ETV Bharat / bharat

ಕೆಂಪುಕೋಟೆಗೆ ಹಾನಿ, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ ಧ್ವಂಸ; 83 ಪೊಲೀಸರಿಗೆ ಗಾಯ

author img

By

Published : Jan 26, 2021, 7:20 PM IST

Updated : Jan 26, 2021, 8:47 PM IST

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸೆಯ ಸ್ವರೂಪ ಪಡೆದುಕೊಂಡ ಪರಿಣಾಮ, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ.

public properties damaged
public properties damaged

ನವದೆಹಲಿ: ಕೃಷಿ ಕಾನೂನು ವಿರೋಧಿಸಿ ನವದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್​ ಪರೇಡ್​ ಹಿಂಸೆಗೆ ತಿರುಗಿದ್ದು, ಸಂಘರ್ಷದ ವೇಳೆ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಗೆ ಹಾನಿಯಾಗಿದೆ.

ಪೊಲೀಸರು ಹಾಕಿರುವ ಬ್ಯಾರಿಕೇಡ್‌ಗಳನ್ನು ತಳ್ಳಿ ದೆಹಲಿಯ ಪೀರಗಾರಿ ಚೌಕ್‌ ನಿಂದ ಪಂಜಾಬ್‌ ಬಾಗ್‌ನತ್ತ ಮುನ್ನುಗ್ಗುತ್ತಿರುವ ಪ್ರತಿಭಟನಾನಿರತ ರೈತರು

ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಅನೇಕ ಸಮಾಜಘಾತುಕ ಶಕ್ತಿಗಳು ಭಾಗಿಯಾಗಿ ಹಿಂಸಾಚಾರಕ್ಕೆ ಕಾರಣವಾಗಿವೆ ಎಂದು ರೈತ ಸಂಘಟನೆಗಳು ಹೇಳುತ್ತಿವೆ.

ಇದನ್ನೂ ಓದಿ: ರಣರಂಗವಾಯ್ತು ದಿಲ್ಲಿ: ಪೀರಗರಿ ಚೌಕ್‌ನಲ್ಲಿ ಪೊಲೀಸ್ ಬ್ಯಾರಿಕೇಡ್ ಮುರಿದು ನುಗ್ಗಿದ ರೈತರು

ಅಪಾರ ಪ್ರಮಾಣದ ಆಸ್ತಿ ಹಾನಿ:

ಪ್ರತಿಭಟನಾಕಾರರು ಕೆಂಪುಕೋಟೆಗೆ ಲಗ್ಗೆ ಹಾಕಿ ಸಿಖ್ಖರ ಖಾಲ್ಸಾ ಬಾವುಟ ಹಾರಿಸಿದ್ದಾರೆ. ಈ ವೇಳೆ ಐತಿಹಾಸಿಕ ಸ್ಮಾರಕವಾದ ಕೆಂಪುಕೊಟೆಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಹೇಳಲಾಗಿದೆ.

ಇದನ್ನು ಹೊರತುಪಡಿಸಿದಂತೆ, ಸರ್ಕಾರಿ ಬಸ್ಸುಗಳು, ಬಸ್‌ ನಿಲ್ದಾಣಗಳು​, ಮೆಟ್ರೋ ನಿಲ್ದಾಣಗಳಿಗೂ ಪ್ರತಿಭಟನಾಕಾರರು ನುಗ್ಗಿರುವ ಕಾರಣ ಹಾನಿ ಸಂಭವಿಸಿದೆ. ಸರ್ಕಾರಿ ಬಸ್‌ವೊಂದನ್ನು ಸುಟ್ಟು ಹಾಕಲಾಗಿದೆ. ಪೊಲೀಸರು ಹಾಕಿದ ಬ್ಯಾರಿಕೇಡ್‌ಗಳನ್ನು ಮುರಿದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

83 ಪೊಲೀಸರಿಗೆ ಗಾಯ

ಪ್ರತಿಭಟನೆ ವೇಳೆ ಕೆಲ ದುಷ್ಕರ್ಮಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಹೀಗಾಗಿ 83 ಮಂದಿ ಪೊಲೀಸ್‌ ಸಿಬ್ಬಂದಿ ಗಾಯಗೊಂಡು ವಿವಿಧ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಅಮಿತ್ ಶಾ ತುರ್ತು ಸಭೆ

ಟ್ರ್ಯಾಕ್ಟರ್ ಪರೇಡ್​ ಹಿಂಸಾತ್ಮತ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದರು. ಈ ವೇಳೆ ದೆಹಲಿಯಲ್ಲಿ ಪ್ಯಾರಾ ಮಿಲಿಟರಿ ನಿಯೋಜನೆ ಮಾಡುವಂತೆಯೂ ಅವರು ಆದೇಶ ಹೊರಡಿಸಿದ್ದಾರೆ.

