ETV Bharat / bharat

ಅಮಾನುಷ ಹತ್ಯಾಕಾಂಡಕ್ಕೆ ನೂರು ವರ್ಷ: ಗಣ್ಯಾತಿಗಣ್ಯರಿಂದ ಹುತಾತ್ಮರಿಗೆ ಗೌರವ - undefined

ಶಸ್ತ್ರಾಸ್ತ್ರವಿಲ್ಲದ ಅಮಾಯಕ ಭಾರತೀಯ ನಾಗರಿಕರನ್ನ ಬ್ರಿಟಿಷರ ಬಂದೂಕುಗಳು ಬಲಿಪಡೆದ ಕರಾಳ ಘಟನೆ ಸಂಭವಿಸಿ ಇಂದಿಗೆ ಶತ ವರ್ಷ ಕಳೆದಿದೆ.

ಭಾರತೀಯ ಅಮಾಯಕ ನಾಗರೀಕರನ್ನ ಬಲಿಪಡೆದ ಕರಾಳ ಘಟನೆ ಸಂಭವಿಸಿ ಶತ ವರ್ಷ
author img

By

Published : Apr 13, 2019, 11:25 AM IST

ಅಮೃತಸರ: 1919ರ ಎಪ್ರಿಲ್‌ 13 ರಂದು ಬ್ರಿಟಿಷರು ಜಾರಿಗೆ ತಂದ ರೌಲಟ್ ಕಾಯಿದೆಯನ್ನು ವಿರೋಧಿಸಿ ಪಂಜಾಬ್ ರಾಜ್ಯದ ಮುಖ್ಯವಾದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳಲ್ಲಿ ಒಂದಾದ ಅಮೃತಸರದಲ್ಲಿನ ಹೃದಯಭಾಗದಲ್ಲಿರುವ ಜಲಿಯನ್​ವಾಲ ಬಾಗ್ ಉದ್ಯಾನದಲ್ಲಿ ಸಹಸ್ರಾರು ಮಂದಿ ಭಾರತೀಯರು, ಮುಖ್ಯವಾಗಿ ಪಂಜಾಬ್​ನ ನಾಗರಿಕರು ಸಮಾವೇಶಗೊಂಡಿದ್ದರು. ಅದು ಸಿಖ್ಖರ ಪವಿತ್ರ ದಿನಗಳಲ್ಲೊಂದಾದ ಬೈಸಾಖಿ ದಿನ.

ಜಲಿಯನ್​ವಾಲಾ ಬಾಗ್​ ಹತ್ಯಾಕಾಂಡಕ್ಕೆ ನೂರು ವರ್ಷ

ಆ ಪವಿತ್ರದಿನದಂದು ಬೈಸಾಖಿ ಹಬ್ಬವನ್ನು ಆಚರಿಸಲು ಅಮೃತಸರದಲ್ಲಿ ಸಮಾವೇಶಗೊಳ್ಳುವುದು ಸಂಪ್ರದಾಯವಾಗಿ ರೂಪುಗೊಂಡಿತ್ತು. ಸಂವಹನ ತಂತ್ರಜ್ಞಾನವು ತೀರಾ ಹಿಂದುಳಿದಿದ್ದ ಪಂಜಾಬ್​ನಲ್ಲಿ, ಗ್ರಾಮೀಣ ಪ್ರದೇಶದಿಂದ ಅಮೃತಸರಕ್ಕೆ ಬರುತ್ತಿದ್ದ ಜನರಿಗೆ ಶಾಸನಬದ್ಧವಾಗಿ ಅಮೃತಸರದಲ್ಲಿ ಐದಕ್ಕಿಂತ ಹೆಚ್ಚಿನ ಜನ ಗುಂಪುಗೂಡುವಂತಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿರಲಿಲ್ಲ. (ಮಾರ್ಷಲ್ ನಿಯಮ). ಆದ್ದರಿಂದ ಅಂದು ನಡೆದ ಸಮಾವೇಶ, ನಿಯಮದ ಉಲ್ಲಂಘನೆಯಾಗಿತ್ತು ಎನ್ನಲಾಗುತ್ತದೆ.

