕಾರವು ರೈತರ ಪ್ರತಿಭಟನೆ ನಿಲ್ಲಿಸಲು ಹೆಚ್ಚು ಪರಿಣಾಮಕಾರಿಯಾದ ಮಾರ್ಗಗಳನ್ನು ಹುಡುಕುತ್ತಿದೆ. ಅದಕ್ಕಾಗಿ ಭಾನುವಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ಸಚಿವ ಸೋಮ್ ಪ್ರಕಾಶ್ ಅವರು ಪಂಜಾಬ್‌ನ ಬಿಜೆಪಿ ಮುಖಂಡರೊಂದಿಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.

ರೈತರೊಂದಿಗೆ ಮುಂದಿನ ಸುತ್ತಿನ ಮಾತುಕತೆ ಕುರಿತು ಕೇಂದ್ರ ಸಚಿವ ಕೈಲಾಶ್ ಚೌಧರಿ ಪ್ರತಿಕ್ರಿಯಿಸಿದ್ದು, ಶೀಘ್ರದಲ್ಲೇ ಸಭೆ ಕರೆಯಲಾಗುವುದು. ನಾವು ಚರ್ಚೆಗೆ ಸಿದ್ಧರಿದ್ದೇವೆ. ಆದರೆ ದಿನಾಂಕವನ್ನು ಅಂತಿಮಗೊಳಿಸಲಾಗಿಲ್ಲ" ಎಂದು ತಿಳಿಸಿದ್ದಾರೆ. ಮುಂದಿನ ಸಭೆಯಲ್ಲಿ, ಸಮಸ್ಯೆಯನ್ನು ಪರಿಹರಿಸುವ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಿಪಕ್ಷಗಳ ವಿರುದ್ಧ ಸಚಿವ ತೋಮರ್ ವಾಗ್ದಾಳಿ

ಹೊಸ ಕೃಷಿ ಕಾಯ್ದೆಗಳ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿ ಪಕ್ಷಗಳ ವಿರುದ್ಧ ಸಚಿವ ತೋಮರ್ ವಾಗ್ದಾಳಿ ನಡೆಸಿದ್ದು, ಕೇಂದ್ರದ ಈ ಕೃಷಿ ಕಾನೂನುಗಳು"ಅಲ್ಪಾವಧಿಯಲ್ಲಿ ಕೆಲವರಿಗೆ ತೊಂದರೆ ಉಂಟುಮಾಡಬಹುದು" ಆದರೆ ದೀರ್ಘಾವಧಿಯಲ್ಲಿ ರೈತರಿಗೆ ಪ್ರಯೋಜನಕಾರಿಯಾಗಲಿವೆ ಎಂದು ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್​ ಅವರು ಅನೇಕ ಬಾರಿ ಪ್ರಯತ್ನಿಸಿದರೂ ಅದನ್ನು ಮಾಡಲು ಸಾಧ್ಯವಾಗಲಿಲ್ಲ. ಇಂದು ಅದನ್ನು ಜಾರಿಗೆ ತಂದಾಗ, ಪ್ರತಿಪಕ್ಷ ಇದನ್ನು ವಿರೋಧಿಸುತ್ತಿದೆ ಎಂದು ತೋಮರ್ ಹೇಳಿದ್ರು.

ಪೊಲೀಸರಿಂದ ರೈತರಿಗೆ ಬೆಂಬಲ:

ಪಂಜಾಬ್‌ನಲ್ಲಿ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಕಾರಾಗೃಹ) ಲಖ್ಮಿಂದರ್ ಸಿಂಗ್ ಜಖರ್ ಅವರು ಪ್ರತಿಭಟನಾ ನಿರತ ರೈತರನ್ನು ಬೆಂಬಲಿಸಿ ಸೇವೆಗೆ ರಾಜೀನಾಮೆ ನೀಡಿದ್ದಾರೆ.

ಅಂತರರಾಷ್ಟ್ರೀಯ ಕ್ರೀಡಾಪಟುಗಳಿಂದ ರೈತರಿಗೆ ಬೆಂಬಲ:

ಈ ಹಿಂದೆ, ಅಕಾಲಿ ದಳದ ಮುಖ್ಯಸ್ಥ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮತ್ತು ಎಸ್ಎಡಿ (ಡೆಮಾಕ್ರಟಿಕ್) ನಾಯಕ ಸುಖದೇವ್ ಸಿಂಗ್ ಅವರು, ರೈತರನ್ನು ಬೆಂಬಲಿಸಿ ತಮ್ಮ ಪದ್ಮ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದರು. ಜೊತೆಗೆ ರೈತರ ಚಳವಳಿಗೆ ಪಂಜಾಬ್‌ನ ಹಲವಾರು ಅಂತಾರಾಷ್ಟ್ರೀಯ ಕ್ರೀಡಾಪಟುಗಳು ತಮ್ಮ ಬೆಂಬಲ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.