ಇನ್ನು ದೆಹಲಿಯ 11 ಮೆಟ್ರೊ ನಿಲ್ದಾಣಗಳನ್ನು ಮೆಟ್ರೊ ಸೇವೆ ಸ್ಥಗಿತಗೊಂಡಿದ್ದು, ಇಂಟರ್​ನೆಟ್​ ಸೇವೆಯನ್ನೂ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ನವದೆಹಲಿ: ಕೃಷಿ ಕಾನೂನು ವಿರೋಧಿಸಿ ನವದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್​ ಪರೇಡ್​ ಹಿಂಸೆಗೆ ತಿರುಗಿದ್ದು, ಸಂಘರ್ಷದ ವೇಳೆ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಗೆ ಹಾನಿಯಾಗಿದೆ.

ಪೊಲೀಸರು ಹಾಕಿರುವ ಬ್ಯಾರಿಕೇಡ್‌ಗಳನ್ನು ತಳ್ಳಿ ದೆಹಲಿಯ ಪೀರಗಾರಿ ಚೌಕ್‌ ನಿಂದ ಪಂಜಾಬ್‌ ಬಾಗ್‌ನತ್ತ ಮುನ್ನುಗ್ಗುತ್ತಿರುವ ಪ್ರತಿಭಟನಾನಿರತ ರೈತರು

ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಅನೇಕ ಸಮಾಜಘಾತುಕ ಶಕ್ತಿಗಳು ಭಾಗಿಯಾಗಿ ಹಿಂಸಾಚಾರಕ್ಕೆ ಕಾರಣವಾಗಿವೆ ಎಂದು ರೈತ ಸಂಘಟನೆಗಳು ಹೇಳುತ್ತಿವೆ.

ಇದನ್ನೂ ಓದಿ: ರಣರಂಗವಾಯ್ತು ದಿಲ್ಲಿ: ಪೀರಗರಿ ಚೌಕ್‌ನಲ್ಲಿ ಪೊಲೀಸ್ ಬ್ಯಾರಿಕೇಡ್ ಮುರಿದು ನುಗ್ಗಿದ ರೈತರು

ಅಪಾರ ಪ್ರಮಾಣದ ಆಸ್ತಿ ಹಾನಿ:

ಪ್ರತಿಭಟನಾಕಾರರು ಕೆಂಪುಕೋಟೆಗೆ ಲಗ್ಗೆ ಹಾಕಿ ಸಿಖ್ಖರ ಖಾಲ್ಸಾ ಬಾವುಟ ಹಾರಿಸಿದ್ದಾರೆ. ಈ ವೇಳೆ ಐತಿಹಾಸಿಕ ಸ್ಮಾರಕವಾದ ಕೆಂಪುಕೊಟೆಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಹೇಳಲಾಗಿದೆ.

ಇದನ್ನು ಹೊರತುಪಡಿಸಿದಂತೆ, ಸರ್ಕಾರಿ ಬಸ್ಸುಗಳು, ಬಸ್‌ ನಿಲ್ದಾಣಗಳು​, ಮೆಟ್ರೋ ನಿಲ್ದಾಣಗಳಿಗೂ ಪ್ರತಿಭಟನಾಕಾರರು ನುಗ್ಗಿರುವ ಕಾರಣ ಹಾನಿ ಸಂಭವಿಸಿದೆ. ಸರ್ಕಾರಿ ಬಸ್‌ವೊಂದನ್ನು ಸುಟ್ಟು ಹಾಕಲಾಗಿದೆ. ಪೊಲೀಸರು ಹಾಕಿದ ಬ್ಯಾರಿಕೇಡ್‌ಗಳನ್ನು ಮುರಿದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

83 ಪೊಲೀಸರಿಗೆ ಗಾಯ

ಪ್ರತಿಭಟನೆ ವೇಳೆ ಕೆಲ ದುಷ್ಕರ್ಮಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಹೀಗಾಗಿ 83 ಮಂದಿ ಪೊಲೀಸ್‌ ಸಿಬ್ಬಂದಿ ಗಾಯಗೊಂಡು ವಿವಿಧ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಅಮಿತ್ ಶಾ ತುರ್ತು ಸಭೆ

ಟ್ರ್ಯಾಕ್ಟರ್ ಪರೇಡ್​ ಹಿಂಸಾತ್ಮತ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದರು. ಈ ವೇಳೆ ದೆಹಲಿಯಲ್ಲಿ ಪ್ಯಾರಾ ಮಿಲಿಟರಿ ನಿಯೋಜನೆ ಮಾಡುವಂತೆಯೂ ಅವರು ಆದೇಶ ಹೊರಡಿಸಿದ್ದಾರೆ.

ಇನ್ನು ದೆಹಲಿಯ 11 ಮೆಟ್ರೊ ನಿಲ್ದಾಣಗಳನ್ನು ಮೆಟ್ರೊ ಸೇವೆ ಸ್ಥಗಿತಗೊಂಡಿದ್ದು, ಇಂಟರ್​ನೆಟ್​ ಸೇವೆಯನ್ನೂ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

Last Updated : Jan 26, 2021, 8:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.