ETV Bharat / bharat

ನವಿಲು ಕಳ್ಳತನದ ಆರೋಪ: ವ್ಯಕ್ತಿಯನ್ನ ಹೊಡೆದು ಕೊಂದ ದುಷ್ಕರ್ಮಿಗಳು!

author img

By

Published : Jul 20, 2019, 5:44 PM IST

ನವಿಲು ಕಳ್ಳತನ ಮಾಡಲು ಆಗಮಿಸಿದ್ದಾನೆ ಎಂಬ ಆರೋಪದ ಮೇಲೆ ವ್ಯಕ್ತಿಯೋರ್ವನ ಮೇಲೆ ಹಲ್ಲೆ ಮಾಡಿ, ಕೊಲೆ ಮಾಡಿರುವ ಘಟನೆ ನಡೆದಿದೆ.

ನವಿಲು ಕಳ್ಳತನದ ಆರೋಪ

ನಿಮಚ್​​(ಮಧ್ಯಪ್ರದೇಶ): ನವಿಲು ಕಳ್ಳತನ ಮಾಡುತ್ತಿದ್ದಾನೆ ಎಂಬ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ನಿಮಚ್​​ನಲ್ಲಿ ನಡೆದಿದೆ.

ವ್ಯಕ್ತಿಯನ್ನ ಹೊಡೆದು ಕೊಂದ ದುಷ್ಕರ್ಮಿಗಳು

ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 10 ಜನ ಆರೋಪಿಗಳ ಬಂಧನ ಮಾಡಿದ್ದಾರೆ. ನವಿಲು ಕಳ್ಳತನ ಮಾಡಲು ಬಂದಿದ್ದಾರೆ ಎಂದು ನಾಲ್ವರನ್ನ ಗ್ರಾಮಸ್ಥರು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಮೂವರು ತಪ್ಪಿಸಿಕೊಂಡಿದ್ದು, ಓರ್ವ ಸಿಕ್ಕಿ ಹಾಕಿಕೊಂಡಿದ್ದಾನೆ. ತಕ್ಷಣ ಆತನ ಮೇಲೆ ಸ್ಥಳೀಯರು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲು ಮಾಡಿಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿಯ ಮಗ ಹೇಳಿರುವ ಪ್ರಕಾರ ತಾವು, ಬಸ್​ನಿಂದ ಇಳಿದು ತಮ್ಮ ಊರಿಗೆ ಹೊರಟಿದ್ದರಂತೆ. ಈ ವೇಳೆ ಏಕಾಏಕಿ ಹಲ್ಲೆ ಮಾಡಿದ್ದು, ನಮ್ಮ ತಂದೆ ಯಾವುದೇ ಕಳ್ಳತನ ಮಾಡಲು ತೆರಳಿದ್ದಿಲ್ಲ ಎಂದು ತಿಳಿಸಿದ್ದಾರೆ. ಈ ಹಿಂದೆ ಸಹ ಇಂತಹ ಘಟನೆ ಇಲ್ಲಿ ನಡೆದಿತ್ತು ಎಂಬುದು ಸಹ ತಿಳಿದು ಬಂದಿದೆ.

ನಿಮಚ್​​(ಮಧ್ಯಪ್ರದೇಶ): ನವಿಲು ಕಳ್ಳತನ ಮಾಡುತ್ತಿದ್ದಾನೆ ಎಂಬ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ನಿಮಚ್​​ನಲ್ಲಿ ನಡೆದಿದೆ.

