ETV Bharat / bharat

ಮಹದಾಯಿ ನನ್ನ ತಾಯಿಗಿಂತ ಹೆಚ್ಚು, ಕರ್ನಾಟಕದೊಂದಿಗೆ ರಾಜಿ ಪ್ರಶ್ನೆಯೇ ಇಲ್ಲ: ಗೋವಾ ಸಿಎಂ

author img

By

Published : Feb 6, 2020, 10:41 AM IST

Updated : Feb 6, 2020, 10:47 AM IST

ಬುಧವಾರ ವಿಧಾನಸಭೆಯಲ್ಲಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರ ಭಾಷಣಕ್ಕೆ ಧನ್ಯವಾದ ಹೇಳುವ ಕುರಿತು ನಡೆಯುತ್ತಿದ್ದ ಚರ್ಚೆ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಹದಾಯಿ ನೀರನ್ನು ಸಂಪೂರ್ಣ ಕರ್ನಾಟಕಕ್ಕೆ ಬಿಡುವ ಮಾತೇ ಇಲ್ಲ ಎಂದಿದ್ದಾರೆ.

Pramod Sawant
Pramod Sawant

ಪಣಜಿ(ಗೋವಾ): ನೆರೆಯ ಕರ್ನಾಟಕ ರಾಜ್ಯವೂ ಮಹದಾಯಿ ನೀರನ್ನು ಬೇರೆಡೆಗೆ ತಿರುಗಿಸಿದ್ದರಿಂದ, ಗೋವಾದಲ್ಲಿ ಮಹದಾಯಿ ನೀರಿನ ಹರಿವು ಕಡಿಮೆಯಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರ ಭಾಷಣಕ್ಕೆ ಧನ್ಯವಾದ ಹೇಳುವ ಕುರಿತು ನಡೆಯುತ್ತಿದ್ದ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಅವರು, ಮಹದಾಯಿ ನೀರನ್ನು ಹಂಚಿಕೊಳ್ಳುವ ವಿವಾದದಲ್ಲಿ ಗೋವಾ ಮತ್ತು ಕರ್ನಾಟಕ ಎರಡು ರಾಜ್ಯಗಳನ್ನು ಕಟ್ಟಿಹಾಕಲಾಗಿದೆ. ಮಹದಾಯಿ ನೀರನ್ನು ಬೇರೆಡೆಗೆ ತಿರುಗಿಸುವ ಮೂಲಕ ಉತ್ತರ ಕರ್ನಾಟಕದ ಮೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ ಬಂಡೂರಿ ಯೋಜನೆಯನ್ನು ಗೋವಾ ಸರ್ಕಾರ ತೀವ್ರವಾಗಿ ವಿರೋಧಿಸುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಮಹದಾಯಿ ನೀರಿನ ಹರಿವು ತಿರುಗಿಸುವುದರಿಂದ ನಮ್ಮ ರಾಜ್ಯಕ್ಕೆ ಮಹದಾಯಿ ನೀರಿನ ಹರಿವು ಕಡಿಮೆಯಾಗಿದೆ. ಕರ್ನಾಟಕ ನೀರನ್ನು ಬೇರೆಡೆಗೆ ತಿರುಗಿಸಿರುವ ಕುರಿತು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಗಮನಕ್ಕೆ ತಂದಿದ್ದೇವೆ. ರಾಜ್ಯಕ್ಕೆ ಹರಿಯುವ ಮಹದಾಯಿ ನೀರು ಯಾವುದೇ ಕಾರಣಕ್ಕೂ ವ್ಯರ್ಥವಾಗುವುದಿಲ್ಲ ಎಂಬುದನ್ನು ಸಹ ಕೇಂದ್ರಕ್ಕೆ ನಾವು ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಸಾವಂತ್ ಹೇಳಿದರು.

