ತಿರುವನಂತಪುರಂ: ನೆರೆಯ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಲೇ ಇದೆ. ಲಾಕ್ಡೌನ್ ಆಗಿದ್ರೂ ಕೋವಿಡ್ ಹರಡುವಿಕೆ ಮುಂದುವರಿದ ಪರಿಣಾಮ ಕೇರಳದಲ್ಲಿಂದು ಮತ್ತೆ 9 ಹೊಸ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಿಎಂ ಪಿಣರಾಯಿ ವಿಜಯನ್, ದುಬೈನಿಂದ ಬಂದಿದ್ದ ನಾಲ್ವರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ ಅಂತ ಮಾಹಿತಿ ನೀಡಿದ್ದಾರೆ.
ಜೊತೆಗೆ ಯುಕೆ, ಫ್ರಾನ್ಸ್ನಿಂದ ಬಂದಿದ್ದ ತಲಾ ಒಬ್ಬರಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ ಅಂತ ಹೇಳಿದ್ದಾರೆ. ಕೇರಳದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ಇಂದು ಸಂಜೆ ವೇಳೆಗೆ 118ಕ್ಕೆ ಏರಿಕೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 606ರ ಗಡಿ ದಾಟಿದ್ದು, ಅದರಲ್ಲಿ 43 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಡೆಡ್ಲಿ ವೈರಸ್ ಪ್ರಕರಣದಲ್ಲಿ ಏರಿಕೆ ಕಂಡು ಬರುತ್ತಿದ್ದಂತೆ ಮುಂದಿನ 21 ದಿನಗಳ ಕಾಲ ದೇಶವನ್ನೇ ಲಾಕ್ಡೌನ್ ಮಾಡಿ ಮೋದಿ ಆದೇಶ ಹೊರಹಾಕಿದ್ದಾರೆ. ಇದರ ಮಧ್ಯೆ ಕೂಡ ಹೊಸ ಹೊಸ ಪ್ರಕರಣ ಬೆಳಕಿಗೆ ಬರುತ್ತಿರುವುದು ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳ ತಲೆ ಕೆಡಿಸಿದೆ.