ETV Bharat / bharat

ಕಾನ್ಪುರ ಪೊಲೀಸರ ಹತ್ಯೆ ಪ್ರಕರಣ: ಇನ್ನೊಬ್ಬ ಆರೋಪಿ ಬಂಧನ

author img

By

Published : Aug 3, 2020, 9:43 AM IST

ಎಂಟು ಮಂದಿ ಪೊಲೀಸ್ ಸಿಬ್ಬಂದಿಯ ಸಾವಿಗೆ ಕಾರಣವಾದ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಮತ್ತೊಬ್ಬ ಅಪರಾಧಿಯನ್ನು ಬಂಧಿಸಲಾಗಿದೆ. ದಾಳಿಯ ಹಿಂದೆ ಇದ್ದ ಇತರರ ಕುರಿತು ಮಾಹಿತಿ ಪಡೆಯಲು ಬಂಧಿತನನ್ನು ಹಿರಿಯ ಅಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ.

arrest
arrest

ಕಾನ್ಪುರ (ಉ.ಪ್ರ): ಕಳೆದ ತಿಂಗಳು ಕಾನ್ಪುರದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿಯ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನ ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಚೌಬೆಪುರ ನಿವಾಸಿ ರಾಮ್ ಸಿಂಗ್ ಯಾದವ್​ನನ್ನು ಬಂಧಿಸಲಾಗಿದೆ ಎಂದು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಇನ್ಸ್‌ಪೆಕ್ಟರ್ ಜನರಲ್ ಅಮಿತಾಬ್ ಯಶ್ ತಿಳಿಸಿದ್ದಾರೆ.

ಈ ದಾಳಿಯ ಹಿಂದೆ ಇದ್ದ ಇತರರ ಕುರಿತು ಮಾಹಿತಿ ಪಡೆಯಲು ರಾಮ್ ಸಿಂಗ್ ಯಾದವ್​ನನ್ನು ಹಿರಿಯ ಅಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ ಎಂದು ಅಮಿತಾಬ್ ಯಶ್ ಹೇಳಿದ್ದಾರೆ.

ಇದಕ್ಕೆ ಸಂಬಂಧಪಟ್ಟಂತೆ ಇಲ್ಲಿಯವರೆಗೆ ಎಂಟು ಆರೋಪಿಗಳನ್ನು ಬಂಧಿಸಲಾಗಿದ್ದು, ಇತರ ಏಳು ಆರೋಪಿಗಳ ಪತ್ತೆಕಾರ್ಯ ನಡೆಯುತ್ತಿದೆ.

ಕಾನ್ಪುರ (ಉ.ಪ್ರ): ಕಳೆದ ತಿಂಗಳು ಕಾನ್ಪುರದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿಯ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನ ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಚೌಬೆಪುರ ನಿವಾಸಿ ರಾಮ್ ಸಿಂಗ್ ಯಾದವ್​ನನ್ನು ಬಂಧಿಸಲಾಗಿದೆ ಎಂದು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಇನ್ಸ್‌ಪೆಕ್ಟರ್ ಜನರಲ್ ಅಮಿತಾಬ್ ಯಶ್ ತಿಳಿಸಿದ್ದಾರೆ.

ಈ ದಾಳಿಯ ಹಿಂದೆ ಇದ್ದ ಇತರರ ಕುರಿತು ಮಾಹಿತಿ ಪಡೆಯಲು ರಾಮ್ ಸಿಂಗ್ ಯಾದವ್​ನನ್ನು ಹಿರಿಯ ಅಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ ಎಂದು ಅಮಿತಾಬ್ ಯಶ್ ಹೇಳಿದ್ದಾರೆ.

ಇದಕ್ಕೆ ಸಂಬಂಧಪಟ್ಟಂತೆ ಇಲ್ಲಿಯವರೆಗೆ ಎಂಟು ಆರೋಪಿಗಳನ್ನು ಬಂಧಿಸಲಾಗಿದ್ದು, ಇತರ ಏಳು ಆರೋಪಿಗಳ ಪತ್ತೆಕಾರ್ಯ ನಡೆಯುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.