ಪ್ರತಾಪ್ಗಢ/ಉತ್ತರಪ್ರದೇಶ : ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಉತ್ತರಪ್ರದೇಶದ ಪ್ರತಾಪಗಢ ಜಿಲ್ಲೆಯಲ್ಲಿ ನಡೆದಿದೆ.
ಮೃತರೆಲ್ಲರೂ ಒಂದೇ ಗ್ರಾಮಕ್ಕೆ ಸೇರಿದವರಾಗಿದ್ದಾರೆ. ಮದುವೆ ಸಮಾರಂಭವೊಂದನ್ನು ಮುಗಿಸಿಕೊಂಡು ಹಿಂದಿರುಗುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರಲ್ಲಿ ಒಬ್ಬ ಸೈನಿಕ ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಯೋಧ ಸಂದೀಪ್ ಯಾದವ್ಗೆ ಇತ್ತೀಚೆಗಷ್ಟೇ ಮದುವೆ ನಿಶ್ಚಯವಾಗಿತ್ತು.
ಅವರು ತಮ್ಮ ಸಂಬಂಧಿಯೊಬ್ಬರ ಮದುವೆಯಲ್ಲಿ ಪಾಲ್ಗೊಳ್ಳಲು ಭಾನುವಾರ ನಾಲ್ವರು ಕುಟುಂಬಸ್ಥರೊಂದಿಗೆ ಕುಂದನ್ಪುರಕ್ಕೆ ಹೋಗಿದ್ದರು. ಅಲ್ಲಿಂದ ಗ್ರಾಮಕ್ಕೆ ವಾಪಸ್ ಆಗುವ ವೇಳೆ ಈ ಅಪಘಾತ ನಡೆದಿದೆ.
ಸೈನಿಕ ಸಂದೀಪ್ ಯಾದವ್ ಅಲ್ಲದೇ ರಾಹುಲ್ ಯಾದವ್, ಅಖಿಲೇಶ್ ಯಾದವ್, ಪಪ್ಪು ಯಾದವ್, ಸಂದೀಪ್ ಯಾದವ್ ಎಂಬುವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಶವಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ:ಸರ್ಕಾರಕ್ಕೆ ಸೆಡ್ಡು ಹೊಡೆದ ಸಾರಿಗೆ ನೌಕರರು: ಮುಷ್ಕರಕ್ಕೆ ಖಾಸಗಿ ಬಸ್ ಮಾಲೀಕರ ಒಕ್ಕೂಟ ಬೆಂಬಲ