ಇಂದೋರ್ (ಮಧ್ಯಪ್ರದೇಶ): ಫೆಬ್ರವರಿ 15 ರಂದು ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ದಿಗ್ವಿಜಯ ಸಿಂಗ್, 'ಅತಿಥಿ ದೇವೋ ಭವ' ಭಾರತೀಯ ಸಂಸ್ಕೃತಿ. ಈ ತತ್ವದ ಆಧಾರದ ಮೇಲೆ ನಾವು ಎಲ್ಲರನ್ನೂ ಸ್ವಾಗತಿಸುತ್ತೇವೆ ಎಂದಿದ್ದಾರೆ.
ಭಾರತೀಯ ಸಂವಿಧಾನದಲ್ಲಿ, ಧರ್ಮದ ಆಧಾರದ ಮೇಲೆ ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ. ಬಿಜೆಪಿ ಧರ್ಮಗಳ ಆಧಾರದ ಮೇಲೆ ಸಮುದಾಯಗಳನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.