ನಿಯಮ ಉಲ್ಲಂಘನೆಯಿಂದ ಆಕ್ರೋಶಗೊಂಡ ಬ್ರಿಟಿಷರು ಜನರಿಗೆ ತಕ್ಕಪಾಠ ಕಲಿಸಲು ನಿರ್ಧರಿಸಿದರು. ಪರಿಣಾಮ ಸೈನಿಕರಿದ್ದ ಬಂದೂಕುಗಳಿಂದ ಶಸ್ತ್ರ ಸಜ್ಜಿತವಾದ ತುಕಡಿಯೊಂದು ಉದ್ಯಾನವನಕ್ಕೆ ಎರಡು ಸಜ್ಜಿತ ಕಾರುಗಳೊಂದಿಗೆ ಬಂದಿತು. ಮೆಷಿನ್​ಗನ್​ ‍ಗಳನ್ನು ಅಳವಡಿಸಲಾಗದ್ದ ಆ ವಾಹನಗಳು, ಉದ್ಯಾನದ ಕಡಿದಾದ ಬಾಗಿಲಿನಿಂದ ಬರಲು ಅಸಾಧ್ಯವಾಗಿತ್ತು. ಆ ತುಕಡಿಯ ನಿಯಂತ್ರಕನಾದ ಬ್ರಿಗೇಡಿಯರ್ ಜನರಲ್ ರೆಗಿನಾಲ್ಡ್ ಡೈಯರ್ ಉದ್ಯಾನದೊಳಗೆ ಕಾಲಿಡುತ್ತಲೇ ಅಲ್ಲಿ ನೆರೆದಿದ್ದವರಿಗೆ ಯಾವೊಂದು ಎಚ್ಚರಿಕೆಯನ್ನೂ ಕೊಡದೆ, ಗುಂಪು ಚದುರುವಂತೆ ಯಾವೊಂದು ಆದೇಶವನ್ನು ನೀಡದೆ ಹಠಾತ್ತಾಗಿ ಗುಂಡಿನ ಮಳೆಗರೆವಂತೆ ಆದೇಶ ನೀಡಿದ.

ಆಗ ಪ್ರಾರಂಭವಾದದ್ದು ಅಕ್ಷರಶಃ ಅಮಾನವೀಯ ಹತ್ಯಕಾಂಡ. ಯಾವುದೇ ಶಸ್ತ್ರಾಸ್ತ್ರವಿಲ್ಲದೆ ಸೇರಿದ್ದ ಅಮಾಯಕ ಜನರ ಮೇಲೆ ಸುಮಾರು 10 ರಿಂದ 15 ನಿಮಿಷ ನಿರಂತರವಾಗಿ ಗುಂಡಿನ ಮಳೆಗೆರೆಯಲಾಯಿತು. ನೋಡ ನೋಡುತ್ತಿದ್ದಂತೆಯೇ ನೂರಾರು ಜನ ನೆಲಕ್ಕುರುಳಿದರು. ಗಾಯಗೊಂಡವರ ಆಕ್ರಂದನ ಮುಗಿಲು ಮುಟ್ಟಿತು. ಗುಂಡಿನ ದಾಳಿಯಿಂದ ಪಾರಾಗಲು ಓಡುವಾಗ ಕಾಲ್ತುಳಿತಕ್ಕೆ ಸಿಕ್ಕಿ ಮರಣ ಹೊಂದಿದವರು ನೂರಾರು ಜನ. ಕೆಲವರು ಎತ್ತರದ ಗೋಡೆಯನ್ನು ಹಾರಲು ಹೋಗಿ ಸೈನಿಕರ ಗುಂಡಿಗೆ ಬಲಿಯಾದರು. ಮೈದಾನದ ಪಕ್ಕದಲ್ಲಿದ್ದ ಬಾವಿಯೊಳಗೆ ಹಾರಿ ಪ್ರಾಣ ಉಳಿಸಿಕೊಳ್ಳಬಹುದೆಂದು ಹಲವರು ಬಾವಿಗೆ ಹಾರಿದರು. ಈ ಹತ್ಯಾಕಾಂಡ ಸ್ಮಾರಕದಲ್ಲಿನ ಅಂಶವೊಂದರ ಪ್ರಕಾರ ಬಾವಿಯೊಂದರಿಂದಲೇ ಸುಮಾರು 120 ಶವಗಳನ್ನು ಹೊರತೆಗೆಯಲಾಗಿತ್ತು.