ವ್ಯಕ್ತಿಯನ್ನ ಹೊಡೆದು ಕೊಂದ ದುಷ್ಕರ್ಮಿಗಳು

ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 10 ಜನ ಆರೋಪಿಗಳ ಬಂಧನ ಮಾಡಿದ್ದಾರೆ. ನವಿಲು ಕಳ್ಳತನ ಮಾಡಲು ಬಂದಿದ್ದಾರೆ ಎಂದು ನಾಲ್ವರನ್ನ ಗ್ರಾಮಸ್ಥರು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಮೂವರು ತಪ್ಪಿಸಿಕೊಂಡಿದ್ದು, ಓರ್ವ ಸಿಕ್ಕಿ ಹಾಕಿಕೊಂಡಿದ್ದಾನೆ. ತಕ್ಷಣ ಆತನ ಮೇಲೆ ಸ್ಥಳೀಯರು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲು ಮಾಡಿಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿಯ ಮಗ ಹೇಳಿರುವ ಪ್ರಕಾರ ತಾವು, ಬಸ್​ನಿಂದ ಇಳಿದು ತಮ್ಮ ಊರಿಗೆ ಹೊರಟಿದ್ದರಂತೆ. ಈ ವೇಳೆ ಏಕಾಏಕಿ ಹಲ್ಲೆ ಮಾಡಿದ್ದು, ನಮ್ಮ ತಂದೆ ಯಾವುದೇ ಕಳ್ಳತನ ಮಾಡಲು ತೆರಳಿದ್ದಿಲ್ಲ ಎಂದು ತಿಳಿಸಿದ್ದಾರೆ. ಈ ಹಿಂದೆ ಸಹ ಇಂತಹ ಘಟನೆ ಇಲ್ಲಿ ನಡೆದಿತ್ತು ಎಂಬುದು ಸಹ ತಿಳಿದು ಬಂದಿದೆ.

Intro:Body:

ನವಿಲು ಕಳ್ಳತನದ ಆರೋಪ: ವ್ಯಕ್ತಿಯನ್ನ ಹೊಡೆದು ಕೊಂದ ದುಷ್ಕರ್ಮಿಗಳು! 



ನಿಮಚ್​​(ಮಧ್ಯಪ್ರದೇಶ): ನವಿಲು ಕಳ್ಳತನ ಮಾಡುತ್ತಿದ್ದಾನೆಂಬ ಆರೋಪದ ಮೇಲೆ ವ್ಯಕ್ತಿಯೋರ್ವನನ್ನ ಹೊಡೆದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ನಿಮಚ್​​ನಲ್ಲಿ ನಡೆದಿದೆ. 



ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 10 ಜನ ಆರೋಪಿಗಳ ಬಂಧನ ಮಾಡಿದ್ದಾರೆ. ನವಿಲು ಕಳ್ಳತನ ಮಾಡಲು ಬಂದಿದ್ದಾರೆ ಎಂದು ನಾಲ್ವರನ್ನ ಗ್ರಾಮಸ್ಥರು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಮೂವರು ತಪ್ಪಿಸಿಕೊಂಡಿದ್ದು, ಓರ್ವ ಸಿಕ್ಕಿ ಹಾಕಿಕೊಂಡಿದ್ದಾನೆ. ತಕ್ಷಣ ಆತನ ಮೇಲೆ ಸ್ಥಳೀಯರು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಆತನನ್ನು ಆಸ್ಪತ್ರೆಗೆ ದಾಖಲು ಮಾಡಿಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. 



ಮೃತ ವ್ಯಕ್ತಿಯ ಮಗ ಹೇಳಿರುವ ಪ್ರಕಾರ ತಾವು, ಬಸ್​ನಿಂದ ಇಳಿದು ತಮ್ಮ ಊರಿಗೆ ಹೊರಟಿದ್ದರಂತೆ. ಈ ವೇಳೆ ಏಕಾಏಕಿ ಹಲ್ಲೆ ಮಾಡಿದ್ದು, ನಮ್ಮ ತಂದೆ ಯಾವುದೇ ಕಳ್ಳತನ ಮಾಡಲು ತೆರಳಿದ್ದಿಲ್ಲ ಎಂದು ತಿಳಿಸಿದ್ದಾರೆ. ಈ ಹಿಂದೆ ಸಹ ಇಂತಹ ಘಟನೆ ಇಲ್ಲಿ ನಡೆದಿತ್ತು ಎಂಬುದು ಸಹ ತಿಳಿದು ಬಂದಿದೆ. 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.