ETV Bharat / bharat

ಮಹಾರಾಷ್ಟ್ರದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ತಿಂಗಳ ಸಂಬಳ ಕಡಿತ - ಅಜಿತ್​ ಪವಾರ್

ಕೊರೊನಾ ವೈರಸ್ ವಿರುದ್ಧ ಹೋರಾಡುವ ಸಲುವಾಗಿ ಎಲ್ಲಾ ರಾಜ್ಯಗಳು ತಮ್ಮದೇ ಆದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಕೆಲ ದಿನಗಳ ಹಿಂದೆ ತೆಲಂಗಾಣ ಸರ್ಕಾರ ತನ್ನ ನೌಕರರ ವೇತನವನ್ನು ಕಡಿತಗೊಳಿಸಿ ಕೊರೊನಾ ಮಹಾಮಾರಿಯ ವಿರುದ್ಧ ಹೋರಾಡುವುದಾಗಿ ತಿಳಿಸಿತ್ತು. ಈಗ ಅದೇ ದಾರಿಯನ್ನು ಮಹಾರಾಷ್ಟ್ರ ಸರ್ಕಾರ ಅನುಸರಿಸುತ್ತಿದೆ.

Maharashtra Deputy CM
ಮಹಾರಾಷ್ಟ್ರ ಡಿಸಿಎಂ
author img

By

Published : Mar 31, 2020, 1:58 PM IST

ಮುಂಬೈ (ಮಹಾರಾಷ್ಟ್ರ) : ರಾಜ್ಯದ ಸಿಎಂ ಸೇರಿದಂತೆ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಹಾಗೂ ಎಂಎಲ್​ಸಿಗಳ ಮಾರ್ಚ್​ ತಿಂಗಳ ಶೇ 60ರಷ್ಟು ವೇತನವನ್ನು ಕಡಿತಗೊಳಿಸಲಾಗುತ್ತದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಮಹಾರಾಷ್ಟ್ರ ಡಿಸಿಎಂ ಹಾಗೂ ಹಣಕಾಸು ಸಚಿವ ಅಜಿತ್​ ಪವಾರ್ ಈ ಕುರಿತಾಗಿ ಆದೇಶಿಸಿದ್ದು ಕೊರೊನಾ ವಿರುದ್ಧ ಹೋರಾಡಲು ಈ ಹಣವನ್ನು ಸರ್ಕಾರ ಬಳಸಿಕೊಳ್ಳುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ, ಸಚಿವರು, ಎಂಎಲ್​ಎ ಸೇರಿ ಸರ್ಕಾರಿ ಆಫೀಸರ್​ ಸಂಬಳಕ್ಕೆ ತೆಲಂಗಾಣ ಸರ್ಕಾರದ ಕತ್ತರಿ

ಜನಪ್ರತಿನಿಧಿಗಳು ಮಾತ್ರವಲ್ಲದೇ ರಾಜ್ಯದ ಎ ಹಾಗೂ ಬಿ ದರ್ಜೆಯ ಅಧಿಕಾರಿಗಳ ವೇತನದ ಶೇ 50ರಷ್ಟು ಹಾಗೂ ಸಿ ದರ್ಜೆಯ ನೌಕರರ ವೇತನದ ಶೇ 25ರಷ್ಟನ್ನು ಕಡಿತಗೊಳಿಸಲಾಗುತ್ತದೆ ಎಂದು ಇದೇ ವೇಳೆ ಅವರು ತಿಳಿಸಿದ್ದಾರೆ. ಜೊತೆಗೆ ಡಿ ದರ್ಜೆಯ ನೌಕರರ ವೇತನದಲ್ಲಿ ಯಾವುದೇ ಕಡಿತ ಇರುವುದಿಲ್ಲ ಎಂದು ಈ ವೇಳೆ ಪವಾರ್​​​ ಸ್ಪಷ್ಟಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ತೆಲಂಗಾಣ ಸರ್ಕಾರ ತನ್ನ ನೌಕರರ ವೇತನವನ್ನು ಕಡಿತಗೊಳಿಸಿ ಕೊರೊನಾ ಮಹಾಮಾರಿಯ ವಿರುದ್ಧ ಹೋರಾಡುವುದಾಗಿ ತಿಳಿಸಿತ್ತು. ಈಗ ಅದೇ ದಾರಿಯನ್ನು ಮಹಾರಾಷ್ಟ್ರ ಸರ್ಕಾರ ಅನುಸರಿಸುತ್ತಿದೆ.

ಮುಂಬೈ (ಮಹಾರಾಷ್ಟ್ರ) : ರಾಜ್ಯದ ಸಿಎಂ ಸೇರಿದಂತೆ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಹಾಗೂ ಎಂಎಲ್​ಸಿಗಳ ಮಾರ್ಚ್​ ತಿಂಗಳ ಶೇ 60ರಷ್ಟು ವೇತನವನ್ನು ಕಡಿತಗೊಳಿಸಲಾಗುತ್ತದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಮಹಾರಾಷ್ಟ್ರ ಡಿಸಿಎಂ ಹಾಗೂ ಹಣಕಾಸು ಸಚಿವ ಅಜಿತ್​ ಪವಾರ್ ಈ ಕುರಿತಾಗಿ ಆದೇಶಿಸಿದ್ದು ಕೊರೊನಾ ವಿರುದ್ಧ ಹೋರಾಡಲು ಈ ಹಣವನ್ನು ಸರ್ಕಾರ ಬಳಸಿಕೊಳ್ಳುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ, ಸಚಿವರು, ಎಂಎಲ್​ಎ ಸೇರಿ ಸರ್ಕಾರಿ ಆಫೀಸರ್​ ಸಂಬಳಕ್ಕೆ ತೆಲಂಗಾಣ ಸರ್ಕಾರದ ಕತ್ತರಿ

ಜನಪ್ರತಿನಿಧಿಗಳು ಮಾತ್ರವಲ್ಲದೇ ರಾಜ್ಯದ ಎ ಹಾಗೂ ಬಿ ದರ್ಜೆಯ ಅಧಿಕಾರಿಗಳ ವೇತನದ ಶೇ 50ರಷ್ಟು ಹಾಗೂ ಸಿ ದರ್ಜೆಯ ನೌಕರರ ವೇತನದ ಶೇ 25ರಷ್ಟನ್ನು ಕಡಿತಗೊಳಿಸಲಾಗುತ್ತದೆ ಎಂದು ಇದೇ ವೇಳೆ ಅವರು ತಿಳಿಸಿದ್ದಾರೆ. ಜೊತೆಗೆ ಡಿ ದರ್ಜೆಯ ನೌಕರರ ವೇತನದಲ್ಲಿ ಯಾವುದೇ ಕಡಿತ ಇರುವುದಿಲ್ಲ ಎಂದು ಈ ವೇಳೆ ಪವಾರ್​​​ ಸ್ಪಷ್ಟಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ತೆಲಂಗಾಣ ಸರ್ಕಾರ ತನ್ನ ನೌಕರರ ವೇತನವನ್ನು ಕಡಿತಗೊಳಿಸಿ ಕೊರೊನಾ ಮಹಾಮಾರಿಯ ವಿರುದ್ಧ ಹೋರಾಡುವುದಾಗಿ ತಿಳಿಸಿತ್ತು. ಈಗ ಅದೇ ದಾರಿಯನ್ನು ಮಹಾರಾಷ್ಟ್ರ ಸರ್ಕಾರ ಅನುಸರಿಸುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.