ನವದೆಹಲಿ : ಒಂದು ಕಾಲದಲ್ಲಿ ನಿತೀಶ್ ಕುಮಾರ್ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದ ಪೋಲ್ ಸ್ಟ್ರಾಟಜಿಸ್ಟ್ ಪ್ರಶಾಂತ್ ಕಿಶೋರ್ ಈಗ ಸ್ವತಃ ಬಿಹಾರ್ ಸಿಎಂ ವಿರುದ್ಧವೇ ಚಾಟಿ ಬೀಸಿದ್ದಾರೆ. ನಿತೀಶ್ಕುಮಾರ್ ರಾಜೀನಾಮೆ ನೀಡಬೇಕು ಎಂದು ಟ್ವೀಟ್ ಮುಖಾಂತರ ಒತ್ತಾಯಿಸಿದ್ದಾರೆ. ಕೊರೊನಾ ಸೋಂಕಿನಿಂದ ಜನರನ್ನು ರಕ್ಷಿಸಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ನೋಡಿದ್ರೆ ಭಯಾನಕವಾಗಿದೆ. ಸರ್ಕಾರದ ನಿರ್ಧಾರಗಳಿಂದ ಜನರು ಭಾರೀ ತೊಂದರೆಗಳನ್ನು ಎದುರಿಸುತ್ತಿದ್ದಾರೆ.
ಬೇರೆ ರಾಜ್ಯಗಳಿಂದ ಬಿಹಾರಕ್ಕೆ ಬಂದ ಜನರನ್ನು ಒಂದು ರೂಮಿನಲ್ಲಿ ಕ್ವಾರಂಟೈನ್ ಎಂದು ಹೇಳಿ ಇಟ್ಟಿದ್ದಾರೆ. ಅಲ್ಲಿ ಅವರ ಪರಿಸ್ಥಿತಿ ತುಂಬಾ ಭಯಾನಕವಾಗಿದೆ. ಅಲ್ಲಿರುವ ಜನ ನಮ್ಮನ್ನು ಹೊರಗೆ ಬಿಡಿ ಎಂದು ಅಂಗಲಾಚುತ್ತಿದ್ದಾರೆ. ಇದು ನಿತೀಶ್ಕುಮಾರ್ ಅವರ ಕಣ್ಣಿಗೆ ಕಾಣುತ್ತಿಲ್ಲವೇ.. ಆ ಬಡವರ ಕೂಗು ನಿಮಗೆ ಕೇಳಿಸುತ್ತಿಲ್ಲವೇ.. ಎಂದು ತಮ್ಮ ಟ್ವೀಟ್ನಲ್ಲಿ ವಿಡಿಯೋವೊಂದನ್ನ ಹಾಕಿ ರಾಜೀನಾಮೆಗೆ ಆಗ್ರಹಿಸಿದ್ದಾರೆ.
-
.#Corona संक्रमण से लोगों को बचाने के सरकारी प्रयासों की एक और भयावह तस्वीर -
— Prashant Kishor (@PrashantKishor) March 29, 2020 " class="align-text-top noRightClick twitterSection" data="
भारी तकलीफ़ और मुसीबतों को झेलकर देश के कई हिस्सों से बिहार पहुँचने वाले गरीब लोगों के लिए #NitishKumar की #SocialDistancing और #Quarantine की ये व्यवस्था दिल दहलाने वाली है।#NitishMustQuit pic.twitter.com/ot3hygGRk7
">.#Corona संक्रमण से लोगों को बचाने के सरकारी प्रयासों की एक और भयावह तस्वीर -
— Prashant Kishor (@PrashantKishor) March 29, 2020
भारी तकलीफ़ और मुसीबतों को झेलकर देश के कई हिस्सों से बिहार पहुँचने वाले गरीब लोगों के लिए #NitishKumar की #SocialDistancing और #Quarantine की ये व्यवस्था दिल दहलाने वाली है।#NitishMustQuit pic.twitter.com/ot3hygGRk7.#Corona संक्रमण से लोगों को बचाने के सरकारी प्रयासों की एक और भयावह तस्वीर -
— Prashant Kishor (@PrashantKishor) March 29, 2020
भारी तकलीफ़ और मुसीबतों को झेलकर देश के कई हिस्सों से बिहार पहुँचने वाले गरीब लोगों के लिए #NitishKumar की #SocialDistancing और #Quarantine की ये व्यवस्था दिल दहलाने वाली है।#NitishMustQuit pic.twitter.com/ot3hygGRk7
ಲಾಕ್ಡೌನ್ ಘೋಷಣೆಯಾದ ಬಳಿಕ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ಬಿಹಾರಕ್ಕೆ ಆಗಮಿಸುತ್ತಿದ್ದರು. ಹೀಗೆ ಬಂದ ಅವರನ್ನು ಸರ್ಕಾರ ಹೋಂ ಕ್ವಾರಂಟೈನ್ ಎಂದು ಹೇಳಿ ಒಂದು ಕಡೆ ಕೂಡಿ ಹಾಕಿದೆ. ಅಲ್ಲದೇ ಕೆಲವರನ್ನು ಬಲವಂತವಾಗಿ ಅಲ್ಲಿಗೆ ಕರೆ ತರಲಾಗಿದೆ ಎಂದು ಹೇಳಲಾಗುತ್ತಿದೆ.
ಕೊರೊನಾ ವೈರಸ್ ಎದುರಿಸಲು ಸರ್ಕಾರ ತೆಗೆದುಕೊಂಡ ಇಂತಹ ಕ್ರಮಗಳನ್ನು ಅವರು ವಿರೋಧಿಸಿದ್ದಾರೆ. ಒಂದು ಕಾಲದಲ್ಲಿ ಕಿಶೋರ್ ಅವರು ನಿತೀಶ್ ಕುಮಾರ್ ಆಪ್ತರಾಗಿದ್ದರು. ಜೆಡಿಯೂ ಪಾರ್ಟಿಯ ಎರಡೇ ಪ್ರಮುಖ ವ್ಯಕ್ತಿ ಎಂದೇ ಕರೆಯಲಾಗುತಿತ್ತು. ಆದರೆ, ಜೆಡಿಯೂ ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ಸೂಚಿಸಿದ್ದನ್ನು, ಇವರು ವಿರೋಧಿಸಿದ್ದರು. ಬಳಿಕ ಕಿಶೋರ್ ಅವರನ್ನು ಪಕ್ಷದಿಂದ ಕೈಬಿಡಲಾಗಿದೆ.