ಇನ್ನು ಘಟನೆ ನಡೆದ ದಿನ ಕರ್ಫ್ಯೂ ವಿಧಿಸಿದ ಕಾರಣ, ಗಾಯಗೊಂಡ ಹಲವರನ್ನು ಹತ್ಯಾಕಾಂಡದ ಸ್ಥಳದಿಂದ ಸ್ಥಳಾಂತರಿಸಲು ಅಗಲಿಲ್ಲ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ 379. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗೂ ಗಾಯಗೊಂಡವರ ಸಂಖ್ಯೆ 1200ಕ್ಕೂ ಹೆಚ್ಚು. ಅಲ್ಲದೆ ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು 1800ಕ್ಕೂ ಹೆಚ್ಚು ಎಂದು ಹೇಳಲಾಗುತ್ತಿದೆ.

ನೂರಾರು ಅಮಾಯಕರನ್ನ ಬಲಿ ಪಡೆದ ಬ್ರಿಟಿಷರ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಶತಮಾನ ಪೂರೈಸಿದ ಅಮಾನುಶ ಹತ್ಯಕಾಂಡದ ಸ್ಮರಣಾರ್ಥ ಇಂದು ಜಲಿಯನ್​ವಾಲಾ ಬಾಗ್​ ಸ್ಮಾರಕದ ಬಳಿ ಹುತಾತ್ಮರಿಗೆ ಗೌರವ ಸಲ್ಲಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

  • Today, when we observe 100 years of the horrific Jallianwala Bagh massacre, India pays tributes to all those martyred on that fateful day. Their valour and sacrifice will never be forgotten. Their memory inspires us to work even harder to build an India they would be proud of. pic.twitter.com/jBwZoSm41H

    — Chowkidar Narendra Modi (@narendramodi) April 13, 2019 " class="align-text-top noRightClick twitterSection" data=" ">
  • A 100 years ago today, our beloved freedom fighters were martyred at Jallianwala Bagh. A horrific massacre, a stain on civilisation, that day of sacrifice can never be forgotten by India. At this solemn moment, we pay our tribute to the immortals of Jallianwala #PresidentKovind pic.twitter.com/tNt0v5aFWv

    — President of India (@rashtrapatibhvn) April 13, 2019 " class="align-text-top noRightClick twitterSection" data=" ">

ಅಮೃತಸರ: 1919ರ ಎಪ್ರಿಲ್‌ 13 ರಂದು ಬ್ರಿಟಿಷರು ಜಾರಿಗೆ ತಂದ ರೌಲಟ್ ಕಾಯಿದೆಯನ್ನು ವಿರೋಧಿಸಿ ಪಂಜಾಬ್ ರಾಜ್ಯದ ಮುಖ್ಯವಾದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳಲ್ಲಿ ಒಂದಾದ ಅಮೃತಸರದಲ್ಲಿನ ಹೃದಯಭಾಗದಲ್ಲಿರುವ ಜಲಿಯನ್​ವಾಲ ಬಾಗ್ ಉದ್ಯಾನದಲ್ಲಿ ಸಹಸ್ರಾರು ಮಂದಿ ಭಾರತೀಯರು, ಮುಖ್ಯವಾಗಿ ಪಂಜಾಬ್​ನ ನಾಗರಿಕರು ಸಮಾವೇಶಗೊಂಡಿದ್ದರು. ಅದು ಸಿಖ್ಖರ ಪವಿತ್ರ ದಿನಗಳಲ್ಲೊಂದಾದ ಬೈಸಾಖಿ ದಿನ.

