ETV Bharat / bharat

ಕೇಂದ್ರದ ರೈತ ವಿರೋಧಿ ಕೃಷಿ ಮಸೂದೆಗಳ ವಿರುದ್ಧ ಆಪ್​ ಮತ ಚಲಾಯಿಸಲಿದೆ: ಕೇಜ್ರಿವಾಲ್​ - ಕೃಷಿ ಮಸೂದೆಗಳಿಗೆ ಆಪ್ ಮತ ಚಲಾವಣೆ

ಕೇಂದ್ರದ ಕೃಷಿಗೆ ಸಂಬಂಧಿತ ಮೂರು ಮಸೂದೆಗಳು ರೈತ ವಿರೋಧಿಯಾಗಿವೆ. ದೇಶದಾದ್ಯಂತ ರೈತರು ಅದನ್ನು ವಿರೋಧಿಸಿದ್ದಾರೆ. ಆಮ್​ ಆದ್ಮಿ ಪಕ್ಷ ಅದರ ವಿರುದ್ಧ ಮತ ಚಲಾಯಿಸಲಿದೆ ಎಂದು ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಹೇಳಿದ್ದಾರೆ.

farming-related bills anti-farmer
ಅರವಿಂದ್​ ಕೇಜ್ರಿವಾಲ್​
author img

By

Published : Sep 17, 2020, 1:05 PM IST

ನವದೆಹಲಿ: ಕೃಷಿಗೆ ಸಂಬಂಧಿಸಿದಂತೆ ಸಂಸತ್​ನಲ್ಲಿ ಮಂಡನೆಯಾಗಿರುವ ಮೂರು ಮಸೂದೆಗಳು 'ರೈತ ವಿರೋಧಿ'ಯಾಗಿದ್ದು, ಈ ಮಸೂದೆಗಳ ವಿರುದ್ಧ ಆಮ್​ ಆದ್ಮಿ ಪಕ್ಷ ( ಎಎಪಿ) ಮತ ಚಲಾಯಿಸಲಿದೆ ಎಂದು ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್ ಹೇಳಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಕೇಂದ್ರದ ಕೃಷಿಗೆ ಸಂಬಂಧಿತ ಮೂರು ಮಸೂದೆಗಳು ರೈತ ವಿರೋಧಿಯಾಗಿವೆ. ದೇಶದಾದ್ಯಂತ ರೈತರು ಅದನ್ನು ವಿರೋಧಿಸಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಮಸೂದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ. ಆಮ್​ ಆದ್ಮಿ ಪಕ್ಷದಲ್ಲಿ ಮೂವರು ರಾಜ್ಯಸಭಾ ಮತ್ತು ಒಬ್ಬ ಲೋಕಸಭಾ ಸದಸ್ಯರಿದ್ದಾರೆ.

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ, ರೈತರಿಗೆ ( ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆಗಳನ್ನು ಸೋಮವಾರ ಸಂಸತ್​ನಲ್ಲಿ ಕೇಂದ್ರ ಸರ್ಕಾರ ಮಂಡಿಸಿದೆ.

ಈ ಮಸೂದೆಗಳು, ಕೃಷಿ ಮಂಡಿಗಳ ಹೊರಗೆ ರೈತರ ಉತ್ಪನ್ನಗಳಿಗೆ ತಡೆ ನೀಡಿ, ಮುಕ್ತ ವ್ಯಾಪಾರವನ್ನು ಒದಗಿಸಲು ಪ್ರಯತ್ನಿಸುತ್ತವೆ ಮತ್ತು ಕೃಷಿ ಉತ್ಪನ್ನಗಳ ಮಾರಾಟಕ್ಕಾಗಿ ಖಾಸಗಿಯವರೊಂದಿಗೆ ಕೃಷಿ ಒಪ್ಪಂದಗಳನ್ನು ಮಾಡಿಕೊಳ್ಳಲು ರೈತರಿಗೆ ಅಧಿಕಾರ ನೀಡುತ್ತವೆ.

ನವದೆಹಲಿ: ಕೃಷಿಗೆ ಸಂಬಂಧಿಸಿದಂತೆ ಸಂಸತ್​ನಲ್ಲಿ ಮಂಡನೆಯಾಗಿರುವ ಮೂರು ಮಸೂದೆಗಳು 'ರೈತ ವಿರೋಧಿ'ಯಾಗಿದ್ದು, ಈ ಮಸೂದೆಗಳ ವಿರುದ್ಧ ಆಮ್​ ಆದ್ಮಿ ಪಕ್ಷ ( ಎಎಪಿ) ಮತ ಚಲಾಯಿಸಲಿದೆ ಎಂದು ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್ ಹೇಳಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಕೇಂದ್ರದ ಕೃಷಿಗೆ ಸಂಬಂಧಿತ ಮೂರು ಮಸೂದೆಗಳು ರೈತ ವಿರೋಧಿಯಾಗಿವೆ. ದೇಶದಾದ್ಯಂತ ರೈತರು ಅದನ್ನು ವಿರೋಧಿಸಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಮಸೂದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ. ಆಮ್​ ಆದ್ಮಿ ಪಕ್ಷದಲ್ಲಿ ಮೂವರು ರಾಜ್ಯಸಭಾ ಮತ್ತು ಒಬ್ಬ ಲೋಕಸಭಾ ಸದಸ್ಯರಿದ್ದಾರೆ.

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ, ರೈತರಿಗೆ ( ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆಗಳನ್ನು ಸೋಮವಾರ ಸಂಸತ್​ನಲ್ಲಿ ಕೇಂದ್ರ ಸರ್ಕಾರ ಮಂಡಿಸಿದೆ.

ಈ ಮಸೂದೆಗಳು, ಕೃಷಿ ಮಂಡಿಗಳ ಹೊರಗೆ ರೈತರ ಉತ್ಪನ್ನಗಳಿಗೆ ತಡೆ ನೀಡಿ, ಮುಕ್ತ ವ್ಯಾಪಾರವನ್ನು ಒದಗಿಸಲು ಪ್ರಯತ್ನಿಸುತ್ತವೆ ಮತ್ತು ಕೃಷಿ ಉತ್ಪನ್ನಗಳ ಮಾರಾಟಕ್ಕಾಗಿ ಖಾಸಗಿಯವರೊಂದಿಗೆ ಕೃಷಿ ಒಪ್ಪಂದಗಳನ್ನು ಮಾಡಿಕೊಳ್ಳಲು ರೈತರಿಗೆ ಅಧಿಕಾರ ನೀಡುತ್ತವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.