ನವದೆಹಲಿ : ಕೃಷಿ ಮಸೂದೆ ವಿರೋಧಿಸಿ ರೈತರ ದೆಹಲಿ ಚಲೋಗೆ ದೇಶದಾದ್ಯಂತ ಬೆಂಬಲ ದೊರೆತಿದೆ. ದೇಶದ ನಾನಾ ಭಾಗಗಳಿಂದ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಕೇಂದ್ರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಆದರೆ, ಕಳೆದೆರಡು ದಿನಗಳಿಂದ ರೈತರ ಮೇಲೆ ಪೊಲೀಸರು ಜಲಫಿರಂಗಿ, ಅಶ್ರುವಾಯು ಪ್ರಯೋಗಿಸುತ್ತಿದ್ದು, ತೀವ್ರ ವಿರೋಧ ಕೇಳಿ ಬಂದಿದೆ. ಇದೀಗ ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪೊಲೀಸರ ಕೃತ್ಯಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ.
-
बड़ी ही दुखद फ़ोटो है। हमारा नारा तो ‘जय जवान जय किसान’ का था लेकिन आज PM मोदी के अहंकार ने जवान को किसान के ख़िलाफ़ खड़ा कर दिया।
— Rahul Gandhi (@RahulGandhi) November 28, 2020 " class="align-text-top noRightClick twitterSection" data="
यह बहुत ख़तरनाक है। pic.twitter.com/1pArTEECsU
बड़ी ही दुखद फ़ोटो है। हमारा नारा तो ‘जय जवान जय किसान’ का था लेकिन आज PM मोदी के अहंकार ने जवान को किसान के ख़िलाफ़ खड़ा कर दिया।
यह बहुत ख़तरनाक है। pic.twitter.com/1pArTEECsU
बड़ी ही दुखद फ़ोटो है। हमारा नारा तो ‘जय जवान जय किसान’ का था लेकिन आज PM मोदी के अहंकार ने जवान को किसान के ख़िलाफ़ खड़ा कर दिया।
— Rahul Gandhi (@RahulGandhi) November 28, 2020
यह बहुत ख़तरनाक है। pic.twitter.com/1pArTEECsU
ಪೊಲೀಸರು ರೈತರಿಗೆ ಲಾಠಿಚಾರ್ಜ್ ಮಾಡುತ್ತಿರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದು, ಇದು ತುಂಬಾ ದುಃಖದ ಫೋಟೋ. ನಮ್ಮ ಘೋಷಣೆ 'ಜೈ ಜವಾನ್ ಜೈ ಕಿಸಾನ್'. ಆದರೆ, ಇಂದು ಪ್ರಧಾನಿ ಮೋದಿ ಅವರ ದುರಹಂಕಾರವು ಜವಾನ್ ಅವರನ್ನು ಕಿಸಾನ್ ವಿರುದ್ಧ ನಿಲ್ಲುವಂತೆ ಮಾಡಿದೆ. ಇದು ತುಂಬಾ ಅಪಾಯಕಾರಿ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ರೈತರ ಹೋರಾಟ ಹತ್ತಿಕ್ಕಲು ಯಾವ ಸರ್ಕಾರದಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