ETV Bharat / bharat

ಅಕ್ರಮ ಸಂಬಂಧ ಶಂಕೆ: ಪತ್ನಿ,ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿರುವ ಪತಿ, ತನ್ನಿಬ್ಬರು ಮಕ್ಕಳು ಮತ್ತು ಹೆಂಡತಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

author img

By

Published : Feb 29, 2020, 9:32 AM IST

Man kills family later hangs himself,ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ
ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಘಾಜಿಯಾಬಾದ್‌ (ಉತ್ತರ ಪ್ರದೇಶ): ಹೆಂಡತಿ ಮತ್ತು ಮಕ್ಕಳನ್ನು ಕೊಲೆಗೈದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ.

  • Ghaziabad: Bodies of four persons found in a house in Arthala area; Police has recovered a suicide note, further investigation underway

    — ANI UP (@ANINewsUP) February 28, 2020 " class="align-text-top noRightClick twitterSection" data=" ">

ಘಾಜಿಯಾಬಾದ್‌ನ ಅರ್ಥಲಾ ಪ್ರದೇಶದಲ್ಲಿನ ನಿವಾಸದಲ್ಲಿ ವ್ಯಕ್ತಿ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಂದಿದ್ದಾನೆ. ಆರೋಪಿಯನ್ನು ಧೀರಜ್ ತ್ಯಾಗಿ (27) ಎಂದು ಗುರುತಿಸಲಾಗಿದ್ದು, ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಕಾಜಲ್ ತ್ಯಾಗಿ (ಹೆಂಡತಿ), ಮಕ್ಕಳು ಏಕ್ತಾ ಮತ್ತು ಧ್ರುವ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಪತ್ರ ಬರೆದಿದ್ದು, ಈ ಪತ್ರದಲ್ಲಿ ವಿವಾಹದ ನಂತರವೂ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಳು ಎಂದು ಧೀರಜ್ ಆರೋಪಿಸಿದ್ದಾನೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಘಾಜಿಯಾಬಾದ್‌ (ಉತ್ತರ ಪ್ರದೇಶ): ಹೆಂಡತಿ ಮತ್ತು ಮಕ್ಕಳನ್ನು ಕೊಲೆಗೈದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ.

  • Ghaziabad: Bodies of four persons found in a house in Arthala area; Police has recovered a suicide note, further investigation underway

    — ANI UP (@ANINewsUP) February 28, 2020 " class="align-text-top noRightClick twitterSection" data=" ">

ಘಾಜಿಯಾಬಾದ್‌ನ ಅರ್ಥಲಾ ಪ್ರದೇಶದಲ್ಲಿನ ನಿವಾಸದಲ್ಲಿ ವ್ಯಕ್ತಿ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಂದಿದ್ದಾನೆ. ಆರೋಪಿಯನ್ನು ಧೀರಜ್ ತ್ಯಾಗಿ (27) ಎಂದು ಗುರುತಿಸಲಾಗಿದ್ದು, ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಕಾಜಲ್ ತ್ಯಾಗಿ (ಹೆಂಡತಿ), ಮಕ್ಕಳು ಏಕ್ತಾ ಮತ್ತು ಧ್ರುವ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಪತ್ರ ಬರೆದಿದ್ದು, ಈ ಪತ್ರದಲ್ಲಿ ವಿವಾಹದ ನಂತರವೂ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಳು ಎಂದು ಧೀರಜ್ ಆರೋಪಿಸಿದ್ದಾನೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.