ಗೋವಾದಲ್ಲಿರುವ ವನ್ಯಜೀವಿಗಳಿಗೆ ಸದಾಕಾಲ ನೀರಿನ ಹರಿವು ಮುಖ್ಯವಾಗುತ್ತದೆ ಎಂದ ಮುಖ್ಯಮಂತ್ರಿ ಸಾವಂತ್​, ಮಹದಾಯಿ ವಿಚಾರವನ್ನು ನಮ್ಮ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಮಹದಾಯಿ ನನಗೆ ತಾಯಿಗಿಂತ ಹೆಚ್ಚು. ಈ ವಿಷಯದಲ್ಲಿ ನಾವು ಎಲ್ಲಿಯೂ ರಾಜಿ ಮಾಡಿಕೊಂಡಿಲ್ಲ. 2000 ದಿಂದಲೂ ನಡೆಯುತ್ತಿರುವ ಮಹದಾಯಿ ಆಂದೋಲನಕ್ಕೆ ನಾನು ಈಗಲೂ ಬದ್ಧನಾಗಿದ್ದೇನೆ. ಮಹದಾಯಿ ವಿಚಾರವಾಗಿ ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಸುವ ಅರ್ಜಿ ಕುರಿತು ಹೋರಾಟ ನಡೆಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಪಣಜಿ(ಗೋವಾ): ನೆರೆಯ ಕರ್ನಾಟಕ ರಾಜ್ಯವೂ ಮಹದಾಯಿ ನೀರನ್ನು ಬೇರೆಡೆಗೆ ತಿರುಗಿಸಿದ್ದರಿಂದ, ಗೋವಾದಲ್ಲಿ ಮಹದಾಯಿ ನೀರಿನ ಹರಿವು ಕಡಿಮೆಯಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರ ಭಾಷಣಕ್ಕೆ ಧನ್ಯವಾದ ಹೇಳುವ ಕುರಿತು ನಡೆಯುತ್ತಿದ್ದ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಅವರು, ಮಹದಾಯಿ ನೀರನ್ನು ಹಂಚಿಕೊಳ್ಳುವ ವಿವಾದದಲ್ಲಿ ಗೋವಾ ಮತ್ತು ಕರ್ನಾಟಕ ಎರಡು ರಾಜ್ಯಗಳನ್ನು ಕಟ್ಟಿಹಾಕಲಾಗಿದೆ. ಮಹದಾಯಿ ನೀರನ್ನು ಬೇರೆಡೆಗೆ ತಿರುಗಿಸುವ ಮೂಲಕ ಉತ್ತರ ಕರ್ನಾಟಕದ ಮೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ ಬಂಡೂರಿ ಯೋಜನೆಯನ್ನು ಗೋವಾ ಸರ್ಕಾರ ತೀವ್ರವಾಗಿ ವಿರೋಧಿಸುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಮಹದಾಯಿ ನೀರಿನ ಹರಿವು ತಿರುಗಿಸುವುದರಿಂದ ನಮ್ಮ ರಾಜ್ಯಕ್ಕೆ ಮಹದಾಯಿ ನೀರಿನ ಹರಿವು ಕಡಿಮೆಯಾಗಿದೆ. ಕರ್ನಾಟಕ ನೀರನ್ನು ಬೇರೆಡೆಗೆ ತಿರುಗಿಸಿರುವ ಕುರಿತು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಗಮನಕ್ಕೆ ತಂದಿದ್ದೇವೆ. ರಾಜ್ಯಕ್ಕೆ ಹರಿಯುವ ಮಹದಾಯಿ ನೀರು ಯಾವುದೇ ಕಾರಣಕ್ಕೂ ವ್ಯರ್ಥವಾಗುವುದಿಲ್ಲ ಎಂಬುದನ್ನು ಸಹ ಕೇಂದ್ರಕ್ಕೆ ನಾವು ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಸಾವಂತ್ ಹೇಳಿದರು.

ಗೋವಾದಲ್ಲಿರುವ ವನ್ಯಜೀವಿಗಳಿಗೆ ಸದಾಕಾಲ ನೀರಿನ ಹರಿವು ಮುಖ್ಯವಾಗುತ್ತದೆ ಎಂದ ಮುಖ್ಯಮಂತ್ರಿ ಸಾವಂತ್​, ಮಹದಾಯಿ ವಿಚಾರವನ್ನು ನಮ್ಮ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಮಹದಾಯಿ ನನಗೆ ತಾಯಿಗಿಂತ ಹೆಚ್ಚು. ಈ ವಿಷಯದಲ್ಲಿ ನಾವು ಎಲ್ಲಿಯೂ ರಾಜಿ ಮಾಡಿಕೊಂಡಿಲ್ಲ. 2000 ದಿಂದಲೂ ನಡೆಯುತ್ತಿರುವ ಮಹದಾಯಿ ಆಂದೋಲನಕ್ಕೆ ನಾನು ಈಗಲೂ ಬದ್ಧನಾಗಿದ್ದೇನೆ. ಮಹದಾಯಿ ವಿಚಾರವಾಗಿ ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಸುವ ಅರ್ಜಿ ಕುರಿತು ಹೋರಾಟ ನಡೆಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ZCZC
PRI ESPL NAT WRG
.PANAJI BES26
GA-SESSION-MAHADAYI
K'taka diverted Mahadayi water, its flow in Goa hit: Sawant
         Panaji, Feb 5 (PTI) Goa Chief Minister Pramod Sawant
on Wednesday told the Legislative Assembly that neighbouring
Karnataka has diverted the Mahadayi river water, due to which
its flow in the state has taken a hit.
         He was speaking during a debate on the motion of
thanks on the motion of thanks to Governor Satya Pal Malik for
his address.
         Goa and Karnataka are locked in a dispute over sharing
of the Mahadayi river water. Goa is strongly opposing the
Kalasa Banduri project proposed to be built by Karnataka on
the river, which is aimed at providing drinking water to three
north Karnataka districts by diverting the Mahadayi water into
the Malaprabha river.
         Speaking in the House, Sawant said the flow of
Mahadayi river has reduced due to the diversion of water by
Karnataka.
         "I am admitting that they (Karnataka) have diverted
the water. We have brought it to the notice of the Union
Ministry of Environment, Forest and Climate Change," he said.
         The Goa government has explained to the Centre that
the water which flows into the state is "not wasted".
         "We have told them that the perennial flow of water is
necessary for Goa's wildlife," he said.
         Sawant said that his government was serious on the
issue of Mahadayi.
         "Mahadayi is more than a mother to me. We have not
compromised anywhere on the issue. I have been associated with
the Mahadayi agitation since 2000," the chief minister said.
         He said the issue would be fought before the Supreme
Court, where special leave petition has been filed by the
state. PTI RPS
NP
NP
02052243
NNNN
Last Updated : Feb 6, 2020, 10:47 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.