ಜಲಿಯನ್​ವಾಲಾ ಬಾಗ್​ ಹತ್ಯಾಕಾಂಡಕ್ಕೆ ನೂರು ವರ್ಷ

ಆ ಪವಿತ್ರದಿನದಂದು ಬೈಸಾಖಿ ಹಬ್ಬವನ್ನು ಆಚರಿಸಲು ಅಮೃತಸರದಲ್ಲಿ ಸಮಾವೇಶಗೊಳ್ಳುವುದು ಸಂಪ್ರದಾಯವಾಗಿ ರೂಪುಗೊಂಡಿತ್ತು. ಸಂವಹನ ತಂತ್ರಜ್ಞಾನವು ತೀರಾ ಹಿಂದುಳಿದಿದ್ದ ಪಂಜಾಬ್​ನಲ್ಲಿ, ಗ್ರಾಮೀಣ ಪ್ರದೇಶದಿಂದ ಅಮೃತಸರಕ್ಕೆ ಬರುತ್ತಿದ್ದ ಜನರಿಗೆ ಶಾಸನಬದ್ಧವಾಗಿ ಅಮೃತಸರದಲ್ಲಿ ಐದಕ್ಕಿಂತ ಹೆಚ್ಚಿನ ಜನ ಗುಂಪುಗೂಡುವಂತಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿರಲಿಲ್ಲ. (ಮಾರ್ಷಲ್ ನಿಯಮ). ಆದ್ದರಿಂದ ಅಂದು ನಡೆದ ಸಮಾವೇಶ, ನಿಯಮದ ಉಲ್ಲಂಘನೆಯಾಗಿತ್ತು ಎನ್ನಲಾಗುತ್ತದೆ.

ನಿಯಮ ಉಲ್ಲಂಘನೆಯಿಂದ ಆಕ್ರೋಶಗೊಂಡ ಬ್ರಿಟಿಷರು ಜನರಿಗೆ ತಕ್ಕಪಾಠ ಕಲಿಸಲು ನಿರ್ಧರಿಸಿದರು. ಪರಿಣಾಮ ಸೈನಿಕರಿದ್ದ ಬಂದೂಕುಗಳಿಂದ ಶಸ್ತ್ರ ಸಜ್ಜಿತವಾದ ತುಕಡಿಯೊಂದು ಉದ್ಯಾನವನಕ್ಕೆ ಎರಡು ಸಜ್ಜಿತ ಕಾರುಗಳೊಂದಿಗೆ ಬಂದಿತು. ಮೆಷಿನ್​ಗನ್​ ‍ಗಳನ್ನು ಅಳವಡಿಸಲಾಗದ್ದ ಆ ವಾಹನಗಳು, ಉದ್ಯಾನದ ಕಡಿದಾದ ಬಾಗಿಲಿನಿಂದ ಬರಲು ಅಸಾಧ್ಯವಾಗಿತ್ತು. ಆ ತುಕಡಿಯ ನಿಯಂತ್ರಕನಾದ ಬ್ರಿಗೇಡಿಯರ್ ಜನರಲ್ ರೆಗಿನಾಲ್ಡ್ ಡೈಯರ್ ಉದ್ಯಾನದೊಳಗೆ ಕಾಲಿಡುತ್ತಲೇ ಅಲ್ಲಿ ನೆರೆದಿದ್ದವರಿಗೆ ಯಾವೊಂದು ಎಚ್ಚರಿಕೆಯನ್ನೂ ಕೊಡದೆ, ಗುಂಪು ಚದುರುವಂತೆ ಯಾವೊಂದು ಆದೇಶವನ್ನು ನೀಡದೆ ಹಠಾತ್ತಾಗಿ ಗುಂಡಿನ ಮಳೆಗರೆವಂತೆ ಆದೇಶ ನೀಡಿದ.

