ಮಣಿಪುರ: ಕೋವಿಡ್ 19 ವಿರುದ್ಧ ಇಡೀ ದೇಶವೇ ಸಮರ ಸಾರಿದ್ದು ರಾಜ್ಯದ ಆಯಾ ಸರ್ಕಾರಗಳು ತಮ್ಮ ಪ್ರಜೆಗಳ ರಕ್ಷಣೆಗೆ ಭಾರೀ ಕಾರ್ಯೋನ್ಮುಖವಾಗಿವೆ. ಈ ಹಿನ್ನೆಲೆ ದೇಶದ ಇತರ ಭಾಗಗಳಲ್ಲಿ ಸಿಲುಕಿರುವ ಮಣಿಪುರದ ಪ್ರಜೆಗಳ ರಕ್ಷಣೆಗೆ ಅಲ್ಲಿನ ಸರ್ಕಾರ ವೆಬ್ಸೈಟ್ ಒಂದನ್ನು ಆರಂಭಮಾಡಿದೆ.
ಮುಖ್ಯಮಂತ್ರಿ ಎನ್ ಬಿರೆನ್ಸಿಂಗ್ ಭಾನುವಾರ ಈ ವೆಬ್ಸೈಟ್ಗೆ ಚಾಲನೆ ನೀಡಿದ್ದಾರೆ. ಇನ್ನು ಈ ವೆಬ್ಸೈಟ್ ಮುಖಾಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡಬಹುದಾಗಿದೆ. ಹಾಗೆಯೇ ಇಲ್ಲಿಗೆ ಬಂದ ಹಣವನ್ನು ಅಗತ್ಯ ಇರುವವರಿಗೆ ನೀಡಲು ಈ ವೆಬ್ಸೈಟ್ ಸಹಕಾರಿಯಾಗಲಿದೆ.
ಈ ಕಷ್ಟದ ಸಮಯದಲ್ಲಿ ಬೇರೆ ಕಡೆ ಸಿಕ್ಕಿಹಾಕಿಕೊಂಡಿರುವ ಮತ್ತು ಹಲವಾರು ತೊಂದರೆ ಎಎದುರಿಸುತ್ತಿರುವ ನಮ್ಮ ಸಹೋದರರು ಮತ್ತು ಸಹೋದರಿಯರನ್ನು ತಲುಪುವುದು ಇದರ ಉದ್ದೇಶ ಎಂದು ಸಿಎಂ ಹೇಳಿದ್ದಾರೆ.