ETV Bharat / bharat

ಜಮ್ಮುಕಾಶ್ಮೀರ ಅಭಿವೃದ್ಧಿಯಾಗ್ಬೇಕಾದ್ರೆ ಎಲ್ಲಾ ನಾಯಕರನ್ನು ಬಂಧನದಿಂದ ಬಿಡಬೇಕು: ಗುಲಾಮ್ ನಬಿ ಆಜಾದ್

author img

By

Published : Mar 14, 2020, 6:24 PM IST

ನಿನ್ನೆಯಷ್ಟೇ ಗೃಹ ಬಂಧನದಿಂದ ಬಿಡುಗಡೆಯಾಗಿದ್ದ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಭೇಟಿ ಮಾಡಿದ್ದಾರೆ.

all political leaders under detention must be released,ಗುಲಾಮ್ ನಬಿ ಆಜಾದ್
ಗುಲಾಮ್ ನಬಿ ಆಜಾದ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿಯಾಗಬೇಕಾದರೆ ಶ್ರೀನಗರದಲ್ಲಿ ಬಂಧನದಲ್ಲಿರುವ ಎಲ್ಲ ರಾಜಕೀಯ ಮುಖಂಡರನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.

ಗೃಹ ಬಂಧನದಿಂದ ಬಿಡುಗಡೆಯಾಗಿರುವ ಫಾರೂಕ್ ಅಬ್ದುಲ್ಲಾ ಅವರನ್ನ ಭೇಟಿ ಮಾಡಿ ಮಾತನಾಡಿದ ಅವರು, 'ಜಮ್ಮು ಮತ್ತು ಕಾಶ್ಮೀರ ಪ್ರಗತಿ ಸಾಧಿಸಬೇಕಾದರೆ, ಶ್ರೀನಗರದಲ್ಲಿ ಬಂಧನದಲ್ಲಿರುವ ಎಲ್ಲಾ ರಾಜಕೀಯ ಮುಖಂಡರನ್ನು ಬಿಡುಗಡೆ ಮಾಡಬೇಕು' ಎಂದಿದ್ದಾರೆ.

ಗುಲಾಮ್ ನಬಿ ಆಜಾದ್, ಕಾಂಗ್ರೆಸ್ ನಾಯಕ

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಪ್ರಕ್ರಿಯೆ ಪ್ರಾರಂಭವಾಗಬೇಕು. ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿ ಚುನಾವಣೆ ನಡೆಸಬೇಕು ಎಂದು ಆಜಾದ್ ಹೇಳಿದ್ದಾರೆ.

ಏಳು ತಿಂಗಳ ನಂತರ ಫಾರೂಕ್ ಅಬ್ದುಲ್ಲಾ ಅವರನ್ನು ಭೇಟಿಯಾಗಿದ್ದೇನೆ. ಇಷ್ಟು ದಿನ ಅವರನ್ನು ಬಂದಿಸಲಾಗಿತ್ತು, ಅವರ ಬಂಧನಕ್ಕೆ ಕಾರಣ ಏನೆಂಬುದು ನನಗೆ ತಿಳಿದಿಲ್ಲ ಎಂದಿದ್ದಾರೆ. ಮೂರು ವರ್ಷಗಳಿಂದ ಯಾವುದೇ ಯೋಜನೆ ಅಥವಾ ನೂತನ ಕಾರ್ಯಗಳು ನಡೆದಿಲ್ಲ. ಇದರಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಉಂಟಾಗಿದೆ ಎಂದು ಆಜಾದ್ ಆರೋಪಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿರುವ ನಿರ್ಧಾರವು ರಾಜ್ಯದ ಜನರನ್ನು ಅವಮಾನಿಸಿದಂತಿದೆ. ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು. ಜಮ್ಮು ಮತ್ತು ಕಾಶ್ಮೀರವನ್ನು ಮತ್ತೆ ರಾಜ್ಯವೆಂದು ಘೋಷಿಸಬೇಕು ಎಂದಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿಯಾಗಬೇಕಾದರೆ ಶ್ರೀನಗರದಲ್ಲಿ ಬಂಧನದಲ್ಲಿರುವ ಎಲ್ಲ ರಾಜಕೀಯ ಮುಖಂಡರನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.

ಗೃಹ ಬಂಧನದಿಂದ ಬಿಡುಗಡೆಯಾಗಿರುವ ಫಾರೂಕ್ ಅಬ್ದುಲ್ಲಾ ಅವರನ್ನ ಭೇಟಿ ಮಾಡಿ ಮಾತನಾಡಿದ ಅವರು, 'ಜಮ್ಮು ಮತ್ತು ಕಾಶ್ಮೀರ ಪ್ರಗತಿ ಸಾಧಿಸಬೇಕಾದರೆ, ಶ್ರೀನಗರದಲ್ಲಿ ಬಂಧನದಲ್ಲಿರುವ ಎಲ್ಲಾ ರಾಜಕೀಯ ಮುಖಂಡರನ್ನು ಬಿಡುಗಡೆ ಮಾಡಬೇಕು' ಎಂದಿದ್ದಾರೆ.

ಗುಲಾಮ್ ನಬಿ ಆಜಾದ್, ಕಾಂಗ್ರೆಸ್ ನಾಯಕ

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಪ್ರಕ್ರಿಯೆ ಪ್ರಾರಂಭವಾಗಬೇಕು. ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿ ಚುನಾವಣೆ ನಡೆಸಬೇಕು ಎಂದು ಆಜಾದ್ ಹೇಳಿದ್ದಾರೆ.

ಏಳು ತಿಂಗಳ ನಂತರ ಫಾರೂಕ್ ಅಬ್ದುಲ್ಲಾ ಅವರನ್ನು ಭೇಟಿಯಾಗಿದ್ದೇನೆ. ಇಷ್ಟು ದಿನ ಅವರನ್ನು ಬಂದಿಸಲಾಗಿತ್ತು, ಅವರ ಬಂಧನಕ್ಕೆ ಕಾರಣ ಏನೆಂಬುದು ನನಗೆ ತಿಳಿದಿಲ್ಲ ಎಂದಿದ್ದಾರೆ. ಮೂರು ವರ್ಷಗಳಿಂದ ಯಾವುದೇ ಯೋಜನೆ ಅಥವಾ ನೂತನ ಕಾರ್ಯಗಳು ನಡೆದಿಲ್ಲ. ಇದರಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಉಂಟಾಗಿದೆ ಎಂದು ಆಜಾದ್ ಆರೋಪಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿರುವ ನಿರ್ಧಾರವು ರಾಜ್ಯದ ಜನರನ್ನು ಅವಮಾನಿಸಿದಂತಿದೆ. ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು. ಜಮ್ಮು ಮತ್ತು ಕಾಶ್ಮೀರವನ್ನು ಮತ್ತೆ ರಾಜ್ಯವೆಂದು ಘೋಷಿಸಬೇಕು ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.