ನವದೆಹಲಿ: ಹಾಸ್ಟೆಲ್ ಶುಲ್ಕ ಹೆಚ್ಚಳ ವಿರೋಧಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಇಂದು ವಿವಿ ಉಪ ಕುಲಪತಿ ಮಾಮಿಡಾಳ ಜಗದೀಶ್ಕುಮಾರ್ ಅವರ ಕಾರಿನ ಮೇಲೆ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ.
15-20 ವಿದ್ಯಾರ್ಥಿಗಳ ಗುಂಪೊಂದು ಉಪಕುಲಪತಿ ಜಗದೀಶ್ ಅವರ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಅವರ ಕಾರಿನ ಮುಂಭಾಗದ ಗಾಜು ಜಖಂಗೊಂಡಿದೆ. ಬಳಿಕ ಕ್ಯಾಂಪಸ್ ಆವರಣದಲ್ಲಿದ್ದ ಭದ್ರತಾ ಸಿಬ್ಬಂದಿ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.
ಪರೀಕ್ಷೆಗಳು ನಡೆಯುತ್ತಿದ್ದ ಸಲುವಾಗಿ ಪರಿಶೀಲನೆಗಾಗಿ ಅಲ್ಲಿಗೆ ಹೋಗಿದ್ದೆ. ಬಳಿಕ ಆಡಳಿತ ವಿಭಾಗದ ಕಟ್ಟಡದತ್ತ ಹಿಂದಿರುಗಿದಾಗ 15-20 ವಿದ್ಯಾರ್ಥಿಗಳ ಗುಂಪು ಸುತ್ತುವರಿದು ದಾಳಿ ನಡೆಸಿತು. ಆದರೆ, ವಿವಿ ಭದ್ರತಾ ಸಿಬ್ಬಂದಿ, ಪೊಲೀಸರು ನನ್ನನ್ನು ರಕ್ಷಿಸಿದರು ಎಂದು ಉಪ ಕುಲಪತಿ ಜಗದೀಶ್ ಕುಮಾರ್ ಘಟನೆ ವಿವರಿಸಿದರು.