ಆಗ ಪ್ರಾರಂಭವಾದದ್ದು ಅಕ್ಷರಶಃ ಅಮಾನವೀಯ ಹತ್ಯಕಾಂಡ. ಯಾವುದೇ ಶಸ್ತ್ರಾಸ್ತ್ರವಿಲ್ಲದೆ ಸೇರಿದ್ದ ಅಮಾಯಕ ಜನರ ಮೇಲೆ ಸುಮಾರು 10 ರಿಂದ 15 ನಿಮಿಷ ನಿರಂತರವಾಗಿ ಗುಂಡಿನ ಮಳೆಗೆರೆಯಲಾಯಿತು. ನೋಡ ನೋಡುತ್ತಿದ್ದಂತೆಯೇ ನೂರಾರು ಜನ ನೆಲಕ್ಕುರುಳಿದರು. ಗಾಯಗೊಂಡವರ ಆಕ್ರಂದನ ಮುಗಿಲು ಮುಟ್ಟಿತು. ಗುಂಡಿನ ದಾಳಿಯಿಂದ ಪಾರಾಗಲು ಓಡುವಾಗ ಕಾಲ್ತುಳಿತಕ್ಕೆ ಸಿಕ್ಕಿ ಮರಣ ಹೊಂದಿದವರು ನೂರಾರು ಜನ. ಕೆಲವರು ಎತ್ತರದ ಗೋಡೆಯನ್ನು ಹಾರಲು ಹೋಗಿ ಸೈನಿಕರ ಗುಂಡಿಗೆ ಬಲಿಯಾದರು. ಮೈದಾನದ ಪಕ್ಕದಲ್ಲಿದ್ದ ಬಾವಿಯೊಳಗೆ ಹಾರಿ ಪ್ರಾಣ ಉಳಿಸಿಕೊಳ್ಳಬಹುದೆಂದು ಹಲವರು ಬಾವಿಗೆ ಹಾರಿದರು. ಈ ಹತ್ಯಾಕಾಂಡ ಸ್ಮಾರಕದಲ್ಲಿನ ಅಂಶವೊಂದರ ಪ್ರಕಾರ ಬಾವಿಯೊಂದರಿಂದಲೇ ಸುಮಾರು 120 ಶವಗಳನ್ನು ಹೊರತೆಗೆಯಲಾಗಿತ್ತು.

ಇನ್ನು ಘಟನೆ ನಡೆದ ದಿನ ಕರ್ಫ್ಯೂ ವಿಧಿಸಿದ ಕಾರಣ, ಗಾಯಗೊಂಡ ಹಲವರನ್ನು ಹತ್ಯಾಕಾಂಡದ ಸ್ಥಳದಿಂದ ಸ್ಥಳಾಂತರಿಸಲು ಅಗಲಿಲ್ಲ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ 379. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗೂ ಗಾಯಗೊಂಡವರ ಸಂಖ್ಯೆ 1200ಕ್ಕೂ ಹೆಚ್ಚು. ಅಲ್ಲದೆ ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು 1800ಕ್ಕೂ ಹೆಚ್ಚು ಎಂದು ಹೇಳಲಾಗುತ್ತಿದೆ.

ನೂರಾರು ಅಮಾಯಕರನ್ನ ಬಲಿ ಪಡೆದ ಬ್ರಿಟಿಷರ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಶತಮಾನ ಪೂರೈಸಿದ ಅಮಾನುಶ ಹತ್ಯಕಾಂಡದ ಸ್ಮರಣಾರ್ಥ ಇಂದು ಜಲಿಯನ್​ವಾಲಾ ಬಾಗ್​ ಸ್ಮಾರಕದ ಬಳಿ ಹುತಾತ್ಮರಿಗೆ ಗೌರವ ಸಲ್ಲಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

  • Today, when we observe 100 years of the horrific Jallianwala Bagh massacre, India pays tributes to all those martyred on that fateful day. Their valour and sacrifice will never be forgotten. Their memory inspires us to work even harder to build an India they would be proud of. pic.twitter.com/jBwZoSm41H

    — Chowkidar Narendra Modi (@narendramodi) April 13, 2019 " class="align-text-top noRightClick twitterSection" data=" ">
  • A 100 years ago today, our beloved freedom fighters were martyred at Jallianwala Bagh. A horrific massacre, a stain on civilisation, that day of sacrifice can never be forgotten by India. At this solemn moment, we pay our tribute to the immortals of Jallianwala #PresidentKovind pic.twitter.com/tNt0v5aFWv

    — President of India (@rashtrapatibhvn) April 13, 2019 " class="align-text-top noRightClick twitterSection" data=" ">
Intro:Body:Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.